ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ರಾಷ್ಟ್ರೀಯ ಕ್ರೀಡಾದಿನ
ಮೈಸೂರು : ಕ್ರೀಡಾ ಸಂಸ್ಕೃತಿಯನ್ನು ಇಂದಿನ ಯುವ ಜನತೆಯಲ್ಲಿ ಹೆಚ್ಚಿಸುವ ಮತ್ತು ಪ್ರೋತ್ಸಾಹಿಸುವ ಸಲುವಾಗಿ ಶ್ರೇಷ್ಠ ಹಾಕಿ ಪಟು ಮೇಜರ್ ಧ್ಯಾನ್ ಚಂದ್ ಅವರ ಸ್ಮರಣಾರ್ಥವಾಗಿ ಇದೇ ತಿಂಗಳ ಆ. 29 ರಂದು ನಗರದ ಯಾದವಗಿರಿಯಲ್ಲಿರುವ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾದಿನವನ್ನು ಆಚರಣೆ ಮಾಡಲಾಗುತ್ತಿದೆ.
ಹಾಕಿ ಮಾಂತ್ರಿಕ ಧ್ಯಾನ ಚಂದ್ ಸ್ಮರಣಾರ್ಥವಾಗಿ ಕೇಂದ್ರ ಸರ್ಕಾರದ ಕ್ರೀಡಾ ಮತ್ತು ಯುವಜನ ವ್ಯವಹಾರ ವಿಭಾಗವು ಈ ಆಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ meet the champion ಎಂಬ ವಿಶೇಷ ಕಾರ್ಯಕ್ರಮವನ್ನು ಸಹ ಭಾರತೀಯ ಕ್ರೀಡಾ ಪ್ರಾಧಿಕಾರಿವು ಆಯೋಜಿಸಿದೆ. ಈ ಕಾರ್ಯಕ್ರಮವು ಭಾರತದಾದ್ಯಂತ ಏಕ ಕಾಲದಲ್ಲಿ 25 ಸ್ಥಳಗಳಲ್ಲಿ ಕಾರ್ಯಕ್ರಮವು ಬೆಳಿಗ್ಗೆ 10 ರಿಂದ 11.30 ರವರೆಗೆ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಾಂಪಿಯನ್ ಕ್ರೀಡಾಪಟು ಮತ್ತು ಅಂತರರಾಷ್ಟ್ರೀಯ ಪ್ಯಾರಾ ಈಜುಗಾರರಾದ ನಿರಂಜನ್ ಮುಕುಂದನ್ ಅವರು ಭಾಗವಹಿಸಲಿದ್ದಾರೆ. ಆ ದಿನ ಶಾಲೆಯ ವಿದ್ಯಾರ್ಥಿಗಳು ಭವ್ಯ ಸ್ವಾಗತವನ್ನು ಕೋರಲಿದ್ದಾರೆ.ನಂತರ ಈಜುಕೊಳದ ಬಳಿ ಹಲವು ಈಜು ಪಟುಗಳು ತಮ್ಮ ಕೌಶಲ್ಯಗಳನ್ನು ಪ್ರದರ್ಶನ ಮಾಡಲಿದ್ದಾರೆ. ಬಳಿಕ ವಿದ್ಯಾರ್ಥಿಗಳ ಕುರಿತು ಭಾಷಣ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ.ಇದರ ಜೊತೆಗೆ ಕ್ರೀಡೆ ಸಂಬಂಧಿಸಿದಂತೆ ಪ್ರಶ್ನಾವಳಿ ಕಾರ್ಯಕ್ರಮವು ನಡೆಯಲಿದೆ. ವಿಜೇತರಾದ ಒಟ್ಟು ಐವರು ವಿದ್ಯಾರ್ಥಿಗಳಿಗೆ ಅತಿಥಿಗಳ ಹಸ್ತಾಕ್ಷರ ಹೊಂದಿರುವ ಒಂದು ಒಲಂಪಿಕ್ ಜರ್ಸಿಯನ್ನು ಬಹುಮಾನವಾಗಿ ನೀಡಲಾಗುವುದು.
ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…
ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…
ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…
ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…