ಜಿಲ್ಲೆಗಳು

ಮೈಸೂರು : ಆ. 29ಕ್ಕೆ ಹಾಕಿ ಮಾಂತ್ರಿಕನ ಸ್ಮರಣೆ

ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ರಾಷ್ಟ್ರೀಯ ಕ್ರೀಡಾದಿನ

ಮೈಸೂರು : ಕ್ರೀಡಾ ಸಂಸ್ಕೃತಿಯನ್ನು ಇಂದಿನ ಯುವ ಜನತೆಯಲ್ಲಿ ಹೆಚ್ಚಿಸುವ ಮತ್ತು ಪ್ರೋತ್ಸಾಹಿಸುವ ಸಲುವಾಗಿ ಶ್ರೇಷ್ಠ ಹಾಕಿ ಪಟು ಮೇಜರ್‌ ಧ್ಯಾನ್‌ ಚಂದ್‌ ಅವರ ಸ್ಮರಣಾರ್ಥವಾಗಿ ಇದೇ ತಿಂಗಳ ಆ. 29 ರಂದು ನಗರದ ಯಾದವಗಿರಿಯಲ್ಲಿರುವ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾದಿನವನ್ನು ಆಚರಣೆ ಮಾಡಲಾಗುತ್ತಿದೆ. 

ಹಾಕಿ ಮಾಂತ್ರಿಕ ಧ್ಯಾನ ಚಂದ್‌ ಸ್ಮರಣಾರ್ಥವಾಗಿ ಕೇಂದ್ರ ಸರ್ಕಾರದ ಕ್ರೀಡಾ ಮತ್ತು ಯುವಜನ  ವ್ಯವಹಾರ ವಿಭಾಗವು ಈ ಆಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ meet the champion ಎಂಬ ವಿಶೇಷ ಕಾರ್ಯಕ್ರಮವನ್ನು ಸಹ ಭಾರತೀಯ ಕ್ರೀಡಾ ಪ್ರಾಧಿಕಾರಿವು ಆಯೋಜಿಸಿದೆ. ಈ ಕಾರ್ಯಕ್ರಮವು ಭಾರತದಾದ್ಯಂತ ಏಕ ಕಾಲದಲ್ಲಿ 25 ಸ್ಥಳಗಳಲ್ಲಿ ಕಾರ್ಯಕ್ರಮವು ಬೆಳಿಗ್ಗೆ 10 ರಿಂದ 11.30 ರವರೆಗೆ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಾಂಪಿಯನ್‌ ಕ್ರೀಡಾಪಟು ಮತ್ತು ಅಂತರರಾಷ್ಟ್ರೀಯ ಪ್ಯಾರಾ ಈಜುಗಾರರಾದ ನಿರಂಜನ್‌ ಮುಕುಂದನ್‌ ಅವರು ಭಾಗವಹಿಸಲಿದ್ದಾರೆ. ಆ ದಿನ ಶಾಲೆಯ ವಿದ್ಯಾರ್ಥಿಗಳು ಭವ್ಯ ಸ್ವಾಗತವನ್ನು ಕೋರಲಿದ್ದಾರೆ.ನಂತರ ಈಜುಕೊಳದ ಬಳಿ ಹಲವು ಈಜು ಪಟುಗಳು ತಮ್ಮ ಕೌಶಲ್ಯಗಳನ್ನು ಪ್ರದರ್ಶನ ಮಾಡಲಿದ್ದಾರೆ. ಬಳಿಕ ವಿದ್ಯಾರ್ಥಿಗಳ ಕುರಿತು ಭಾಷಣ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ.ಇದರ ಜೊತೆಗೆ ಕ್ರೀಡೆ ಸಂಬಂಧಿಸಿದಂತೆ  ಪ್ರಶ್ನಾವಳಿ ಕಾರ್ಯಕ್ರಮವು ನಡೆಯಲಿದೆ. ವಿಜೇತರಾದ ಒಟ್ಟು ಐವರು ವಿದ್ಯಾರ್ಥಿಗಳಿಗೆ ಅತಿಥಿಗಳ ಹಸ್ತಾಕ್ಷರ ಹೊಂದಿರುವ ಒಂದು ಒಲಂಪಿಕ್‌ ಜರ್ಸಿಯನ್ನು ಬಹುಮಾನವಾಗಿ ನೀಡಲಾಗುವುದು.

 

andolanait

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

5 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

9 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago