ಮೈಸೂರು: ನಗರದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕರ್ತವ್ಯದಲ್ಲಿದ್ದ ಟೆಕ್ಕಿಯೊಬ್ಬರು ಶನಿವಾರ ತಾನಿದ್ದ ಕೋಣೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ.
ಚೆನೈನ ರಾಹುಲ್ (27) ಎಂಬವರೇ ಸಾವಿಗೆ ಶರಣಾಗಿರುವ ವ್ಯಕ್ತಿ. ಮೂಲತಃ ತಮಿಳುನಾಡಿನವರಾದ ರಾಹುಲ್ ಅವರು, ನಗರದ ಎಲ್ ಆಂಡ್ ಟಿ ಕಂಪನಿಯಲ್ಲಿ ಕರ್ತವ್ಯದಲ್ಲಿದ್ದರು. ಅಲ್ಲದೇ, ಹೆಬ್ಬಾಳದ ಮಾದೇಗೌಡ ವೃತ್ತದಲ್ಲಿ ರೂಮ್ ಮಾಡಿಕೊಂಡು ವಾಸವಿದ್ದರು. ಶನಿವಾರ ಮನೆಯವರಿಂದ ಸಾಕಷ್ಟು ಬಾರಿ ಕರೆ ಮಾಡಿದರೂ, ಕರೆಯನ್ನು ಸ್ವೀಕರಿಸದೆ ಇದ್ದಾಗ, ಮನೆಯವರು ಕಂಪನಿಯ ಎಚ್ಆರ್ಗೆ ಕರೆ ಮಾಡಿ, ಮಾಹಿತಿ ತಿಳಿಸಿದ್ದಾರೆ. ರಾತ್ರಿ 11.30ರ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಶನಿವಾರ ಬೆಳಿಗ್ಗೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ನಗರದ ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





