ಜಿಲ್ಲೆಗಳು

ಮೈಸೂರು: ಮಾದಕ ವಸ್ತು ಹೊಂದಿದ್ದ ಮೂವರ ಬಂಧನ

1.20 ಲಕ್ಷ ರೂ. ಮೌಲ್ಯದ 24 ಗ್ರಾಂ ತೂಕದ ವಾದಕ ವಸ್ತು, 2 ದ್ವಿಚಕ್ರ ವಾಹನ, 2 ಲ್ಯಾಪ್‌ಟ್ಯಾಪ್, 5 ಮೊಬೈಲ್ ಫೋನ್ ವಶ

ಮೈಸೂರು: ಮಾದಕ ವಸ್ತುಗಳನ್ನು ಹೊಂದಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಆರೋಪಿಗಳಿಂದ 1.20 ಲಕ್ಷ ರೂ. ಮೌಲ್ಯದ 24 ಗ್ರಾಂ ತೂಕದ ಮಾದಕ ವಸ್ತು, 2 ದ್ವಿಚಕ್ರ ವಾಹನ, 2 ಲ್ಯಾಪ್‌ಟ್ಯಾಪ್ ಹಾಗೂ 5 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಸಿಸಿಬಿ ಘಟಕದ ಪೊಲೀಸರು ಮತ್ತು ಸೆನ್ ಕ್ರೈಂ ಪೊಲೀಸರು ಭಾನುವಾರ ಜಂಟಿಯಾಗಿ ನಗರದ ಬೋಗಾದಿ ಬಳಿಯ ಎಸ್.ಎಂ.ಬಡಾವಣೆ ಬಳಿ ಇರುವ ಮನೆಯೊಂದರ ಮೇಲೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿಗಳು ಮೈಸೂರಿನ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು, ಬೆಂಗಳೂರಿನಲ್ಲಿ ವಾಸವಿರುವ ಕೇರಳ ಮೂಲದ ವ್ಯಕ್ತಿಗಳಿಂದ ಕಡಿಮೆ ಬೆಲೆಗೆ ಮಾದಕ ವಸ್ತು ಖರೀದಿಸಿ ತಂದು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ವಾಡುತ್ತಿದ್ದರು ಎಂದು ತಿಳಿದರು ಬಂದಿದೆ.

ಸಿಸಿಬಿ ಘಟಕದ ಪೊಲೀಸ್ ಇನ್‌ಸ್ಪೆಕ್ಟರ್ ಜಿ.ಶೇಖರ್, ಸಿಬ್ಬಂದಿಗಳಾದ ಸಲೀಂಖಾನ್, ಪಿ.ಎನ್.ಲಕ್ಷ್ಕೀಕಾಂತ, ಪ್ರಕಾಶ್, ಸೆನ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಜಯಕುವಾರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

 

 

andolana

Recent Posts

ಈಶಾ ಫೌಂಡೇಶನ್‌ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್‌ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…

3 hours ago

ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಮತ್ತೆ ವಾಗ್ದಾಳಿ

ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ…

3 hours ago

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನಕ್ಕೆ ಭಾರತದ ಪ್ರತಿನಿಧಿಯಾಗಿ ಸ್ಪೀಕರ್‌ ಓಂ ಬಿರ್ಲಾ

ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್‌ ರೆಹಮಾನ್‌ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್‌…

4 hours ago

ಕೆನಡಾದಲ್ಲಿ ಹತ್ಯೆಯಾಗಿದ್ದ ಐಟಿ ಉದ್ಯೋಗಿ ಚಂದನ್‌ ಮೃತದೇಹ ಸ್ವಗ್ರಾಮಕ್ಕೆ

ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್‌ ಕುಮಾರ್‌ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್‌…

4 hours ago

ಕೋಲಾರದಲ್ಲಿ ನಾಳೆ ಟಾಟಾ ಹೆಲಿಕಾಪ್ಟರ್‌ ಘಟಕ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ ಏರ್‌ಬಸ್‌ ಲಘು ಹೆಲಿಕಾಪ್ಟರ್‌ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…

4 hours ago

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

13 hours ago