ಜಿಲ್ಲೆಗಳು

ಮೈಸೂರು-ಚೆನ್ನೈ ನಡುವೆ ಶೀಘ್ರ ವಂದೇ ಭಾರತ ಎಕ್ಸ್‌ಪ್ರೆಸ್

ಮೈಸೂರು: ಮೈಸೂರು-ಚೆನ್ನೈ ನಡುವೆ ಶೀಘ್ರ ವಂದೇ ಭಾರತ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭವಾಗಲಿದೆ.

ದಕ್ಷಿಣ ಭಾರತದಲ್ಲಿ ಅತೀ ವೇಗವಾಗಿ ಸಂಚರಿಸುವ ದೇಶದ ಮೊಟ್ಟ ಮೊದಲ ರೈಲು ಇದಾಗಿದ್ದು, ಗಂಟೆಗೆ ೭೪ ಕಿಮೀ ವೇಗದಲ್ಲಿ ಸಂಚರಿಸುವ ಈ ಎಕ್ಸ್‌ಪ್ರೆಸ್ ರೈಲು ಮೈಸೂರು-ಚೆನ್ನೈ ನಡುವಿನ ೪೯೭ ಕಿಮೀ ದೂರವನ್ನು ಕೇವಲ ೬ ಗಂಟೆ ೪೦ ನಿಮಿಷಗಳಲ್ಲಿ ಕ್ರಮಿಸಲಿದೆ.

ಚೆನ್ನೈ ಸೆಂಟ್ರಲ್-ಬೆಂಗಳೂರು ನಗರ-ಮೈಸೂರು ನಗರ ಜಂಕ್ಷನ್ ನಡುವೆ ಈ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿದೆ. ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಬೆಳಿಗ್ಗೆ ೫.೫೦ಕ್ಕೆ ಹೊರಟು ಬೆಳಿಗ್ಗೆ ೧೦.೨೫ಕ್ಕೆ ಬೆಂಗಳೂರಿನ ಕೆಎಸ್‌ಆರ್ ರೈಲು ನಿಲ್ದಾಣವನ್ನು ತಲುಪಲಿದೆ. ಬೆಳಿಗ್ಗೆ ೧೦.೩೦ಕ್ಕೆ ಕೆಎಸ್‌ಆರ್ ರೈಲು ನಿಲ್ದಾಣದಿಂದ ಹೊರಟು ಮಧ್ಯಾಹ್ನ ೧೨.೩೦ಕ್ಕೆ ಮೈಸೂರು ಜಂಕ್ಷನ್ ತಲುಪಲಿದೆ. ಮಧ್ಯಾಹ್ನ ೧.೦೫ಕ್ಕೆ ಮೈಸೂರು ಜಂಕ್ಷನ್‌ನಿಂದ ಹೊರಟು, ಮಧ್ಯಾಹ್ನ ೨.೫೫ಕ್ಕೆ ಕೆಎಸ್‌ಆರ್ ಬೆಂಗಳೂರು ನಿಲ್ದಾಣ ತಲುಪಿ ೩ ಗಂಟೆಗೆ ಅಲ್ಲಿಂದ ಹೊರಟು ರಾತ್ರಿ ೭.೩೫ಕ್ಕೆ ಚೆನ್ನೈ ಸೆಂಟ್ರಲ್ ನಿಲ್ದಾಣವನ್ನು ತಲುಪಲಿದೆ. ಬುಧವಾರ ಹೊರತುಪಡಿಸಿ ವಾರದಲ್ಲಿ ಆರು ದಿನಗಳ ಕಾಲ ಈ ರೈಲು ಸಂಚರಿಸಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ ಎರಡನೇ ವಾರದಲ್ಲಿ ಈ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.

andolanait

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

2 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

3 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

4 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

6 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

7 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

9 hours ago