ಜಿಲ್ಲೆಗಳು

ಮೈಸೂರಿನಲ್ಲಿ ನಾಳೆ ಅಂತರಾಷ್ಟ್ರೀಯ ‘ಅನ್ ಲೀಷ್- 22’ ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು : ಸಾಂಸ್ಕೃತಿಕ ನಗರಿಯಲ್ಲಿ ನಾಳೆ ಅಂತರಾಷ್ಟ್ರೀಯ ಕಾರ್ಯಕ್ರಮ ‘ಅನ್ ಲೀಸ್- 22’ಕ್ಕೆ ಶನಿವಾರ ಚಾಲನೆ ದೊರೆಯಲಿದೆ.

ವಿಶ್ವಸಂಸ್ಥೆಯ ಸುಸ್ಥಿರ ಬೆಳವಣಿಗೆ ಗುರಿಗಳನ್ನು ಕಾರ್ಯರೂಪಕ್ಕೆ ತರಲು ಉದ್ದೇಶ ಹೊಂದಿದ ಅಂತರಾಷ್ಟ್ರೀಯ ಕಾರ್ಯಕ್ರಮ ‘ಅನ್ ಲೀಷ್- 22’ ಕ್ಕೆ ಸಾಕ್ಷಿಯಾಗಲು ಅರಮನೆ ನಗರಿ ಸ್ವಜ್ಜಾಗಿದೆ. ಒಂದು ವಾರ ಕಾಲ ಇಲ್ಲಿನ‌ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಶನಿವಾರ (ಡಿಸೆಂಬರ್ 3) ಮಧ್ಯಾಹ್ನ ನೆರವೇರಲಿದ್ದು, ಗ್ರೀನ್ ಲ್ಯಾಂಡ್ ಪ್ರಧಾನ ಮಂತ್ರಿ ಮ್ಯೂಟೆ ಬೌರುಪ್ ಎಜೆಡೆ ಅವರು ಉದ್ಘಾಟನಾ ಕಾರ್ಯಕ್ರಮವನನ್ನು ಉದ್ದೇಶಿಸಿ ವಿಡಿಯೋ ಸಂದೇಶ ನೀಡಲಿದ್ದಾರೆ. ಐಟಿ/ಬಿಟಿ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ ಅವರು ಸ್ವಾಗತ ಭಾಷಣ ಮಾಡಲಿದ್ದಾರೆ.

ಪ್ರಪಂಚದ 101 ರಾಷ್ಟ್ರಗಳ 993 ಪ್ರತಿಭಾವಂತ ತಂತ್ರಜ್ಞರು, ಇದರಲ್ಲಿ ಭಾಗವಹಿಸುತ್ತಿದ್ದಾರೆ. ಈ ಪೈಕಿ, 515 ಜನ ವಿದೇಶಗಳಿಗೆ ಸೇರಿದವರಾಗಿದ್ದರೆ, 478 ಜನ ಭಾರತೀಯರು. ಇವರಲ್ಲಿ ಸ್ಟಾರ್ಟಪ್ ಸಿಟಿ ಬೆಂಗಳೂರಿನ 90 ಮಂದಿ ಹಾಗೂ ಬೆಂಗಳೂರಿಗೆ ಹೊರತಾದ ಭಾಗದ 19 ಮಂದಿ ಇದ್ದಾರೆ.

ಉತ್ತಮ ಆರೋಗ್ಯ ಮತ್ತು ಸ್ವಾಸ್ಥ್ಯ,ಗುಣಮಟ್ಟದ ಶಿಕ್ಷಣ, ಶುದ್ಧನೀರು ಹಾಗೂ ನೈರ್ಮಲ್ಯ, ಸುಲಭ ದರದ ಸ್ವಚ್ಛ ಇಂಧನ, ಹವಾಮಾನ ವೈಪರೀತ್ಯ ಇವು ಕಾರ್ಯಕ್ರಮದ ಮುಖ್ಯ ವಿಷಯಗಳಾಗಿರುತ್ತವೆ. ಪಾಲ್ಗೊಳ್ಳುವ ಅಭ್ಯರ್ಥಿಗಳನ್ನು ಸಣ್ಣ ಸಣ್ಣ ಗುಂಪುಗಳನ್ನಾಗಿ ಮಾಡಿ ಸುಸ್ಥಿರ ಬೆಳವಣಿಗೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಅವರ ಮುಂದಿಟ್ಟು ಸಮರ್ಥ ಪರಿಹಾರಗಳನ್ನು ಕಂಡುಹಿಡಿಯುವ ಸವಾಲನ್ನು ಒಡ್ಡಲಾಗುತ್ತದೆ.  ಅಭ್ಯರ್ಥಿಗಳು ವಾರದ ಕೊನೆಯ ವೇಳೆಗೆ ಪರಿಹಾರದ ಕಾರ್ಯ ಮಾದರಿಗಳನ್ನು ಸಿದ್ಧಪಡಿಸಿ ಪ್ರದರ್ಶಿಸಬೇಕಾಗುತ್ತದೆ.

ಅನ್ ಲೀಷ್ ಅಧ್ಯಕ್ಷ ಪ್ರೊಫೆಸರ್ ಫ್ಲೆಮಿಂಗ್, ಇನ್ಫೋಸಿಸ್ ಕಾರ್ಯನಿರ್ವಾಹಕ ಉಪಾಧ್ಯಕ್ಷ ಸುಮಿತ್ ವೀರಮಣಿ, ಐಟಿ/ ಬಿಟಿ ಇಲಾಖೆಯ ಎಸಿಎಸ್ ರಮಣ ರೆಡ್ಡಿ, ಅಟಲ್ ಇನ್ನೋವೇಶನ್ ಅಭಿಯಾನದ ನಿರ್ದೇಶಕ ಡಾ. ಚಿಂತನ್ ವೈಷ್ಣವ್ ಮೈಸೂರು ರಾಜ ವಂಶಸ್ಥ ಯದುವೀರ ಕೃಷ್ಣರಾಜ ಚಾಮರಾಜ ಒಡೆಯರ್ ಇನ್ನಿತರರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

andolanait

Recent Posts

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

18 mins ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

56 mins ago

ನಾಪೋಕ್ಲು |ಕಾಡಾನೆಗಳ ದಾಳಿ ; ವಾಹನಗಳು ಜಖಂ

ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…

1 hour ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

2 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

2 hours ago

ಬೈಕ್ ಸಮೇತ ಸಜೀವ ದಹನವಾದ ಯುವಕ ; ಕೊಲೆ ಶಂಕೆ

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…

2 hours ago