ಜಿಲ್ಲೆಗಳು

ಮೈಸೂರಿನಲ್ಲಿ ನಾಳೆ ಅಂತರಾಷ್ಟ್ರೀಯ ‘ಅನ್ ಲೀಷ್- 22’ ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು : ಸಾಂಸ್ಕೃತಿಕ ನಗರಿಯಲ್ಲಿ ನಾಳೆ ಅಂತರಾಷ್ಟ್ರೀಯ ಕಾರ್ಯಕ್ರಮ ‘ಅನ್ ಲೀಸ್- 22’ಕ್ಕೆ ಶನಿವಾರ ಚಾಲನೆ ದೊರೆಯಲಿದೆ.

ವಿಶ್ವಸಂಸ್ಥೆಯ ಸುಸ್ಥಿರ ಬೆಳವಣಿಗೆ ಗುರಿಗಳನ್ನು ಕಾರ್ಯರೂಪಕ್ಕೆ ತರಲು ಉದ್ದೇಶ ಹೊಂದಿದ ಅಂತರಾಷ್ಟ್ರೀಯ ಕಾರ್ಯಕ್ರಮ ‘ಅನ್ ಲೀಷ್- 22’ ಕ್ಕೆ ಸಾಕ್ಷಿಯಾಗಲು ಅರಮನೆ ನಗರಿ ಸ್ವಜ್ಜಾಗಿದೆ. ಒಂದು ವಾರ ಕಾಲ ಇಲ್ಲಿನ‌ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಶನಿವಾರ (ಡಿಸೆಂಬರ್ 3) ಮಧ್ಯಾಹ್ನ ನೆರವೇರಲಿದ್ದು, ಗ್ರೀನ್ ಲ್ಯಾಂಡ್ ಪ್ರಧಾನ ಮಂತ್ರಿ ಮ್ಯೂಟೆ ಬೌರುಪ್ ಎಜೆಡೆ ಅವರು ಉದ್ಘಾಟನಾ ಕಾರ್ಯಕ್ರಮವನನ್ನು ಉದ್ದೇಶಿಸಿ ವಿಡಿಯೋ ಸಂದೇಶ ನೀಡಲಿದ್ದಾರೆ. ಐಟಿ/ಬಿಟಿ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ ಅವರು ಸ್ವಾಗತ ಭಾಷಣ ಮಾಡಲಿದ್ದಾರೆ.

ಪ್ರಪಂಚದ 101 ರಾಷ್ಟ್ರಗಳ 993 ಪ್ರತಿಭಾವಂತ ತಂತ್ರಜ್ಞರು, ಇದರಲ್ಲಿ ಭಾಗವಹಿಸುತ್ತಿದ್ದಾರೆ. ಈ ಪೈಕಿ, 515 ಜನ ವಿದೇಶಗಳಿಗೆ ಸೇರಿದವರಾಗಿದ್ದರೆ, 478 ಜನ ಭಾರತೀಯರು. ಇವರಲ್ಲಿ ಸ್ಟಾರ್ಟಪ್ ಸಿಟಿ ಬೆಂಗಳೂರಿನ 90 ಮಂದಿ ಹಾಗೂ ಬೆಂಗಳೂರಿಗೆ ಹೊರತಾದ ಭಾಗದ 19 ಮಂದಿ ಇದ್ದಾರೆ.

ಉತ್ತಮ ಆರೋಗ್ಯ ಮತ್ತು ಸ್ವಾಸ್ಥ್ಯ,ಗುಣಮಟ್ಟದ ಶಿಕ್ಷಣ, ಶುದ್ಧನೀರು ಹಾಗೂ ನೈರ್ಮಲ್ಯ, ಸುಲಭ ದರದ ಸ್ವಚ್ಛ ಇಂಧನ, ಹವಾಮಾನ ವೈಪರೀತ್ಯ ಇವು ಕಾರ್ಯಕ್ರಮದ ಮುಖ್ಯ ವಿಷಯಗಳಾಗಿರುತ್ತವೆ. ಪಾಲ್ಗೊಳ್ಳುವ ಅಭ್ಯರ್ಥಿಗಳನ್ನು ಸಣ್ಣ ಸಣ್ಣ ಗುಂಪುಗಳನ್ನಾಗಿ ಮಾಡಿ ಸುಸ್ಥಿರ ಬೆಳವಣಿಗೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಅವರ ಮುಂದಿಟ್ಟು ಸಮರ್ಥ ಪರಿಹಾರಗಳನ್ನು ಕಂಡುಹಿಡಿಯುವ ಸವಾಲನ್ನು ಒಡ್ಡಲಾಗುತ್ತದೆ.  ಅಭ್ಯರ್ಥಿಗಳು ವಾರದ ಕೊನೆಯ ವೇಳೆಗೆ ಪರಿಹಾರದ ಕಾರ್ಯ ಮಾದರಿಗಳನ್ನು ಸಿದ್ಧಪಡಿಸಿ ಪ್ರದರ್ಶಿಸಬೇಕಾಗುತ್ತದೆ.

ಅನ್ ಲೀಷ್ ಅಧ್ಯಕ್ಷ ಪ್ರೊಫೆಸರ್ ಫ್ಲೆಮಿಂಗ್, ಇನ್ಫೋಸಿಸ್ ಕಾರ್ಯನಿರ್ವಾಹಕ ಉಪಾಧ್ಯಕ್ಷ ಸುಮಿತ್ ವೀರಮಣಿ, ಐಟಿ/ ಬಿಟಿ ಇಲಾಖೆಯ ಎಸಿಎಸ್ ರಮಣ ರೆಡ್ಡಿ, ಅಟಲ್ ಇನ್ನೋವೇಶನ್ ಅಭಿಯಾನದ ನಿರ್ದೇಶಕ ಡಾ. ಚಿಂತನ್ ವೈಷ್ಣವ್ ಮೈಸೂರು ರಾಜ ವಂಶಸ್ಥ ಯದುವೀರ ಕೃಷ್ಣರಾಜ ಚಾಮರಾಜ ಒಡೆಯರ್ ಇನ್ನಿತರರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

33 mins ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

42 mins ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

2 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

3 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

7 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

7 hours ago