ಮೈಸೂರು : ಸಾಂಸ್ಕೃತಿಕ ನಗರಿಯಲ್ಲಿ ನಾಳೆ ಅಂತರಾಷ್ಟ್ರೀಯ ಕಾರ್ಯಕ್ರಮ ‘ಅನ್ ಲೀಸ್- 22’ಕ್ಕೆ ಶನಿವಾರ ಚಾಲನೆ ದೊರೆಯಲಿದೆ.
ವಿಶ್ವಸಂಸ್ಥೆಯ ಸುಸ್ಥಿರ ಬೆಳವಣಿಗೆ ಗುರಿಗಳನ್ನು ಕಾರ್ಯರೂಪಕ್ಕೆ ತರಲು ಉದ್ದೇಶ ಹೊಂದಿದ ಅಂತರಾಷ್ಟ್ರೀಯ ಕಾರ್ಯಕ್ರಮ ‘ಅನ್ ಲೀಷ್- 22’ ಕ್ಕೆ ಸಾಕ್ಷಿಯಾಗಲು ಅರಮನೆ ನಗರಿ ಸ್ವಜ್ಜಾಗಿದೆ. ಒಂದು ವಾರ ಕಾಲ ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಶನಿವಾರ (ಡಿಸೆಂಬರ್ 3) ಮಧ್ಯಾಹ್ನ ನೆರವೇರಲಿದ್ದು, ಗ್ರೀನ್ ಲ್ಯಾಂಡ್ ಪ್ರಧಾನ ಮಂತ್ರಿ ಮ್ಯೂಟೆ ಬೌರುಪ್ ಎಜೆಡೆ ಅವರು ಉದ್ಘಾಟನಾ ಕಾರ್ಯಕ್ರಮವನನ್ನು ಉದ್ದೇಶಿಸಿ ವಿಡಿಯೋ ಸಂದೇಶ ನೀಡಲಿದ್ದಾರೆ. ಐಟಿ/ಬಿಟಿ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ ಅವರು ಸ್ವಾಗತ ಭಾಷಣ ಮಾಡಲಿದ್ದಾರೆ.
ಪ್ರಪಂಚದ 101 ರಾಷ್ಟ್ರಗಳ 993 ಪ್ರತಿಭಾವಂತ ತಂತ್ರಜ್ಞರು, ಇದರಲ್ಲಿ ಭಾಗವಹಿಸುತ್ತಿದ್ದಾರೆ. ಈ ಪೈಕಿ, 515 ಜನ ವಿದೇಶಗಳಿಗೆ ಸೇರಿದವರಾಗಿದ್ದರೆ, 478 ಜನ ಭಾರತೀಯರು. ಇವರಲ್ಲಿ ಸ್ಟಾರ್ಟಪ್ ಸಿಟಿ ಬೆಂಗಳೂರಿನ 90 ಮಂದಿ ಹಾಗೂ ಬೆಂಗಳೂರಿಗೆ ಹೊರತಾದ ಭಾಗದ 19 ಮಂದಿ ಇದ್ದಾರೆ.
ಉತ್ತಮ ಆರೋಗ್ಯ ಮತ್ತು ಸ್ವಾಸ್ಥ್ಯ,ಗುಣಮಟ್ಟದ ಶಿಕ್ಷಣ, ಶುದ್ಧನೀರು ಹಾಗೂ ನೈರ್ಮಲ್ಯ, ಸುಲಭ ದರದ ಸ್ವಚ್ಛ ಇಂಧನ, ಹವಾಮಾನ ವೈಪರೀತ್ಯ ಇವು ಕಾರ್ಯಕ್ರಮದ ಮುಖ್ಯ ವಿಷಯಗಳಾಗಿರುತ್ತವೆ. ಪಾಲ್ಗೊಳ್ಳುವ ಅಭ್ಯರ್ಥಿಗಳನ್ನು ಸಣ್ಣ ಸಣ್ಣ ಗುಂಪುಗಳನ್ನಾಗಿ ಮಾಡಿ ಸುಸ್ಥಿರ ಬೆಳವಣಿಗೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಅವರ ಮುಂದಿಟ್ಟು ಸಮರ್ಥ ಪರಿಹಾರಗಳನ್ನು ಕಂಡುಹಿಡಿಯುವ ಸವಾಲನ್ನು ಒಡ್ಡಲಾಗುತ್ತದೆ. ಅಭ್ಯರ್ಥಿಗಳು ವಾರದ ಕೊನೆಯ ವೇಳೆಗೆ ಪರಿಹಾರದ ಕಾರ್ಯ ಮಾದರಿಗಳನ್ನು ಸಿದ್ಧಪಡಿಸಿ ಪ್ರದರ್ಶಿಸಬೇಕಾಗುತ್ತದೆ.
ಅನ್ ಲೀಷ್ ಅಧ್ಯಕ್ಷ ಪ್ರೊಫೆಸರ್ ಫ್ಲೆಮಿಂಗ್, ಇನ್ಫೋಸಿಸ್ ಕಾರ್ಯನಿರ್ವಾಹಕ ಉಪಾಧ್ಯಕ್ಷ ಸುಮಿತ್ ವೀರಮಣಿ, ಐಟಿ/ ಬಿಟಿ ಇಲಾಖೆಯ ಎಸಿಎಸ್ ರಮಣ ರೆಡ್ಡಿ, ಅಟಲ್ ಇನ್ನೋವೇಶನ್ ಅಭಿಯಾನದ ನಿರ್ದೇಶಕ ಡಾ. ಚಿಂತನ್ ವೈಷ್ಣವ್ ಮೈಸೂರು ರಾಜ ವಂಶಸ್ಥ ಯದುವೀರ ಕೃಷ್ಣರಾಜ ಚಾಮರಾಜ ಒಡೆಯರ್ ಇನ್ನಿತರರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…