ಜಿಲ್ಲೆಗಳು

ಮೈಸೂರು ವಿವಿ ವಿಭಜನೆ : ಏನು ಪ್ರಯೋಜನ?

ಹೊಸ ವಿಷಯಗಳು, ಸಂಶೋಧನೆಗೆ ಅನುಕೂಲ ಸಾಧ್ಯತೆ: ದಿಢೀರ್ ನಿರ್ಧಾರದಿಂದ ಕಟ್ಟುವ ಪ್ರಕ್ರಿಯೆ ವಿಳಂಬ ಎಂಬ ಅಭಿಪ್ರಾಯ

ಮೈಸೂರು: ಬೆಂಗಳೂರು ಕೇಂದ್ರಿತ ವಿವಿಯನ್ನು ನಾಲ್ಕು ವಿಶ್ವವಿದ್ಯಾನಿಲಯಗಳಾಗಿ ವಿಂಗಡಿಸಿದ್ದ ಸರ್ಕಾರ, ಶತಮಾನದ ಹಿನ್ನೆಲೆಯ ಮೈಸೂರು ವಿಶ್ವವಿದ್ಯಾನಿಲಯವನ್ನೂ ವಿಭಜಿಸಿದೆ. ಈ ಮೂಲಕ ಉನ್ನತ ಶಿಕ್ಷಣ ಸುಲಭವಾಗಿ ಸಿಗುವಂತೆ ಮಾಡಲಾಗುತ್ತಿದೆ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ. ಆದರೆ ಮೂಲಸೌಕರ್ಯ, ಅಧ್ಯಾಪಕ- ಅಧ್ಯಾಪಕೇತರರ ನೇಮಕ, ಶೈಕ್ಷಣಿಕ ವಾತಾವರಣ ನಿರ್ಮಾಣ ಹೇಗಿರಬಹುದು, ಎಷ್ಟು ದಿನ ಬೇಕಾಗಬಹುದು ಎನ್ನುವ ಚರ್ಚೆಯನ್ನು ಹುಟ್ಟು ಹಾಕಿದೆ.

ಶತಮಾನದ ಹೆಗ್ಗಳಿಕೆಯ ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿ ವಿಸ್ತಾರವಾಗಿದ್ದು, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕೇಂದ್ರ ಸ್ಥಾನವಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಹಲವು ಜಿಲ್ಲೆಗಳಲ್ಲಿ ಮೈಸೂರು ವಿವಿಯು ಸ್ನಾತಕೋತ್ತರ ಪದವಿ ಕೇಂದ್ರಗಳನ್ನು ತೆರೆದಿದೆ. ಇದು ಒಂದು ರೀತಿಯಲ್ಲಿ ವಿವಿಗೆ ಕಾರ್ಯಭಾರದ ಹೊರೆಯನ್ನೂ ಹೆಚ್ಚಳ ಮಾಡಿತ್ತು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಬೋಧಕರು, ಬೋಧಕೇತರ ಸಿಬ್ಬಂದಿ, ಮೂಲಸೌಲಭ್ಯಗಳನ್ನು ಒದಗಿಸುವುದು ದುಸ್ತರವಾಗಿತ್ತು. ಆದರೂ ವಿವಿಯು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿತ್ತು. ರಾಜ್ಯ ಸರ್ಕಾರ ಮೈಸೂರು ವಿವಿಯ ವಿಭಜನೆಗೆ ಮುಂದಾಗಿದ್ದು, ಹಳೆ ಮೈಸೂರು ಭಾಗದ ಜಿಲ್ಲೆಗಳೇ ಆಗಿರುವ ಚಾಮರಾಜನಗರ, ಹಾಸನ ಜಿಲ್ಲೆಗಳಲ್ಲಿ ನೂತನ ವಿವಿಗಳ ಸ್ಥಾಪನೆಗೆ ತೀರ್ಮಾನಿಸಿದೆ.

ಮಂಡ್ಯದಲ್ಲಿ ಎರಡು ವರ್ಷಗಳ ಹಿಂದೆೆುೀಂ ಶುರುವಾಗಿರುವ ಹೊಸ ವಿವಿಯ ಅಭಿವೃದ್ಧಿಗೆ ಸಿದ್ಧತೆ ನಡೆಸಿದೆ.
ಮೈಸೂರು ವಿವಿಯು ಮಂಡ್ಯ ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಈಗಾಗಲೇ ಸ್ನಾತಕೋತ್ತರ ಪದವಿ ಕೇಂದ್ರಗಳನ್ನು ತೆರೆದು ಹಲವು ವಿಷಯ ಅಧ್ಯಯನಕ್ಕೆ ಅವಕಾಶ ಮಾಡಿಕೊಟ್ಟಿತ್ತು. ಅತ್ತ ಕೊಡಗು ಜಿಲ್ಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಸ್ನಾತಕೋತ್ತರ ಪದವಿ ಕೇಂದ್ರವನ್ನು ಸ್ಥಾಪಿಸಲಾಗಿತ್ತು. ಈ ಕೇಂದ್ರಗಳ ಆಡಳಿತಾಧಿಕಾರಿಗಳು ಕೂಡ ವಿದ್ಯಾರ್ಥಿಗಳ ಸಂಖ್ಯೆ, ಮೂಲ ಸೌಕರ್ಯ ಕಲ್ಪಿಸುವುದು ಇತ್ಯಾದಿ ಕಾರ್ಯಗಳಿಗೆ ಸಂಬಂಧಪಟ್ಟ ಅನುಮತಿ ಪಡೆಯುವುದು ಅನಿವಾರ್ಯವಾಗಿತ್ತು. ಅದು ಸಹಜ ಕೂಡ.
ಆದರೆ, ಇತ್ತೀಚೆಗೆ ರಾಜ್ಯ ಸರ್ಕಾರ ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಸಮ್ಮತಿ ನೀಡಿದೆ. ಇದು ಕಾರ್ಯಭಾರ, ಆಡಳಿತದ ಹೊಣೆಗಾರಿಕೆಗಳಿಂದ ನಲುಗಿ ಹೋಗಿದ್ದ ಮೈಸೂರು ವಿವಿಗೆ ನೆಮ್ಮದಿ ತಂದಿದೆ ಎನ್ನಬಹುದು. ಸರ್ಕಾರದ ನಿರ್ಧಾರದಿಂದ ಮೈಸೂರು ವಿವಿಯು ಹೊಸ ನೋಟದೊಂದಿಗೆ ಸಂಶೋಧನೆಗಳು ಹಾಗೂ ನೂತನ ವಿಷಯಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಗಮನ ಹರಿಸಲು ಅವಕಾಶಗಳನ್ನು ಕಲ್ಪಿಸಿದಂತಾಗಿದೆ.

‘ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸುವುದು ಒಳ್ಳೆಯದು. ಆದರೆ, ಸ್ಥಾಪಿಸುವ ವಿಧಾನ ಸರಿಯಿಲ್ಲ. ಒಂದು ವಿಶ್ವವಿದ್ಯಾನಿಲಯವನ್ನು ಸ್ಥಾಪನೆ ಮಾಡಿ, ಅದರ ಅಭಿವೃದ್ಧಿಗೆ ಪೂರಕವಾದ ವಾತಾವರಣ ಉಂಟು ಮಾಡಬೇಕು ಎಂದರೆ ಸಾಕಷ್ಟು ಹಣವನ್ನು ಮೀಸಲಿಡಬೇಕಾಗುತ್ತದೆ. ಒಂದೇ ಬಾರಿಗೆ ಮೂರ್ನಾಲ್ಕು ವಿವಿಗಳನ್ನು ಮಾಡುವ ಬದಲು, ಹಂತ ಹಂತವಾಗಿ ವಿವಿಗಳನ್ನು ಸ್ಥಾಪಿಸಬೇಕಿತ್ತು. ವಿವಿಗಳಿಗೆ ಹಿಂದೆಲ್ಲ ಅನುದಾನಗಳು ಸಮರ್ಪಕವಾಗಿ ಸಿಗುತ್ತಿತ್ತು. ಈಗ ನೀಡುವ ಅನುದಾನ ಸಾಕಾಗುತ್ತಿಲ್ಲ. ಹಾಗಾಗಿ, ಆರ್ಥಿಕ ಹೊರೆಯನ್ನು ಗಮನದಲ್ಲಿ ಇಟ್ಟುಕೊಂಡು ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಬೇಕು’ ಎಂದು ಸಲಹೆ ನೀಡುತ್ತಾರೆ ವಿಶ್ರಾಂತ ಕುಲಪತಿ ಪ್ರೊ.ಪಿ.ವೆಂಕಟರಾಮಯ್ಯ.

 

andolanait

Recent Posts

ವಿಜಯೇಂದ್ರ ಸಿಎಂ ಆದರೆ ರಾಜ್ಯ ಸುಭಿಕ್ಷವಾಗಿ ಇರಲಿದೆ: ವಿಜಯೇಂದ್ರ ಅಭಿಮಾನಿ ಬಳಗದ ಶಶಿಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…

7 mins ago

ಒಳ ಮೀಸಲಾತಿಯಲ್ಲಿರುವ ಗೊಂದಲ ನಿವಾರಣೆ ಮಾಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್‍ಗೆ…

23 mins ago

ಏಪ್ರಿಲ್‌ ಹಾಗೂ ಮೇ ತಿಂಗಳಿನಲ್ಲಿ ವಿಪರೀತ ಬಿಸಿಲಿನ ತೀವ್ರತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…

30 mins ago

ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ: ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಿಷ್ಟು.!

ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ಫೋನ್‌ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ…

2 hours ago

ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದಾರೆ: ಸಚಿವ ಪರಮೇಶ್ವರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್‌…

2 hours ago

ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಸಿದ್ದರಾಮಯ್ಯ

ಕಾರವಾರ: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬಡ ಹಾಗೂ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸಲು ಸೂಪರ್‌ ಸ್ಪೆಷಾಲಿಟಿ…

3 hours ago