ಜಿಲ್ಲೆಗಳು

ಮೈಸೂರು ವಿವಿ ವಿಭಜನೆ : ಏನು ಪ್ರಯೋಜನ?

ಹೊಸ ವಿಷಯಗಳು, ಸಂಶೋಧನೆಗೆ ಅನುಕೂಲ ಸಾಧ್ಯತೆ: ದಿಢೀರ್ ನಿರ್ಧಾರದಿಂದ ಕಟ್ಟುವ ಪ್ರಕ್ರಿಯೆ ವಿಳಂಬ ಎಂಬ ಅಭಿಪ್ರಾಯ

ಮೈಸೂರು: ಬೆಂಗಳೂರು ಕೇಂದ್ರಿತ ವಿವಿಯನ್ನು ನಾಲ್ಕು ವಿಶ್ವವಿದ್ಯಾನಿಲಯಗಳಾಗಿ ವಿಂಗಡಿಸಿದ್ದ ಸರ್ಕಾರ, ಶತಮಾನದ ಹಿನ್ನೆಲೆಯ ಮೈಸೂರು ವಿಶ್ವವಿದ್ಯಾನಿಲಯವನ್ನೂ ವಿಭಜಿಸಿದೆ. ಈ ಮೂಲಕ ಉನ್ನತ ಶಿಕ್ಷಣ ಸುಲಭವಾಗಿ ಸಿಗುವಂತೆ ಮಾಡಲಾಗುತ್ತಿದೆ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ. ಆದರೆ ಮೂಲಸೌಕರ್ಯ, ಅಧ್ಯಾಪಕ- ಅಧ್ಯಾಪಕೇತರರ ನೇಮಕ, ಶೈಕ್ಷಣಿಕ ವಾತಾವರಣ ನಿರ್ಮಾಣ ಹೇಗಿರಬಹುದು, ಎಷ್ಟು ದಿನ ಬೇಕಾಗಬಹುದು ಎನ್ನುವ ಚರ್ಚೆಯನ್ನು ಹುಟ್ಟು ಹಾಕಿದೆ.

ಶತಮಾನದ ಹೆಗ್ಗಳಿಕೆಯ ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿ ವಿಸ್ತಾರವಾಗಿದ್ದು, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕೇಂದ್ರ ಸ್ಥಾನವಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಹಲವು ಜಿಲ್ಲೆಗಳಲ್ಲಿ ಮೈಸೂರು ವಿವಿಯು ಸ್ನಾತಕೋತ್ತರ ಪದವಿ ಕೇಂದ್ರಗಳನ್ನು ತೆರೆದಿದೆ. ಇದು ಒಂದು ರೀತಿಯಲ್ಲಿ ವಿವಿಗೆ ಕಾರ್ಯಭಾರದ ಹೊರೆಯನ್ನೂ ಹೆಚ್ಚಳ ಮಾಡಿತ್ತು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಬೋಧಕರು, ಬೋಧಕೇತರ ಸಿಬ್ಬಂದಿ, ಮೂಲಸೌಲಭ್ಯಗಳನ್ನು ಒದಗಿಸುವುದು ದುಸ್ತರವಾಗಿತ್ತು. ಆದರೂ ವಿವಿಯು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿತ್ತು. ರಾಜ್ಯ ಸರ್ಕಾರ ಮೈಸೂರು ವಿವಿಯ ವಿಭಜನೆಗೆ ಮುಂದಾಗಿದ್ದು, ಹಳೆ ಮೈಸೂರು ಭಾಗದ ಜಿಲ್ಲೆಗಳೇ ಆಗಿರುವ ಚಾಮರಾಜನಗರ, ಹಾಸನ ಜಿಲ್ಲೆಗಳಲ್ಲಿ ನೂತನ ವಿವಿಗಳ ಸ್ಥಾಪನೆಗೆ ತೀರ್ಮಾನಿಸಿದೆ.

ಮಂಡ್ಯದಲ್ಲಿ ಎರಡು ವರ್ಷಗಳ ಹಿಂದೆೆುೀಂ ಶುರುವಾಗಿರುವ ಹೊಸ ವಿವಿಯ ಅಭಿವೃದ್ಧಿಗೆ ಸಿದ್ಧತೆ ನಡೆಸಿದೆ.
ಮೈಸೂರು ವಿವಿಯು ಮಂಡ್ಯ ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಈಗಾಗಲೇ ಸ್ನಾತಕೋತ್ತರ ಪದವಿ ಕೇಂದ್ರಗಳನ್ನು ತೆರೆದು ಹಲವು ವಿಷಯ ಅಧ್ಯಯನಕ್ಕೆ ಅವಕಾಶ ಮಾಡಿಕೊಟ್ಟಿತ್ತು. ಅತ್ತ ಕೊಡಗು ಜಿಲ್ಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಸ್ನಾತಕೋತ್ತರ ಪದವಿ ಕೇಂದ್ರವನ್ನು ಸ್ಥಾಪಿಸಲಾಗಿತ್ತು. ಈ ಕೇಂದ್ರಗಳ ಆಡಳಿತಾಧಿಕಾರಿಗಳು ಕೂಡ ವಿದ್ಯಾರ್ಥಿಗಳ ಸಂಖ್ಯೆ, ಮೂಲ ಸೌಕರ್ಯ ಕಲ್ಪಿಸುವುದು ಇತ್ಯಾದಿ ಕಾರ್ಯಗಳಿಗೆ ಸಂಬಂಧಪಟ್ಟ ಅನುಮತಿ ಪಡೆಯುವುದು ಅನಿವಾರ್ಯವಾಗಿತ್ತು. ಅದು ಸಹಜ ಕೂಡ.
ಆದರೆ, ಇತ್ತೀಚೆಗೆ ರಾಜ್ಯ ಸರ್ಕಾರ ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಸಮ್ಮತಿ ನೀಡಿದೆ. ಇದು ಕಾರ್ಯಭಾರ, ಆಡಳಿತದ ಹೊಣೆಗಾರಿಕೆಗಳಿಂದ ನಲುಗಿ ಹೋಗಿದ್ದ ಮೈಸೂರು ವಿವಿಗೆ ನೆಮ್ಮದಿ ತಂದಿದೆ ಎನ್ನಬಹುದು. ಸರ್ಕಾರದ ನಿರ್ಧಾರದಿಂದ ಮೈಸೂರು ವಿವಿಯು ಹೊಸ ನೋಟದೊಂದಿಗೆ ಸಂಶೋಧನೆಗಳು ಹಾಗೂ ನೂತನ ವಿಷಯಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಗಮನ ಹರಿಸಲು ಅವಕಾಶಗಳನ್ನು ಕಲ್ಪಿಸಿದಂತಾಗಿದೆ.

‘ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸುವುದು ಒಳ್ಳೆಯದು. ಆದರೆ, ಸ್ಥಾಪಿಸುವ ವಿಧಾನ ಸರಿಯಿಲ್ಲ. ಒಂದು ವಿಶ್ವವಿದ್ಯಾನಿಲಯವನ್ನು ಸ್ಥಾಪನೆ ಮಾಡಿ, ಅದರ ಅಭಿವೃದ್ಧಿಗೆ ಪೂರಕವಾದ ವಾತಾವರಣ ಉಂಟು ಮಾಡಬೇಕು ಎಂದರೆ ಸಾಕಷ್ಟು ಹಣವನ್ನು ಮೀಸಲಿಡಬೇಕಾಗುತ್ತದೆ. ಒಂದೇ ಬಾರಿಗೆ ಮೂರ್ನಾಲ್ಕು ವಿವಿಗಳನ್ನು ಮಾಡುವ ಬದಲು, ಹಂತ ಹಂತವಾಗಿ ವಿವಿಗಳನ್ನು ಸ್ಥಾಪಿಸಬೇಕಿತ್ತು. ವಿವಿಗಳಿಗೆ ಹಿಂದೆಲ್ಲ ಅನುದಾನಗಳು ಸಮರ್ಪಕವಾಗಿ ಸಿಗುತ್ತಿತ್ತು. ಈಗ ನೀಡುವ ಅನುದಾನ ಸಾಕಾಗುತ್ತಿಲ್ಲ. ಹಾಗಾಗಿ, ಆರ್ಥಿಕ ಹೊರೆಯನ್ನು ಗಮನದಲ್ಲಿ ಇಟ್ಟುಕೊಂಡು ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಬೇಕು’ ಎಂದು ಸಲಹೆ ನೀಡುತ್ತಾರೆ ವಿಶ್ರಾಂತ ಕುಲಪತಿ ಪ್ರೊ.ಪಿ.ವೆಂಕಟರಾಮಯ್ಯ.

 

andolanait

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

20 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

20 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

20 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

20 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

20 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

20 hours ago