ಜಿಲ್ಲೆಗಳು

ಮೈಸೂರು ವಿವಿ ಕುಲಸಚಿವರ ವಿರುದ್ಧ ಸಂಸದ ಗರಂ

ಮೈಸೂರು: ಶಾಸ್ತ್ರೀಯ ಕನ್ನಡ ಸ್ವಾಯತ್ತ ಕೇಂದ್ರ ಸ್ಥಾಪನೆಗೆ ಜಯಲಕ್ಷ್ಮೀ ವಿಲಾಸ ಅರಮನೆ ಹಸ್ತಾಂತರಕ್ಕೂ ಮುನ್ನ ಕಾನೂನು ಅಭಿಪ್ರಾಯ ಪಡೆಯಬೇಕೆಂದು ಹೇಳಿದ ಮೈಸೂರು ವಿವಿ ಕುಲಸಚಿವರಾದ ವಿ.ಆರ್.ಶೈಲಜಾ ವಿರುದ್ಧ ಸಂಸದ ಪ್ರತಾಪಸಿಂಹ ಹರಿಹಾಯ್ದರು.

ಕ್ರಾಫರ್ಡ್ ಭವನದ ಶಿಕ್ಷಣ ಮಂಡಳಿ ಸಭಾ ಭವನದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಕುಲಸಚಿವರಾದ ವಿ.ಆರ್.ಶೈಲಜಾ,
ಸಿಂಡಿಕೇಟ್ ಸಭೆಗೂ ಮುನ್ನ ಕಾನೂನು ತಜ್ಞರ ಅಭಿಪ್ರಾಯ ಪಡೆಯಬೇಕಿತ್ತು. ಆದರೆ, ನೇರವಾಗಿ ವಿಷಯ ತರಲಾಗಿದೆ. ಹಾಗಾಗಿ,ಕಾನೂನು ತಜ್ಞರ ವರದಿ ಪಡೆಯಬೇಕಿದೆ ಎಂದು ಹೇಳಿದರು. ಕುಲಸಚಿವರ ಈ ಮಾತಿಗೆ ಕುಪಿತರಾದ ಸಂಸದ ಪ್ರತಾಪಸಿಂಹ, ಸರ್ಕಾರ ಅನುಮತಿ ಕೊಟ್ಟಿರುವಾಗ ಇನ್ಯಾರಿಂದ ಅನುಮತಿ ಕೊಡಬೇಕು ಎಂದು ಕಿಡಿಕಾರಿದರು.ಜಯಲಕ್ಷ್ಮೀ ವಿಲಾಸ ಅರಮನೆ ಮಹಾರಾಜರು ಮೈಸೂರು ವಿವಿಗೆ ಕೊಟ್ಟಿರುವ ಭಿಕ್ಷೆ. ಯಾರ ಮನೆಯ ಆಸ್ತಿಯನ್ನು ಕೇಳುತ್ತಿಲ್ಲ. ಕನ್ನಡದ ಕೆಲಸ ಆಗಬೇಕು. ಕೆಎಎಸ್ ಅಧಿಕಾರಿ ನಮಗೇ ಡಿಕ್ಟೇಟ್ ಮಾಡುತ್ತಾರೆ. ಅಡ್ವೋಕೇಟ್ ಜನರಲ್ ರೀತಿಯಲ್ಲಿ ಮಾತಾಡುತ್ತಾರೆಂದು ಕುಪಿತರಾದರು.

ಕಾನೂನು ಅಭಿಪ್ರಾಯ ಪಡೆಯಬೇಕಾದ್ದು ಯಾರ ಜವಾಬ್ದಾರಿ. ಅದನ್ನು ನಾನೇ ಹೇಳಿಕೊಡಬೇಕೆ? ಐಎಎಸ್ ಅಧಿಕಾರಿಗಳ ಬಳಿ ಸಹಿ ಮಾಡಿಸುವುದು ಎಷ್ಟು ಕಷ್ಟ ನನಗೆ ಗೊತ್ತಿದೆ. ಪ್ರತಿಸಲ ಗುಮಾಸ್ತನ ಕೆಲಸ ಮಾಡಲಾಗುವುದಿಲ್ಲ ಎಂದು ಸಿಡಿಮಿಡಿಗೊಂಡರು.

ಜಯಲಕ್ಷ್ಮೀ ವಿಲಾಸ ಅರಮನೆ ಕಟ್ಟಡ ಹಸ್ತಾಂತರಿಸುವಂತೆ ೮ ತಿಂಗಳಿಂದ ಪ್ರಕ್ರಿಯೆ ನಡೆಯುತ್ತಿದೆ. ಸಿಂಡಿಕೇಟ್ ಸಭೆಯಲ್ಲೂ ಅನುಮೋದನೆ ದೊರೆತಿರುವಾಗ ಕುಲಸಚಿವೆರಾದ ವಿ.ಆರ್.ಶೈಲಜಾ ಅವರು ಇಲ್ಲದ ತರಲೇ ಮಾಡುತ್ತಿದ್ದಾರೆ ಎಂದು ಸಭೆಯ ಬಳಿಕ ಸುದ್ದಿಗಾರರಿಗೆ ವಿವರಿಸಿದರು.

ಜಯಲಕ್ಷ್ಮೀ ವಿಲಾಸ ಅರಮನೆ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಮುಖ್ಯಮಂತ್ರಿಗಳು ೨೭.೫ ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ನವೀಕರಣ ಮಾಡಿ ೪ ಕೊಠಡಿಗಳನ್ನು ಬಳಸುತ್ತೇವೆ. ಉಳಿದದ್ದನ್ನು ಮೈಸೂರು ವಿವಿ ಬಳಸಬಹುದು. ಚುನಾವಣೆ ಬಂದರೆ ಪ್ರಾಜೆಕ್ಟ್ ಮುಂದಕ್ಕೆ ಹೋಗಲಿದೆ ಎಂದರು.

ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದ್ದೇನೆ. ಸಚಿವ ಸಂಪುಟ ಸಭೆ ಅನುಮೋದನೆಗೆ ಕಳುಹಿಸಬೇಕು. ನವೀಕರಣ ಮಾಡದಿದ್ದರೆ ಇಡೀ ಕಟ್ಟಡ ಬಿದ್ದು ಹೋಗುತ್ತದೆ. ಮೈಸೂರು ವಿವಿ ಸಹಕಾರ ಕೊಡಬೇಕು. ಕೇಂದ್ರ ಸ್ಥಾಪನೆಯಿಂದ ವಿವಿಗೆ ಗೌರವ ಬರಲಿದೆ ಎಂದು ತಿಳಿಸಿದರು.

ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ.ಎಚ್.ರಾಜಶೇಖರ, ಸಿಂಡಿಕೇಟ್ ಸದಸ್ಯರು ಸಭೆಯಲ್ಲಿ ಹಾಜರಿದ್ದರು.


ಜಯಲಕ್ಷ್ಮೀ ವಿಲಾಸ ಅರಮನೆ ಹಸ್ತಾಂತರ ಸಂಬಂಧ ಚರ್ಚಿಸಿ ಎರಡು ದಿನಗಳ ಒಳಗೆ ತೀರ್ಮಾನ ತಿಳಿಸುತ್ತೇವೆ.
ಕಾನೂನು ತಜ್ಞರ ಅಭಿಪ್ರಾಯ ಪಡೆಯುವುದನ್ನು ತಕ್ಷಣ ಮಾಡುತ್ತೇವೆ. ವಿವಿಯಿಂದ ವಿಳಂಬವಾಗದಂತೆ ನೋಡಿಕೊಳ್ಳುತ್ತೇವೆ.

ಪ್ರೊ.ಎಚ್.ರಾಜಶೇಖರ, ಹಂಗಾಮಿ ಕುಲಪತಿ


 

ನಾನೊಬ್ಬ ಕನ್ನಡದ ಬರಹಗಾರ, ಕನ್ನಡದ ಕೆಲಸಕ್ಕಾಗಿ ಕೆಲಸ ಮಾಡುವೆ. ಉಮಾಶ್ರೀ ಸಚಿವರಾಗಿದ್ದಾಗ ಕೇಂದ್ರವನ್ನು ಬೆಂಗಳೂರಿಗೆ ಹಸ್ತಾಂತರಿಸಲು ಮುಂದಾದಾಗ ತೀವ್ರ ವಿರೋಧ ವ್ಯಕ್ತವಾಗಿ ಕೈಬಿಡಲಾಯಿತು. ಸಿ.ಟಿ.ರವಿ ಸಚಿವರಾಗಿದ್ದಾಗ ಮತ್ತೆ ಉಳಿಸಿ ಅನುದಾನ ಕೊಡಲಾಯಿತು. ಈಗಿನ ಸಚಿವ ಸುನಿಲ್ ಕುಮಾರ್ ಮುತುವರ್ಜಿ ವಹಿಸಿದ್ದಾರೆ. ಹೀಗಿರುವಾಗ ಎಂಟು ತಿಂಗಳಿಂದ ವಿಳಂಬ ಸಲ್ಲದು.

ಪ್ರತಾಪ್ ಸಿಂಹ, ಸಂಸದರು.

 

andolanait

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

4 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

6 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

6 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

6 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

6 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

6 hours ago