ಜಿಲ್ಲೆಗಳು

ಮೈಸೂರು ವಿವಿ ಕುಲಸಚಿವರ ವಿರುದ್ಧ ಸಂಸದ ಗರಂ

ಮೈಸೂರು: ಶಾಸ್ತ್ರೀಯ ಕನ್ನಡ ಸ್ವಾಯತ್ತ ಕೇಂದ್ರ ಸ್ಥಾಪನೆಗೆ ಜಯಲಕ್ಷ್ಮೀ ವಿಲಾಸ ಅರಮನೆ ಹಸ್ತಾಂತರಕ್ಕೂ ಮುನ್ನ ಕಾನೂನು ಅಭಿಪ್ರಾಯ ಪಡೆಯಬೇಕೆಂದು ಹೇಳಿದ ಮೈಸೂರು ವಿವಿ ಕುಲಸಚಿವರಾದ ವಿ.ಆರ್.ಶೈಲಜಾ ವಿರುದ್ಧ ಸಂಸದ ಪ್ರತಾಪಸಿಂಹ ಹರಿಹಾಯ್ದರು.

ಕ್ರಾಫರ್ಡ್ ಭವನದ ಶಿಕ್ಷಣ ಮಂಡಳಿ ಸಭಾ ಭವನದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಕುಲಸಚಿವರಾದ ವಿ.ಆರ್.ಶೈಲಜಾ,
ಸಿಂಡಿಕೇಟ್ ಸಭೆಗೂ ಮುನ್ನ ಕಾನೂನು ತಜ್ಞರ ಅಭಿಪ್ರಾಯ ಪಡೆಯಬೇಕಿತ್ತು. ಆದರೆ, ನೇರವಾಗಿ ವಿಷಯ ತರಲಾಗಿದೆ. ಹಾಗಾಗಿ,ಕಾನೂನು ತಜ್ಞರ ವರದಿ ಪಡೆಯಬೇಕಿದೆ ಎಂದು ಹೇಳಿದರು. ಕುಲಸಚಿವರ ಈ ಮಾತಿಗೆ ಕುಪಿತರಾದ ಸಂಸದ ಪ್ರತಾಪಸಿಂಹ, ಸರ್ಕಾರ ಅನುಮತಿ ಕೊಟ್ಟಿರುವಾಗ ಇನ್ಯಾರಿಂದ ಅನುಮತಿ ಕೊಡಬೇಕು ಎಂದು ಕಿಡಿಕಾರಿದರು.ಜಯಲಕ್ಷ್ಮೀ ವಿಲಾಸ ಅರಮನೆ ಮಹಾರಾಜರು ಮೈಸೂರು ವಿವಿಗೆ ಕೊಟ್ಟಿರುವ ಭಿಕ್ಷೆ. ಯಾರ ಮನೆಯ ಆಸ್ತಿಯನ್ನು ಕೇಳುತ್ತಿಲ್ಲ. ಕನ್ನಡದ ಕೆಲಸ ಆಗಬೇಕು. ಕೆಎಎಸ್ ಅಧಿಕಾರಿ ನಮಗೇ ಡಿಕ್ಟೇಟ್ ಮಾಡುತ್ತಾರೆ. ಅಡ್ವೋಕೇಟ್ ಜನರಲ್ ರೀತಿಯಲ್ಲಿ ಮಾತಾಡುತ್ತಾರೆಂದು ಕುಪಿತರಾದರು.

ಕಾನೂನು ಅಭಿಪ್ರಾಯ ಪಡೆಯಬೇಕಾದ್ದು ಯಾರ ಜವಾಬ್ದಾರಿ. ಅದನ್ನು ನಾನೇ ಹೇಳಿಕೊಡಬೇಕೆ? ಐಎಎಸ್ ಅಧಿಕಾರಿಗಳ ಬಳಿ ಸಹಿ ಮಾಡಿಸುವುದು ಎಷ್ಟು ಕಷ್ಟ ನನಗೆ ಗೊತ್ತಿದೆ. ಪ್ರತಿಸಲ ಗುಮಾಸ್ತನ ಕೆಲಸ ಮಾಡಲಾಗುವುದಿಲ್ಲ ಎಂದು ಸಿಡಿಮಿಡಿಗೊಂಡರು.

ಜಯಲಕ್ಷ್ಮೀ ವಿಲಾಸ ಅರಮನೆ ಕಟ್ಟಡ ಹಸ್ತಾಂತರಿಸುವಂತೆ ೮ ತಿಂಗಳಿಂದ ಪ್ರಕ್ರಿಯೆ ನಡೆಯುತ್ತಿದೆ. ಸಿಂಡಿಕೇಟ್ ಸಭೆಯಲ್ಲೂ ಅನುಮೋದನೆ ದೊರೆತಿರುವಾಗ ಕುಲಸಚಿವೆರಾದ ವಿ.ಆರ್.ಶೈಲಜಾ ಅವರು ಇಲ್ಲದ ತರಲೇ ಮಾಡುತ್ತಿದ್ದಾರೆ ಎಂದು ಸಭೆಯ ಬಳಿಕ ಸುದ್ದಿಗಾರರಿಗೆ ವಿವರಿಸಿದರು.

ಜಯಲಕ್ಷ್ಮೀ ವಿಲಾಸ ಅರಮನೆ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಮುಖ್ಯಮಂತ್ರಿಗಳು ೨೭.೫ ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ನವೀಕರಣ ಮಾಡಿ ೪ ಕೊಠಡಿಗಳನ್ನು ಬಳಸುತ್ತೇವೆ. ಉಳಿದದ್ದನ್ನು ಮೈಸೂರು ವಿವಿ ಬಳಸಬಹುದು. ಚುನಾವಣೆ ಬಂದರೆ ಪ್ರಾಜೆಕ್ಟ್ ಮುಂದಕ್ಕೆ ಹೋಗಲಿದೆ ಎಂದರು.

ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದ್ದೇನೆ. ಸಚಿವ ಸಂಪುಟ ಸಭೆ ಅನುಮೋದನೆಗೆ ಕಳುಹಿಸಬೇಕು. ನವೀಕರಣ ಮಾಡದಿದ್ದರೆ ಇಡೀ ಕಟ್ಟಡ ಬಿದ್ದು ಹೋಗುತ್ತದೆ. ಮೈಸೂರು ವಿವಿ ಸಹಕಾರ ಕೊಡಬೇಕು. ಕೇಂದ್ರ ಸ್ಥಾಪನೆಯಿಂದ ವಿವಿಗೆ ಗೌರವ ಬರಲಿದೆ ಎಂದು ತಿಳಿಸಿದರು.

ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ.ಎಚ್.ರಾಜಶೇಖರ, ಸಿಂಡಿಕೇಟ್ ಸದಸ್ಯರು ಸಭೆಯಲ್ಲಿ ಹಾಜರಿದ್ದರು.


ಜಯಲಕ್ಷ್ಮೀ ವಿಲಾಸ ಅರಮನೆ ಹಸ್ತಾಂತರ ಸಂಬಂಧ ಚರ್ಚಿಸಿ ಎರಡು ದಿನಗಳ ಒಳಗೆ ತೀರ್ಮಾನ ತಿಳಿಸುತ್ತೇವೆ.
ಕಾನೂನು ತಜ್ಞರ ಅಭಿಪ್ರಾಯ ಪಡೆಯುವುದನ್ನು ತಕ್ಷಣ ಮಾಡುತ್ತೇವೆ. ವಿವಿಯಿಂದ ವಿಳಂಬವಾಗದಂತೆ ನೋಡಿಕೊಳ್ಳುತ್ತೇವೆ.

ಪ್ರೊ.ಎಚ್.ರಾಜಶೇಖರ, ಹಂಗಾಮಿ ಕುಲಪತಿ


 

ನಾನೊಬ್ಬ ಕನ್ನಡದ ಬರಹಗಾರ, ಕನ್ನಡದ ಕೆಲಸಕ್ಕಾಗಿ ಕೆಲಸ ಮಾಡುವೆ. ಉಮಾಶ್ರೀ ಸಚಿವರಾಗಿದ್ದಾಗ ಕೇಂದ್ರವನ್ನು ಬೆಂಗಳೂರಿಗೆ ಹಸ್ತಾಂತರಿಸಲು ಮುಂದಾದಾಗ ತೀವ್ರ ವಿರೋಧ ವ್ಯಕ್ತವಾಗಿ ಕೈಬಿಡಲಾಯಿತು. ಸಿ.ಟಿ.ರವಿ ಸಚಿವರಾಗಿದ್ದಾಗ ಮತ್ತೆ ಉಳಿಸಿ ಅನುದಾನ ಕೊಡಲಾಯಿತು. ಈಗಿನ ಸಚಿವ ಸುನಿಲ್ ಕುಮಾರ್ ಮುತುವರ್ಜಿ ವಹಿಸಿದ್ದಾರೆ. ಹೀಗಿರುವಾಗ ಎಂಟು ತಿಂಗಳಿಂದ ವಿಳಂಬ ಸಲ್ಲದು.

ಪ್ರತಾಪ್ ಸಿಂಹ, ಸಂಸದರು.

 

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

10 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

10 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

10 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

10 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

10 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

10 hours ago