ಜಿಲ್ಲೆಗಳು

ಮೈಸೂರು ವಿವಿ ಕುಲಸಚಿವರ ವಿರುದ್ಧ ಸಂಸದ ಗರಂ

ಮೈಸೂರು: ಶಾಸ್ತ್ರೀಯ ಕನ್ನಡ ಸ್ವಾಯತ್ತ ಕೇಂದ್ರ ಸ್ಥಾಪನೆಗೆ ಜಯಲಕ್ಷ್ಮೀ ವಿಲಾಸ ಅರಮನೆ ಹಸ್ತಾಂತರಕ್ಕೂ ಮುನ್ನ ಕಾನೂನು ಅಭಿಪ್ರಾಯ ಪಡೆಯಬೇಕೆಂದು ಹೇಳಿದ ಮೈಸೂರು ವಿವಿ ಕುಲಸಚಿವರಾದ ವಿ.ಆರ್.ಶೈಲಜಾ ವಿರುದ್ಧ ಸಂಸದ ಪ್ರತಾಪಸಿಂಹ ಹರಿಹಾಯ್ದರು.

ಕ್ರಾಫರ್ಡ್ ಭವನದ ಶಿಕ್ಷಣ ಮಂಡಳಿ ಸಭಾ ಭವನದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಕುಲಸಚಿವರಾದ ವಿ.ಆರ್.ಶೈಲಜಾ,
ಸಿಂಡಿಕೇಟ್ ಸಭೆಗೂ ಮುನ್ನ ಕಾನೂನು ತಜ್ಞರ ಅಭಿಪ್ರಾಯ ಪಡೆಯಬೇಕಿತ್ತು. ಆದರೆ, ನೇರವಾಗಿ ವಿಷಯ ತರಲಾಗಿದೆ. ಹಾಗಾಗಿ,ಕಾನೂನು ತಜ್ಞರ ವರದಿ ಪಡೆಯಬೇಕಿದೆ ಎಂದು ಹೇಳಿದರು. ಕುಲಸಚಿವರ ಈ ಮಾತಿಗೆ ಕುಪಿತರಾದ ಸಂಸದ ಪ್ರತಾಪಸಿಂಹ, ಸರ್ಕಾರ ಅನುಮತಿ ಕೊಟ್ಟಿರುವಾಗ ಇನ್ಯಾರಿಂದ ಅನುಮತಿ ಕೊಡಬೇಕು ಎಂದು ಕಿಡಿಕಾರಿದರು.ಜಯಲಕ್ಷ್ಮೀ ವಿಲಾಸ ಅರಮನೆ ಮಹಾರಾಜರು ಮೈಸೂರು ವಿವಿಗೆ ಕೊಟ್ಟಿರುವ ಭಿಕ್ಷೆ. ಯಾರ ಮನೆಯ ಆಸ್ತಿಯನ್ನು ಕೇಳುತ್ತಿಲ್ಲ. ಕನ್ನಡದ ಕೆಲಸ ಆಗಬೇಕು. ಕೆಎಎಸ್ ಅಧಿಕಾರಿ ನಮಗೇ ಡಿಕ್ಟೇಟ್ ಮಾಡುತ್ತಾರೆ. ಅಡ್ವೋಕೇಟ್ ಜನರಲ್ ರೀತಿಯಲ್ಲಿ ಮಾತಾಡುತ್ತಾರೆಂದು ಕುಪಿತರಾದರು.

ಕಾನೂನು ಅಭಿಪ್ರಾಯ ಪಡೆಯಬೇಕಾದ್ದು ಯಾರ ಜವಾಬ್ದಾರಿ. ಅದನ್ನು ನಾನೇ ಹೇಳಿಕೊಡಬೇಕೆ? ಐಎಎಸ್ ಅಧಿಕಾರಿಗಳ ಬಳಿ ಸಹಿ ಮಾಡಿಸುವುದು ಎಷ್ಟು ಕಷ್ಟ ನನಗೆ ಗೊತ್ತಿದೆ. ಪ್ರತಿಸಲ ಗುಮಾಸ್ತನ ಕೆಲಸ ಮಾಡಲಾಗುವುದಿಲ್ಲ ಎಂದು ಸಿಡಿಮಿಡಿಗೊಂಡರು.

ಜಯಲಕ್ಷ್ಮೀ ವಿಲಾಸ ಅರಮನೆ ಕಟ್ಟಡ ಹಸ್ತಾಂತರಿಸುವಂತೆ ೮ ತಿಂಗಳಿಂದ ಪ್ರಕ್ರಿಯೆ ನಡೆಯುತ್ತಿದೆ. ಸಿಂಡಿಕೇಟ್ ಸಭೆಯಲ್ಲೂ ಅನುಮೋದನೆ ದೊರೆತಿರುವಾಗ ಕುಲಸಚಿವೆರಾದ ವಿ.ಆರ್.ಶೈಲಜಾ ಅವರು ಇಲ್ಲದ ತರಲೇ ಮಾಡುತ್ತಿದ್ದಾರೆ ಎಂದು ಸಭೆಯ ಬಳಿಕ ಸುದ್ದಿಗಾರರಿಗೆ ವಿವರಿಸಿದರು.

ಜಯಲಕ್ಷ್ಮೀ ವಿಲಾಸ ಅರಮನೆ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಮುಖ್ಯಮಂತ್ರಿಗಳು ೨೭.೫ ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ನವೀಕರಣ ಮಾಡಿ ೪ ಕೊಠಡಿಗಳನ್ನು ಬಳಸುತ್ತೇವೆ. ಉಳಿದದ್ದನ್ನು ಮೈಸೂರು ವಿವಿ ಬಳಸಬಹುದು. ಚುನಾವಣೆ ಬಂದರೆ ಪ್ರಾಜೆಕ್ಟ್ ಮುಂದಕ್ಕೆ ಹೋಗಲಿದೆ ಎಂದರು.

ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದ್ದೇನೆ. ಸಚಿವ ಸಂಪುಟ ಸಭೆ ಅನುಮೋದನೆಗೆ ಕಳುಹಿಸಬೇಕು. ನವೀಕರಣ ಮಾಡದಿದ್ದರೆ ಇಡೀ ಕಟ್ಟಡ ಬಿದ್ದು ಹೋಗುತ್ತದೆ. ಮೈಸೂರು ವಿವಿ ಸಹಕಾರ ಕೊಡಬೇಕು. ಕೇಂದ್ರ ಸ್ಥಾಪನೆಯಿಂದ ವಿವಿಗೆ ಗೌರವ ಬರಲಿದೆ ಎಂದು ತಿಳಿಸಿದರು.

ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ.ಎಚ್.ರಾಜಶೇಖರ, ಸಿಂಡಿಕೇಟ್ ಸದಸ್ಯರು ಸಭೆಯಲ್ಲಿ ಹಾಜರಿದ್ದರು.


ಜಯಲಕ್ಷ್ಮೀ ವಿಲಾಸ ಅರಮನೆ ಹಸ್ತಾಂತರ ಸಂಬಂಧ ಚರ್ಚಿಸಿ ಎರಡು ದಿನಗಳ ಒಳಗೆ ತೀರ್ಮಾನ ತಿಳಿಸುತ್ತೇವೆ.
ಕಾನೂನು ತಜ್ಞರ ಅಭಿಪ್ರಾಯ ಪಡೆಯುವುದನ್ನು ತಕ್ಷಣ ಮಾಡುತ್ತೇವೆ. ವಿವಿಯಿಂದ ವಿಳಂಬವಾಗದಂತೆ ನೋಡಿಕೊಳ್ಳುತ್ತೇವೆ.

ಪ್ರೊ.ಎಚ್.ರಾಜಶೇಖರ, ಹಂಗಾಮಿ ಕುಲಪತಿ


 

ನಾನೊಬ್ಬ ಕನ್ನಡದ ಬರಹಗಾರ, ಕನ್ನಡದ ಕೆಲಸಕ್ಕಾಗಿ ಕೆಲಸ ಮಾಡುವೆ. ಉಮಾಶ್ರೀ ಸಚಿವರಾಗಿದ್ದಾಗ ಕೇಂದ್ರವನ್ನು ಬೆಂಗಳೂರಿಗೆ ಹಸ್ತಾಂತರಿಸಲು ಮುಂದಾದಾಗ ತೀವ್ರ ವಿರೋಧ ವ್ಯಕ್ತವಾಗಿ ಕೈಬಿಡಲಾಯಿತು. ಸಿ.ಟಿ.ರವಿ ಸಚಿವರಾಗಿದ್ದಾಗ ಮತ್ತೆ ಉಳಿಸಿ ಅನುದಾನ ಕೊಡಲಾಯಿತು. ಈಗಿನ ಸಚಿವ ಸುನಿಲ್ ಕುಮಾರ್ ಮುತುವರ್ಜಿ ವಹಿಸಿದ್ದಾರೆ. ಹೀಗಿರುವಾಗ ಎಂಟು ತಿಂಗಳಿಂದ ವಿಳಂಬ ಸಲ್ಲದು.

ಪ್ರತಾಪ್ ಸಿಂಹ, ಸಂಸದರು.

 

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

12 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

16 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

16 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago