ಜಿಲ್ಲೆಗಳು

ಮೈಸೂರು ವಿವಿ ಕುಲಸಚಿವರ ವಿರುದ್ಧ ಸಂಸದ ಗರಂ

ಮೈಸೂರು: ಶಾಸ್ತ್ರೀಯ ಕನ್ನಡ ಸ್ವಾಯತ್ತ ಕೇಂದ್ರ ಸ್ಥಾಪನೆಗೆ ಜಯಲಕ್ಷ್ಮೀ ವಿಲಾಸ ಅರಮನೆ ಹಸ್ತಾಂತರಕ್ಕೂ ಮುನ್ನ ಕಾನೂನು ಅಭಿಪ್ರಾಯ ಪಡೆಯಬೇಕೆಂದು ಹೇಳಿದ ಮೈಸೂರು ವಿವಿ ಕುಲಸಚಿವರಾದ ವಿ.ಆರ್.ಶೈಲಜಾ ವಿರುದ್ಧ ಸಂಸದ ಪ್ರತಾಪಸಿಂಹ ಹರಿಹಾಯ್ದರು.

ಕ್ರಾಫರ್ಡ್ ಭವನದ ಶಿಕ್ಷಣ ಮಂಡಳಿ ಸಭಾ ಭವನದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಕುಲಸಚಿವರಾದ ವಿ.ಆರ್.ಶೈಲಜಾ,
ಸಿಂಡಿಕೇಟ್ ಸಭೆಗೂ ಮುನ್ನ ಕಾನೂನು ತಜ್ಞರ ಅಭಿಪ್ರಾಯ ಪಡೆಯಬೇಕಿತ್ತು. ಆದರೆ, ನೇರವಾಗಿ ವಿಷಯ ತರಲಾಗಿದೆ. ಹಾಗಾಗಿ,ಕಾನೂನು ತಜ್ಞರ ವರದಿ ಪಡೆಯಬೇಕಿದೆ ಎಂದು ಹೇಳಿದರು. ಕುಲಸಚಿವರ ಈ ಮಾತಿಗೆ ಕುಪಿತರಾದ ಸಂಸದ ಪ್ರತಾಪಸಿಂಹ, ಸರ್ಕಾರ ಅನುಮತಿ ಕೊಟ್ಟಿರುವಾಗ ಇನ್ಯಾರಿಂದ ಅನುಮತಿ ಕೊಡಬೇಕು ಎಂದು ಕಿಡಿಕಾರಿದರು.ಜಯಲಕ್ಷ್ಮೀ ವಿಲಾಸ ಅರಮನೆ ಮಹಾರಾಜರು ಮೈಸೂರು ವಿವಿಗೆ ಕೊಟ್ಟಿರುವ ಭಿಕ್ಷೆ. ಯಾರ ಮನೆಯ ಆಸ್ತಿಯನ್ನು ಕೇಳುತ್ತಿಲ್ಲ. ಕನ್ನಡದ ಕೆಲಸ ಆಗಬೇಕು. ಕೆಎಎಸ್ ಅಧಿಕಾರಿ ನಮಗೇ ಡಿಕ್ಟೇಟ್ ಮಾಡುತ್ತಾರೆ. ಅಡ್ವೋಕೇಟ್ ಜನರಲ್ ರೀತಿಯಲ್ಲಿ ಮಾತಾಡುತ್ತಾರೆಂದು ಕುಪಿತರಾದರು.

ಕಾನೂನು ಅಭಿಪ್ರಾಯ ಪಡೆಯಬೇಕಾದ್ದು ಯಾರ ಜವಾಬ್ದಾರಿ. ಅದನ್ನು ನಾನೇ ಹೇಳಿಕೊಡಬೇಕೆ? ಐಎಎಸ್ ಅಧಿಕಾರಿಗಳ ಬಳಿ ಸಹಿ ಮಾಡಿಸುವುದು ಎಷ್ಟು ಕಷ್ಟ ನನಗೆ ಗೊತ್ತಿದೆ. ಪ್ರತಿಸಲ ಗುಮಾಸ್ತನ ಕೆಲಸ ಮಾಡಲಾಗುವುದಿಲ್ಲ ಎಂದು ಸಿಡಿಮಿಡಿಗೊಂಡರು.

ಜಯಲಕ್ಷ್ಮೀ ವಿಲಾಸ ಅರಮನೆ ಕಟ್ಟಡ ಹಸ್ತಾಂತರಿಸುವಂತೆ ೮ ತಿಂಗಳಿಂದ ಪ್ರಕ್ರಿಯೆ ನಡೆಯುತ್ತಿದೆ. ಸಿಂಡಿಕೇಟ್ ಸಭೆಯಲ್ಲೂ ಅನುಮೋದನೆ ದೊರೆತಿರುವಾಗ ಕುಲಸಚಿವೆರಾದ ವಿ.ಆರ್.ಶೈಲಜಾ ಅವರು ಇಲ್ಲದ ತರಲೇ ಮಾಡುತ್ತಿದ್ದಾರೆ ಎಂದು ಸಭೆಯ ಬಳಿಕ ಸುದ್ದಿಗಾರರಿಗೆ ವಿವರಿಸಿದರು.

ಜಯಲಕ್ಷ್ಮೀ ವಿಲಾಸ ಅರಮನೆ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಮುಖ್ಯಮಂತ್ರಿಗಳು ೨೭.೫ ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ನವೀಕರಣ ಮಾಡಿ ೪ ಕೊಠಡಿಗಳನ್ನು ಬಳಸುತ್ತೇವೆ. ಉಳಿದದ್ದನ್ನು ಮೈಸೂರು ವಿವಿ ಬಳಸಬಹುದು. ಚುನಾವಣೆ ಬಂದರೆ ಪ್ರಾಜೆಕ್ಟ್ ಮುಂದಕ್ಕೆ ಹೋಗಲಿದೆ ಎಂದರು.

ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದ್ದೇನೆ. ಸಚಿವ ಸಂಪುಟ ಸಭೆ ಅನುಮೋದನೆಗೆ ಕಳುಹಿಸಬೇಕು. ನವೀಕರಣ ಮಾಡದಿದ್ದರೆ ಇಡೀ ಕಟ್ಟಡ ಬಿದ್ದು ಹೋಗುತ್ತದೆ. ಮೈಸೂರು ವಿವಿ ಸಹಕಾರ ಕೊಡಬೇಕು. ಕೇಂದ್ರ ಸ್ಥಾಪನೆಯಿಂದ ವಿವಿಗೆ ಗೌರವ ಬರಲಿದೆ ಎಂದು ತಿಳಿಸಿದರು.

ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ.ಎಚ್.ರಾಜಶೇಖರ, ಸಿಂಡಿಕೇಟ್ ಸದಸ್ಯರು ಸಭೆಯಲ್ಲಿ ಹಾಜರಿದ್ದರು.


ಜಯಲಕ್ಷ್ಮೀ ವಿಲಾಸ ಅರಮನೆ ಹಸ್ತಾಂತರ ಸಂಬಂಧ ಚರ್ಚಿಸಿ ಎರಡು ದಿನಗಳ ಒಳಗೆ ತೀರ್ಮಾನ ತಿಳಿಸುತ್ತೇವೆ.
ಕಾನೂನು ತಜ್ಞರ ಅಭಿಪ್ರಾಯ ಪಡೆಯುವುದನ್ನು ತಕ್ಷಣ ಮಾಡುತ್ತೇವೆ. ವಿವಿಯಿಂದ ವಿಳಂಬವಾಗದಂತೆ ನೋಡಿಕೊಳ್ಳುತ್ತೇವೆ.

ಪ್ರೊ.ಎಚ್.ರಾಜಶೇಖರ, ಹಂಗಾಮಿ ಕುಲಪತಿ


 

ನಾನೊಬ್ಬ ಕನ್ನಡದ ಬರಹಗಾರ, ಕನ್ನಡದ ಕೆಲಸಕ್ಕಾಗಿ ಕೆಲಸ ಮಾಡುವೆ. ಉಮಾಶ್ರೀ ಸಚಿವರಾಗಿದ್ದಾಗ ಕೇಂದ್ರವನ್ನು ಬೆಂಗಳೂರಿಗೆ ಹಸ್ತಾಂತರಿಸಲು ಮುಂದಾದಾಗ ತೀವ್ರ ವಿರೋಧ ವ್ಯಕ್ತವಾಗಿ ಕೈಬಿಡಲಾಯಿತು. ಸಿ.ಟಿ.ರವಿ ಸಚಿವರಾಗಿದ್ದಾಗ ಮತ್ತೆ ಉಳಿಸಿ ಅನುದಾನ ಕೊಡಲಾಯಿತು. ಈಗಿನ ಸಚಿವ ಸುನಿಲ್ ಕುಮಾರ್ ಮುತುವರ್ಜಿ ವಹಿಸಿದ್ದಾರೆ. ಹೀಗಿರುವಾಗ ಎಂಟು ತಿಂಗಳಿಂದ ವಿಳಂಬ ಸಲ್ಲದು.

ಪ್ರತಾಪ್ ಸಿಂಹ, ಸಂಸದರು.

 

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

5 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

5 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

6 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

8 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago