ಜಿಲ್ಲೆಗಳು

ಮೈಸೂರು ವಿವಿ ಕುಲಪತಿ ಸ್ಥಾನಕ್ಕೆ ಮೂವರ ಹೆಸರು ಶಿಫಾರಸು

ಪ್ರೊ.ಎಂ.ಎಸ್.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸರ್ಚ್ ಕಮಿಟಿ ಸಭೆ, ಶರತ್ ಅನಂತಮೂರ್ತಿ ಸೇರಿ ಮೂವರ ಹೆಸರು ಅಂತಿಮ
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ನೂತನ ಕುಲಪತಿ ಸ್ಥಾನಕ್ಕೆ ಮೂವರ ಹೆಸರನ್ನು ಶೋಧನಾ ಸಮಿತಿ ಶಿಫಾರಸು ಮಾಡಿದೆ.
ಬೆಂಗಳೂರಿನ ಸಿಎಂಆರ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಎಸ್.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಶೋಧನಾ ಸಮಿತಿ ಸಭೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಡಿ.ಎಸ್.ಗುರು, ಮನೋವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಜಿ.ವೆಂಕಟೇಶ್ ಕುಮಾರ್, ಬೆಂಗಳೂರು ವಿಶ್ವವಿದ್ಯಾನಿಲಯದ ಡಾ.ಶರತ್ ಅನಂತಮೂರ್ತಿ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಯು. ಆರ್. ಅನಂತಮೂರ್ತಿ ಅವರ ಪುತ್ರ ಡಾ.ಶರತ್ ಅನಂತಮೂರ್ತಿ ಅವರ ಹೆಸರು ಸತತ ಎರಡನೇ ಬಾರಿಗೆ ಕುಲಪತಿ ಸ್ಥಾನಕ್ಕೆ ಕೇಳಿ ಬಂದಿದೆ.
ಮೈಸೂರು ವಿವಿಯ ಕುಲಪತಿಯಾಗಿದ್ದ ಪ್ರೊ.ಜಿ.ಹೇಮಂತ ಕುಮಾರ್ ಅವರ ಅವಧಿಯು ನ.೧೪ಕ್ಕೆ ಮುಕ್ತಾಯವಾಗಿದ್ದರಿಂದ ಬೆಂಗಳೂರು ಸಿಎಂಆರ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ, ಮೈಸೂರಿನ ಎನ್ಐಇ ಸಂಸ್ಥೆ ಸಿಒಇ ಆಗಿದ್ದ ಪ್ರೊ.ಎಂ.ಎಸ್.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಧ್ಯಪ್ರದೇಶದ ಇಂದಿರಾಗಾಂಧಿ ನ್ಯಾಷನಲ್ ಟ್ರ್ತ್ಯೈಬಲ್ ಯೂನಿವರ್ಸಿಟಿಯ ಕುಲಪತಿ ಪ್ರೊ.ಪ್ರಕಾಶ್ ಮಣಿ ತ್ರಿಪಾಠಿ, ಪಂಜಾಬ್ ಸೆಂಟ್ರಲ್ ಯೂನಿವರ್ಸಿಟಿಯ ಕುಲಪತಿ ಪ್ರೊ. ರಾಘವೇಂದ್ರ ಪಿ.ತಿವಾರಿ, ಸೆಂಟ್ರಲ್ ಡ್ರಗ್ ರಿಸರ್ಚ್ ಇನ್ಸ್ಟಿಟ್ಯೂಟ್ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ ನೇತೃತ್ವದ ಶೋಧನಾ ಸಮಿತಿ ರಚಿಸಿ ಆದೇಶ ಹೊರಡಿಸಿತ್ತು.
ನಂತರ, ಮೈಸೂರು ವಿವಿಗೆ ಹಂಗಾಮಿ ಕುಲಪತಿಯಾಗಿ ಪ್ರೊ.ಎಚ್.ರಾಜಶೇಖರ್ ಅವರನ್ನು ನಿಯೋಜಿಸಿದ್ದಲ್ಲದೆ, ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. ಅದರಂತೆ ಮೈಸೂರು ವಿವಿಯ ಪ್ರೊ.ಎಚ್.ರಾಜಶೇಖರ್, ಪ್ರೊ.ಜಿ.ವೆಂಕಟೇಶ್ ಕುಮಾರ್, ಡಿ.ಎಸ್.ಗುರು, ಪ್ರೊ.ಶರತ್ ಅನಂತಮೂರ್ತಿ, ಎಚ್.ಟಿ.ಬಸವರಾಜಪ್ಪ, ಎಚ್.ಎಸ್.ಬೋಜ್ಯ ನಾಯ್ಕ,ಎಂ.ಚಂದ್ರಶೇಖರ್, ಕೆ.ಚನ್ನಕೇಶವಲು,ಎಂ.ಧನಂಜಯ ಸೇರಿದಂತೆ ೭೧ ಮಂದಿ ಅರ್ಜಿ ಸಲ್ಲಿಸಿದ್ದರು.
ಬಲ್ಲ ಮೂಲಗಳ ಪ್ರಕಾರ ಇತ್ತೀಚಿನ ವರ್ಷಗಳಲ್ಲಿ ಮೈಸೂರು ವಿವಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದವರನ್ನೇ ಕುಲಪತಿ ಸ್ಥಾನಕ್ಕೆ ನೇಮಿಸಿಕೊಂಡು ಬರಲಾಗುತ್ತಿದ್ದು, ಪ್ರೊ.ಜಿ.ವೆಂಕಟೇಶ್ ಕುಮಾರ್ ಅಥವಾ ಡಿ.ಎಸ್.ಗುರು ಅವರಲ್ಲಿ ಒಬ್ಬರಿಗೆ ಅವಕಾಶ ಒಲಿಯಬಹುದು. ಇಲ್ಲದಿದ್ದರೆ ಶರತ್ ಅನಂತಮೂರ್ತಿಗೆ ಅವಕಾಶ ಸಿಗಬಹುದೆಂದು ಹೇಳಲಾಗಿದೆ.

andolanait

Recent Posts

ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…

16 mins ago

ಕಪಿಲಾ ನದಿಗೆ ಮತ್ತೊಂದು ಸೇತುವೆ

ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…

39 mins ago

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸಂಕಷ್ಟ

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…

44 mins ago

ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…

1 hour ago

ನಿಜ್ಜರ್ ಹತ್ಯೆ ಪ್ರತಿಧ್ವನಿ-ಕೆನಡಾ ಭಾರತೀಯರಲ್ಲಿ ಆತಂಕ

ಅಮಿತ್ ಶಾ, ಅಜಿತ್‌ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್‌ ಸಿಂಗ್ ನಿಜ್ಜರ್ ಹತ್ಯೆಯ ನಂತರದ…

1 hour ago

ಸೈಕಲ್ ಎಂಬ ಮಾಯಾಂಗನೆಯನೇರಿ..!

ಮೂಲ : ಪೂಜ ಹರೀಶ್‌, ಮೈಸೂರು ಅನುವಾದ: ಎನ್.ನರಸಿಂಹಸ್ವಾಮಿ, ನಾಗಮಂಗಲ ಜೀವನ ಒಂದು ಸೈಕಲ್ ಸವಾರಿಯಂತೆ, ಆಯ ತಪ್ಪದಿರಲು ಮುಂದೆ…

1 hour ago