ಜಿಲ್ಲೆಗಳು

ಮೈಸೂರು ವಿವಿ ಕುಲಪತಿ ಸ್ಥಾನಕ್ಕೆ ಮೂವರ ಹೆಸರು ಶಿಫಾರಸು

ಪ್ರೊ.ಎಂ.ಎಸ್.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸರ್ಚ್ ಕಮಿಟಿ ಸಭೆ, ಶರತ್ ಅನಂತಮೂರ್ತಿ ಸೇರಿ ಮೂವರ ಹೆಸರು ಅಂತಿಮ
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ನೂತನ ಕುಲಪತಿ ಸ್ಥಾನಕ್ಕೆ ಮೂವರ ಹೆಸರನ್ನು ಶೋಧನಾ ಸಮಿತಿ ಶಿಫಾರಸು ಮಾಡಿದೆ.
ಬೆಂಗಳೂರಿನ ಸಿಎಂಆರ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಎಸ್.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಶೋಧನಾ ಸಮಿತಿ ಸಭೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಡಿ.ಎಸ್.ಗುರು, ಮನೋವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಜಿ.ವೆಂಕಟೇಶ್ ಕುಮಾರ್, ಬೆಂಗಳೂರು ವಿಶ್ವವಿದ್ಯಾನಿಲಯದ ಡಾ.ಶರತ್ ಅನಂತಮೂರ್ತಿ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಯು. ಆರ್. ಅನಂತಮೂರ್ತಿ ಅವರ ಪುತ್ರ ಡಾ.ಶರತ್ ಅನಂತಮೂರ್ತಿ ಅವರ ಹೆಸರು ಸತತ ಎರಡನೇ ಬಾರಿಗೆ ಕುಲಪತಿ ಸ್ಥಾನಕ್ಕೆ ಕೇಳಿ ಬಂದಿದೆ.
ಮೈಸೂರು ವಿವಿಯ ಕುಲಪತಿಯಾಗಿದ್ದ ಪ್ರೊ.ಜಿ.ಹೇಮಂತ ಕುಮಾರ್ ಅವರ ಅವಧಿಯು ನ.೧೪ಕ್ಕೆ ಮುಕ್ತಾಯವಾಗಿದ್ದರಿಂದ ಬೆಂಗಳೂರು ಸಿಎಂಆರ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ, ಮೈಸೂರಿನ ಎನ್ಐಇ ಸಂಸ್ಥೆ ಸಿಒಇ ಆಗಿದ್ದ ಪ್ರೊ.ಎಂ.ಎಸ್.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಧ್ಯಪ್ರದೇಶದ ಇಂದಿರಾಗಾಂಧಿ ನ್ಯಾಷನಲ್ ಟ್ರ್ತ್ಯೈಬಲ್ ಯೂನಿವರ್ಸಿಟಿಯ ಕುಲಪತಿ ಪ್ರೊ.ಪ್ರಕಾಶ್ ಮಣಿ ತ್ರಿಪಾಠಿ, ಪಂಜಾಬ್ ಸೆಂಟ್ರಲ್ ಯೂನಿವರ್ಸಿಟಿಯ ಕುಲಪತಿ ಪ್ರೊ. ರಾಘವೇಂದ್ರ ಪಿ.ತಿವಾರಿ, ಸೆಂಟ್ರಲ್ ಡ್ರಗ್ ರಿಸರ್ಚ್ ಇನ್ಸ್ಟಿಟ್ಯೂಟ್ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ ನೇತೃತ್ವದ ಶೋಧನಾ ಸಮಿತಿ ರಚಿಸಿ ಆದೇಶ ಹೊರಡಿಸಿತ್ತು.
ನಂತರ, ಮೈಸೂರು ವಿವಿಗೆ ಹಂಗಾಮಿ ಕುಲಪತಿಯಾಗಿ ಪ್ರೊ.ಎಚ್.ರಾಜಶೇಖರ್ ಅವರನ್ನು ನಿಯೋಜಿಸಿದ್ದಲ್ಲದೆ, ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. ಅದರಂತೆ ಮೈಸೂರು ವಿವಿಯ ಪ್ರೊ.ಎಚ್.ರಾಜಶೇಖರ್, ಪ್ರೊ.ಜಿ.ವೆಂಕಟೇಶ್ ಕುಮಾರ್, ಡಿ.ಎಸ್.ಗುರು, ಪ್ರೊ.ಶರತ್ ಅನಂತಮೂರ್ತಿ, ಎಚ್.ಟಿ.ಬಸವರಾಜಪ್ಪ, ಎಚ್.ಎಸ್.ಬೋಜ್ಯ ನಾಯ್ಕ,ಎಂ.ಚಂದ್ರಶೇಖರ್, ಕೆ.ಚನ್ನಕೇಶವಲು,ಎಂ.ಧನಂಜಯ ಸೇರಿದಂತೆ ೭೧ ಮಂದಿ ಅರ್ಜಿ ಸಲ್ಲಿಸಿದ್ದರು.
ಬಲ್ಲ ಮೂಲಗಳ ಪ್ರಕಾರ ಇತ್ತೀಚಿನ ವರ್ಷಗಳಲ್ಲಿ ಮೈಸೂರು ವಿವಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದವರನ್ನೇ ಕುಲಪತಿ ಸ್ಥಾನಕ್ಕೆ ನೇಮಿಸಿಕೊಂಡು ಬರಲಾಗುತ್ತಿದ್ದು, ಪ್ರೊ.ಜಿ.ವೆಂಕಟೇಶ್ ಕುಮಾರ್ ಅಥವಾ ಡಿ.ಎಸ್.ಗುರು ಅವರಲ್ಲಿ ಒಬ್ಬರಿಗೆ ಅವಕಾಶ ಒಲಿಯಬಹುದು. ಇಲ್ಲದಿದ್ದರೆ ಶರತ್ ಅನಂತಮೂರ್ತಿಗೆ ಅವಕಾಶ ಸಿಗಬಹುದೆಂದು ಹೇಳಲಾಗಿದೆ.

andolanait

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

2 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

2 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

4 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

5 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

6 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

7 hours ago