ಜಿಲ್ಲೆಗಳು

ಮೈಸೂರು ವಿವಿ ಕುಲಪತಿ ಸ್ಥಾನಕ್ಕೆ ಮೂವರ ಹೆಸರು ಶಿಫಾರಸು

ಪ್ರೊ.ಎಂ.ಎಸ್.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸರ್ಚ್ ಕಮಿಟಿ ಸಭೆ, ಶರತ್ ಅನಂತಮೂರ್ತಿ ಸೇರಿ ಮೂವರ ಹೆಸರು ಅಂತಿಮ
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ನೂತನ ಕುಲಪತಿ ಸ್ಥಾನಕ್ಕೆ ಮೂವರ ಹೆಸರನ್ನು ಶೋಧನಾ ಸಮಿತಿ ಶಿಫಾರಸು ಮಾಡಿದೆ.
ಬೆಂಗಳೂರಿನ ಸಿಎಂಆರ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಎಸ್.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಶೋಧನಾ ಸಮಿತಿ ಸಭೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಡಿ.ಎಸ್.ಗುರು, ಮನೋವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಜಿ.ವೆಂಕಟೇಶ್ ಕುಮಾರ್, ಬೆಂಗಳೂರು ವಿಶ್ವವಿದ್ಯಾನಿಲಯದ ಡಾ.ಶರತ್ ಅನಂತಮೂರ್ತಿ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಯು. ಆರ್. ಅನಂತಮೂರ್ತಿ ಅವರ ಪುತ್ರ ಡಾ.ಶರತ್ ಅನಂತಮೂರ್ತಿ ಅವರ ಹೆಸರು ಸತತ ಎರಡನೇ ಬಾರಿಗೆ ಕುಲಪತಿ ಸ್ಥಾನಕ್ಕೆ ಕೇಳಿ ಬಂದಿದೆ.
ಮೈಸೂರು ವಿವಿಯ ಕುಲಪತಿಯಾಗಿದ್ದ ಪ್ರೊ.ಜಿ.ಹೇಮಂತ ಕುಮಾರ್ ಅವರ ಅವಧಿಯು ನ.೧೪ಕ್ಕೆ ಮುಕ್ತಾಯವಾಗಿದ್ದರಿಂದ ಬೆಂಗಳೂರು ಸಿಎಂಆರ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ, ಮೈಸೂರಿನ ಎನ್ಐಇ ಸಂಸ್ಥೆ ಸಿಒಇ ಆಗಿದ್ದ ಪ್ರೊ.ಎಂ.ಎಸ್.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಧ್ಯಪ್ರದೇಶದ ಇಂದಿರಾಗಾಂಧಿ ನ್ಯಾಷನಲ್ ಟ್ರ್ತ್ಯೈಬಲ್ ಯೂನಿವರ್ಸಿಟಿಯ ಕುಲಪತಿ ಪ್ರೊ.ಪ್ರಕಾಶ್ ಮಣಿ ತ್ರಿಪಾಠಿ, ಪಂಜಾಬ್ ಸೆಂಟ್ರಲ್ ಯೂನಿವರ್ಸಿಟಿಯ ಕುಲಪತಿ ಪ್ರೊ. ರಾಘವೇಂದ್ರ ಪಿ.ತಿವಾರಿ, ಸೆಂಟ್ರಲ್ ಡ್ರಗ್ ರಿಸರ್ಚ್ ಇನ್ಸ್ಟಿಟ್ಯೂಟ್ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ ನೇತೃತ್ವದ ಶೋಧನಾ ಸಮಿತಿ ರಚಿಸಿ ಆದೇಶ ಹೊರಡಿಸಿತ್ತು.
ನಂತರ, ಮೈಸೂರು ವಿವಿಗೆ ಹಂಗಾಮಿ ಕುಲಪತಿಯಾಗಿ ಪ್ರೊ.ಎಚ್.ರಾಜಶೇಖರ್ ಅವರನ್ನು ನಿಯೋಜಿಸಿದ್ದಲ್ಲದೆ, ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. ಅದರಂತೆ ಮೈಸೂರು ವಿವಿಯ ಪ್ರೊ.ಎಚ್.ರಾಜಶೇಖರ್, ಪ್ರೊ.ಜಿ.ವೆಂಕಟೇಶ್ ಕುಮಾರ್, ಡಿ.ಎಸ್.ಗುರು, ಪ್ರೊ.ಶರತ್ ಅನಂತಮೂರ್ತಿ, ಎಚ್.ಟಿ.ಬಸವರಾಜಪ್ಪ, ಎಚ್.ಎಸ್.ಬೋಜ್ಯ ನಾಯ್ಕ,ಎಂ.ಚಂದ್ರಶೇಖರ್, ಕೆ.ಚನ್ನಕೇಶವಲು,ಎಂ.ಧನಂಜಯ ಸೇರಿದಂತೆ ೭೧ ಮಂದಿ ಅರ್ಜಿ ಸಲ್ಲಿಸಿದ್ದರು.
ಬಲ್ಲ ಮೂಲಗಳ ಪ್ರಕಾರ ಇತ್ತೀಚಿನ ವರ್ಷಗಳಲ್ಲಿ ಮೈಸೂರು ವಿವಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದವರನ್ನೇ ಕುಲಪತಿ ಸ್ಥಾನಕ್ಕೆ ನೇಮಿಸಿಕೊಂಡು ಬರಲಾಗುತ್ತಿದ್ದು, ಪ್ರೊ.ಜಿ.ವೆಂಕಟೇಶ್ ಕುಮಾರ್ ಅಥವಾ ಡಿ.ಎಸ್.ಗುರು ಅವರಲ್ಲಿ ಒಬ್ಬರಿಗೆ ಅವಕಾಶ ಒಲಿಯಬಹುದು. ಇಲ್ಲದಿದ್ದರೆ ಶರತ್ ಅನಂತಮೂರ್ತಿಗೆ ಅವಕಾಶ ಸಿಗಬಹುದೆಂದು ಹೇಳಲಾಗಿದೆ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

3 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

14 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

14 hours ago