ಜಿಲ್ಲೆಗಳು

ಡಿ.9ರಂದು ವಿಶ್ವ ವಿಶೇಷಚೇತನರ ದಿನ ಆಚರಣೆ

ಮೈಸೂರು: ಲಯನ್ಸ್ ಕ್ಲಬ್ ಆಫ್ ಮೈಸೂರು, ಗೋಲ್ಡನ್ ಸಿಟಿ ಮತ್ತು ಮೈಸೂರು ಸ್ತ್ರೀ ಶಕ್ತಿ ಮಹಿಳಾ ವೇದಿಕೆ ಇವುಗಳ ಸಹಯೋಗದಲ್ಲಿ ಡಿ.೯ರಂದು ವಿಶ್ವ ವಿಶೇಷಚೇತನರ ದಿನಾಚರಣೆಯನ್ನು ಹಮ್ಮಿಕೊಂಡಿದ್ದು, ೧೦ ಮಂದಿ ವಿಕಲಾಂಗರಿಗೆ ಉಚಿತ ಕೃತಕ ಕಾಲು ಪರಿಕರವನ್ನು ವಿತರಿಸಲಾಗುವುದು ಎಂದು ಲಯನ್ಸ್ ಕ್ಲಬ್ ಆಫ್ ಮೈಸೂರು ಕಾರ್ಯದರ್ಶಿ ಪ್ರಮಿಳಾ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೧೧ ಗಂಟೆಗೆ ಹೊಸಮಠದ ನಟರಾಜ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಮಹಾಪೌರ ಶಿವಕುಮಾರ್, ಶಾಸಕ ಎಲ್.ನಾಗೇಂದ್ರ, ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ನಗರಪಾಲಿಕೆ ಸದಸ್ಯರಾದ ಭಾಗ್ಯ ಮಾದೇಶ್, ಕಾಂಗ್ರೆಸ್ ಮುಖಂಡ ಹರೀಶ್‌ಗೌಡ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಈಗಾಗಲೇ ಗುರುತಿಸಲಾಗಿರುವ ೧೦ ಮಂದಿ ಬಡ ಕುಟುಂಬದ ವಿಕಲಾಂಗರಿಗೆ ಕೃತಕ ಕಾಲು ವಿತರಿಸಲಾಗುವುದು ಎಂದು ತಿಳಿಸಿದರು.

ಸುರೇಶ್, ಜಿ.ಸೋಮಚಂದ್ರ ಮೂರ್ತಿ, ಲಕ್ಷ್ಮೀಪತಿ, ಜಿ.ಎನ್.ಉಮಾಶಂಕರ್, ಆಶಾ ಜೆ.ಮಂಜುನಾಥ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

7 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

9 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

9 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

9 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

9 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

9 hours ago