ಮೈಸೂರು: ಲಯನ್ಸ್ ಕ್ಲಬ್ ಆಫ್ ಮೈಸೂರು, ಗೋಲ್ಡನ್ ಸಿಟಿ ಮತ್ತು ಮೈಸೂರು ಸ್ತ್ರೀ ಶಕ್ತಿ ಮಹಿಳಾ ವೇದಿಕೆ ಇವುಗಳ ಸಹಯೋಗದಲ್ಲಿ ಡಿ.೯ರಂದು ವಿಶ್ವ ವಿಶೇಷಚೇತನರ ದಿನಾಚರಣೆಯನ್ನು ಹಮ್ಮಿಕೊಂಡಿದ್ದು, ೧೦ ಮಂದಿ ವಿಕಲಾಂಗರಿಗೆ ಉಚಿತ ಕೃತಕ ಕಾಲು ಪರಿಕರವನ್ನು ವಿತರಿಸಲಾಗುವುದು ಎಂದು ಲಯನ್ಸ್ ಕ್ಲಬ್ ಆಫ್ ಮೈಸೂರು ಕಾರ್ಯದರ್ಶಿ ಪ್ರಮಿಳಾ ಹೇಳಿದರು.
ನಗರದ ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೧೧ ಗಂಟೆಗೆ ಹೊಸಮಠದ ನಟರಾಜ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಮಹಾಪೌರ ಶಿವಕುಮಾರ್, ಶಾಸಕ ಎಲ್.ನಾಗೇಂದ್ರ, ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ನಗರಪಾಲಿಕೆ ಸದಸ್ಯರಾದ ಭಾಗ್ಯ ಮಾದೇಶ್, ಕಾಂಗ್ರೆಸ್ ಮುಖಂಡ ಹರೀಶ್ಗೌಡ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಈಗಾಗಲೇ ಗುರುತಿಸಲಾಗಿರುವ ೧೦ ಮಂದಿ ಬಡ ಕುಟುಂಬದ ವಿಕಲಾಂಗರಿಗೆ ಕೃತಕ ಕಾಲು ವಿತರಿಸಲಾಗುವುದು ಎಂದು ತಿಳಿಸಿದರು.
ಸುರೇಶ್, ಜಿ.ಸೋಮಚಂದ್ರ ಮೂರ್ತಿ, ಲಕ್ಷ್ಮೀಪತಿ, ಜಿ.ಎನ್.ಉಮಾಶಂಕರ್, ಆಶಾ ಜೆ.ಮಂಜುನಾಥ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…