ಜಿಲ್ಲೆಗಳು

ಮೈಸೂರು ಜೂನಲ್ಲಿ ಗೊರಿಲ್ಲಾದ ಹುಟ್ಟು ಹಬ್ಬದ ಸಂಭ್ರಮ

ಮೈಸೂರು: ಮೈಸೂರಿನ ಮೃಗಾಲಯದಲ್ಲಿ ಗೊರಿಲ್ಲಾದ ಹುಟ್ಟು ಹಬ್ಬದ ಸಂಭ್ರಮ ಮನೆ ಮಾಡಿತ್ತು. ೧೫ನೇ ವಸಂತಕ್ಕೆ ಕಾಲಿರಿಸಿದ್ದ ‘ತಬೋ’ ಹೆಸರಿನ ಗೊರಿಲ್ಲಾಗೆ ಇಷ್ಟದ ಹಣ್ಣು-ತರಕಾರಿ ನೀಡಿ ಜನ್ಮ ದಿನ ಆಚರಿಸಲಾಯಿತು.

ಕೊರೊನಾದ ಬಳಿಕ ಕಳೆದ ವರ್ಷ ಜರ್ಮನಿಯಿಂದ ಮೈಸೂರು ಮೃಗಾಲಯಕ್ಕೆ ಪ್ರಾಣಿ ವಿನಿಮಯ ಯೋಜನೆಯಡಿ ಎರಡು ಗೊರಿಲ್ಲಾ ತರಲಾಗಿತ್ತು. ಅದರಲ್ಲಿ ತಬೋ ಎಂಬ ಗಂಡು ಗೊರಿಲ್ಲಾ ಇಂದು ೧೫ನೇ ವರ್ಷ ಕಾಲಿರಿತ್ತು. ಈ ಹಿಂದೆ ಜರ್ಮನಿ ಮೃಗಾಲಯದಲ್ಲೂ ಪ್ರತಿ ವರ್ಷ ತಬೋಗೆ ಹುಟ್ಟುಹಬ್ಬ ಆಚರಿಸಲಾಗುತ್ತಿತ್ತು.

ಮೈಸೂರು ಮೃಗಾಲಯಕ್ಕೆ ಕರೆತಂದ ಬಳಿಕ ಕಳೆದ ಜನವರಿಗೆ ಡೆಂಬಾ ಎಂಬ ಗೊರಿಲ್ಲಾಗೆ ೯ನೇ ವರ್ಷದ ಜನ್ಮ ದಿನವನ್ನು ಆಚರಿಸಲಾಗಿತ್ತು. ಇಂದು ತಬೋಗೆ ಹುಟ್ಟು ಹಬ್ಬ ಆಚರಿಸಿ, ವಿವಿಧ ಹಣ್ಣು, ತರಕಾರಿಂನ್ನು ವಿಶಿಷ್ಟವಾಗಿ ಜೋಡಿಸಿ, ಅದಕ್ಕೆ ತಿನ್ನಲು ನೀಡಿ ಸಂಭ್ರಮಿಸಲಾಯಿತು.

ಗೊರಿಲ್ಲಾದ ಮನೆ ಆವರಣದಲ್ಲಿ ‘ಹ್ಯಾಪಿ ಬರ್ತ್‌ಡೇ ತಬೋ ಎಂದು ತರಕಾರಿಯಿಂದ ಬರೆಯಲಾಗಿತ್ತು. ಫೈನಾಪಲ್, ಪರಂಗಿ ಹಣ್ಣು, ಸೇಬು, ಕಿತ್ತಳೆ, ಕರ್ಬೂಜಾ, ದ್ರಾಕ್ಷಿ, ಕಲ್ಲಂಗಡಿ, ಕರ್ಜೂರ, ಬಾದಾಮಿ, ಗೋಡಂಬಿ ಸೇರಿದಂತೆ ವಿವಿಧ ಹಣ್ಣುಗಳಿಂದ ವಿಶಿಷ್ಟವಾಗಿ ಜೋಡಿಸಲಾಗಿತ್ತು. ಗೊರಿಲ್ಲಾ ಮನೆ ಆವರಣದಲ್ಲಿ ಹಣ್ಣು, ತರಕಾರಿಗಳಿಂದ ಅಲಂಕಾರ ಮಾಡಿರುವುದನ್ನು ಗಮನಿಸಿದ ಪ್ರವಾಸಿಗರು ಕುತೂಹಲದಿಂದ ಕಾಯುತ್ತಿದ್ದರು.

ಈ ವೇಳೆ ಬೋನ್‌ನಿಂದ ಹೊರಗೆ ಬಂದ ತಬೋ ಪ್ರವಾಸಿಗರು ನಿಂತಿದ್ದ ಸ್ಥಳದತ್ತ ಬಂದು ಅಲ್ಲಿರಿಸಲಾಗಿದ್ದ ಹಣ್ಣು-ತರಕಾರಿಯನ್ನು ತಿಂದು ಸಂಭ್ರಮಿಸಿತು. ಈ ವೇಳೆ ನೆರೆದಿದ್ದ ಪ್ರವಾಸಿಗರು ‘ಹ್ಯಾಪಿ ಬರ್ತ್ ಡೇ ತಬೋ ಎಂದು ಕೂಗಿ ಶುಭ ಕೋರಿ ಧೀರ್ಘಕಾಲ ಸುಖವಾಗಿ ಬಾಳಲಿ ಎಂದು ಹರಸಿದರು.


ಮೈಸೂರು ಮೃಗಾಲಯಕ್ಕೆ ತಂದಿರುವ ತಬೋ ಹೆಸರಿನ ಗೊರಿಲ್ಲಾಗೆ ೧೫ನೇ ವರ್ಷದ ಹುಟ್ಟುಹಬ್ಬವನ್ನು ಮೃಗಾಲಯದಲ್ಲಿ ಆಚರಿಸಲಾಗಿದೆ. ಗೊರಿಲ್ಲಾ ಇರುವ ಬೋನ್‌ನ ಆವರಣದಲ್ಲಿ ವಿವಿಧ ಹಣ್ಣು, ತರಕಾರಿಯನ್ನು ಕತ್ತರಿಸಿ ಜೋಡಿಸಿಡಲಾಗಿತ್ತು. ಪ್ರವಾಸಿಗರು ನೆರೆದಿದ್ದ ಸಂದರ್ಭದಲ್ಲಿ ತಬೋ ಬೋನ್‌ನಿಂದ ಹೊರಬಂದು ಇಷ್ಟದ ಹಣ್ಣು-ತರಕಾರಿ ತಿಂದಿದೆ. ಪಾಲಕರು ವಿಶೇಷ ಆಸಕ್ತಿವಹಿಸಿ ತಬೋದ ಜನ್ಮ ದಿನ ಆಚರಿಸಿದ್ದಾರೆ. ಪ್ರವಾಸಿಗರು ತಬೋ ಜನ್ಮ ದಿನಕ್ಕೆ ಸಾಕ್ಷಿಯಾಗಿ ಸಂಭ್ರಮಿಸಿದ್ದಾರೆ.

-ಅಜಿತ್ ಎಂ.ಕುಲಕರ್ಣಿ, ಕಾರ್ಯನಿರ್ವಾಹಕ ನಿರ್ದೇಶಕ, ಮೈಸೂರು ಮೃಗಾಲಯ

 

andolanait

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

11 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

11 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

12 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

12 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

12 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

12 hours ago