ಜಿಲ್ಲೆಗಳು

ಮೈಸೂರು ಜೂನಲ್ಲಿ ಗೊರಿಲ್ಲಾದ ಹುಟ್ಟು ಹಬ್ಬದ ಸಂಭ್ರಮ

ಮೈಸೂರು: ಮೈಸೂರಿನ ಮೃಗಾಲಯದಲ್ಲಿ ಗೊರಿಲ್ಲಾದ ಹುಟ್ಟು ಹಬ್ಬದ ಸಂಭ್ರಮ ಮನೆ ಮಾಡಿತ್ತು. ೧೫ನೇ ವಸಂತಕ್ಕೆ ಕಾಲಿರಿಸಿದ್ದ ‘ತಬೋ’ ಹೆಸರಿನ ಗೊರಿಲ್ಲಾಗೆ ಇಷ್ಟದ ಹಣ್ಣು-ತರಕಾರಿ ನೀಡಿ ಜನ್ಮ ದಿನ ಆಚರಿಸಲಾಯಿತು.

ಕೊರೊನಾದ ಬಳಿಕ ಕಳೆದ ವರ್ಷ ಜರ್ಮನಿಯಿಂದ ಮೈಸೂರು ಮೃಗಾಲಯಕ್ಕೆ ಪ್ರಾಣಿ ವಿನಿಮಯ ಯೋಜನೆಯಡಿ ಎರಡು ಗೊರಿಲ್ಲಾ ತರಲಾಗಿತ್ತು. ಅದರಲ್ಲಿ ತಬೋ ಎಂಬ ಗಂಡು ಗೊರಿಲ್ಲಾ ಇಂದು ೧೫ನೇ ವರ್ಷ ಕಾಲಿರಿತ್ತು. ಈ ಹಿಂದೆ ಜರ್ಮನಿ ಮೃಗಾಲಯದಲ್ಲೂ ಪ್ರತಿ ವರ್ಷ ತಬೋಗೆ ಹುಟ್ಟುಹಬ್ಬ ಆಚರಿಸಲಾಗುತ್ತಿತ್ತು.

ಮೈಸೂರು ಮೃಗಾಲಯಕ್ಕೆ ಕರೆತಂದ ಬಳಿಕ ಕಳೆದ ಜನವರಿಗೆ ಡೆಂಬಾ ಎಂಬ ಗೊರಿಲ್ಲಾಗೆ ೯ನೇ ವರ್ಷದ ಜನ್ಮ ದಿನವನ್ನು ಆಚರಿಸಲಾಗಿತ್ತು. ಇಂದು ತಬೋಗೆ ಹುಟ್ಟು ಹಬ್ಬ ಆಚರಿಸಿ, ವಿವಿಧ ಹಣ್ಣು, ತರಕಾರಿಂನ್ನು ವಿಶಿಷ್ಟವಾಗಿ ಜೋಡಿಸಿ, ಅದಕ್ಕೆ ತಿನ್ನಲು ನೀಡಿ ಸಂಭ್ರಮಿಸಲಾಯಿತು.

ಗೊರಿಲ್ಲಾದ ಮನೆ ಆವರಣದಲ್ಲಿ ‘ಹ್ಯಾಪಿ ಬರ್ತ್‌ಡೇ ತಬೋ ಎಂದು ತರಕಾರಿಯಿಂದ ಬರೆಯಲಾಗಿತ್ತು. ಫೈನಾಪಲ್, ಪರಂಗಿ ಹಣ್ಣು, ಸೇಬು, ಕಿತ್ತಳೆ, ಕರ್ಬೂಜಾ, ದ್ರಾಕ್ಷಿ, ಕಲ್ಲಂಗಡಿ, ಕರ್ಜೂರ, ಬಾದಾಮಿ, ಗೋಡಂಬಿ ಸೇರಿದಂತೆ ವಿವಿಧ ಹಣ್ಣುಗಳಿಂದ ವಿಶಿಷ್ಟವಾಗಿ ಜೋಡಿಸಲಾಗಿತ್ತು. ಗೊರಿಲ್ಲಾ ಮನೆ ಆವರಣದಲ್ಲಿ ಹಣ್ಣು, ತರಕಾರಿಗಳಿಂದ ಅಲಂಕಾರ ಮಾಡಿರುವುದನ್ನು ಗಮನಿಸಿದ ಪ್ರವಾಸಿಗರು ಕುತೂಹಲದಿಂದ ಕಾಯುತ್ತಿದ್ದರು.

ಈ ವೇಳೆ ಬೋನ್‌ನಿಂದ ಹೊರಗೆ ಬಂದ ತಬೋ ಪ್ರವಾಸಿಗರು ನಿಂತಿದ್ದ ಸ್ಥಳದತ್ತ ಬಂದು ಅಲ್ಲಿರಿಸಲಾಗಿದ್ದ ಹಣ್ಣು-ತರಕಾರಿಯನ್ನು ತಿಂದು ಸಂಭ್ರಮಿಸಿತು. ಈ ವೇಳೆ ನೆರೆದಿದ್ದ ಪ್ರವಾಸಿಗರು ‘ಹ್ಯಾಪಿ ಬರ್ತ್ ಡೇ ತಬೋ ಎಂದು ಕೂಗಿ ಶುಭ ಕೋರಿ ಧೀರ್ಘಕಾಲ ಸುಖವಾಗಿ ಬಾಳಲಿ ಎಂದು ಹರಸಿದರು.


ಮೈಸೂರು ಮೃಗಾಲಯಕ್ಕೆ ತಂದಿರುವ ತಬೋ ಹೆಸರಿನ ಗೊರಿಲ್ಲಾಗೆ ೧೫ನೇ ವರ್ಷದ ಹುಟ್ಟುಹಬ್ಬವನ್ನು ಮೃಗಾಲಯದಲ್ಲಿ ಆಚರಿಸಲಾಗಿದೆ. ಗೊರಿಲ್ಲಾ ಇರುವ ಬೋನ್‌ನ ಆವರಣದಲ್ಲಿ ವಿವಿಧ ಹಣ್ಣು, ತರಕಾರಿಯನ್ನು ಕತ್ತರಿಸಿ ಜೋಡಿಸಿಡಲಾಗಿತ್ತು. ಪ್ರವಾಸಿಗರು ನೆರೆದಿದ್ದ ಸಂದರ್ಭದಲ್ಲಿ ತಬೋ ಬೋನ್‌ನಿಂದ ಹೊರಬಂದು ಇಷ್ಟದ ಹಣ್ಣು-ತರಕಾರಿ ತಿಂದಿದೆ. ಪಾಲಕರು ವಿಶೇಷ ಆಸಕ್ತಿವಹಿಸಿ ತಬೋದ ಜನ್ಮ ದಿನ ಆಚರಿಸಿದ್ದಾರೆ. ಪ್ರವಾಸಿಗರು ತಬೋ ಜನ್ಮ ದಿನಕ್ಕೆ ಸಾಕ್ಷಿಯಾಗಿ ಸಂಭ್ರಮಿಸಿದ್ದಾರೆ.

-ಅಜಿತ್ ಎಂ.ಕುಲಕರ್ಣಿ, ಕಾರ್ಯನಿರ್ವಾಹಕ ನಿರ್ದೇಶಕ, ಮೈಸೂರು ಮೃಗಾಲಯ

 

andolanait

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

5 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

6 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

6 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

6 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

7 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

7 hours ago