ಜಿಲ್ಲೆಗಳು

ಮೈಸೂರು ಜೂನಲ್ಲಿ ಗೊರಿಲ್ಲಾದ ಹುಟ್ಟು ಹಬ್ಬದ ಸಂಭ್ರಮ

ಮೈಸೂರು: ಮೈಸೂರಿನ ಮೃಗಾಲಯದಲ್ಲಿ ಗೊರಿಲ್ಲಾದ ಹುಟ್ಟು ಹಬ್ಬದ ಸಂಭ್ರಮ ಮನೆ ಮಾಡಿತ್ತು. ೧೫ನೇ ವಸಂತಕ್ಕೆ ಕಾಲಿರಿಸಿದ್ದ ‘ತಬೋ’ ಹೆಸರಿನ ಗೊರಿಲ್ಲಾಗೆ ಇಷ್ಟದ ಹಣ್ಣು-ತರಕಾರಿ ನೀಡಿ ಜನ್ಮ ದಿನ ಆಚರಿಸಲಾಯಿತು.

ಕೊರೊನಾದ ಬಳಿಕ ಕಳೆದ ವರ್ಷ ಜರ್ಮನಿಯಿಂದ ಮೈಸೂರು ಮೃಗಾಲಯಕ್ಕೆ ಪ್ರಾಣಿ ವಿನಿಮಯ ಯೋಜನೆಯಡಿ ಎರಡು ಗೊರಿಲ್ಲಾ ತರಲಾಗಿತ್ತು. ಅದರಲ್ಲಿ ತಬೋ ಎಂಬ ಗಂಡು ಗೊರಿಲ್ಲಾ ಇಂದು ೧೫ನೇ ವರ್ಷ ಕಾಲಿರಿತ್ತು. ಈ ಹಿಂದೆ ಜರ್ಮನಿ ಮೃಗಾಲಯದಲ್ಲೂ ಪ್ರತಿ ವರ್ಷ ತಬೋಗೆ ಹುಟ್ಟುಹಬ್ಬ ಆಚರಿಸಲಾಗುತ್ತಿತ್ತು.

ಮೈಸೂರು ಮೃಗಾಲಯಕ್ಕೆ ಕರೆತಂದ ಬಳಿಕ ಕಳೆದ ಜನವರಿಗೆ ಡೆಂಬಾ ಎಂಬ ಗೊರಿಲ್ಲಾಗೆ ೯ನೇ ವರ್ಷದ ಜನ್ಮ ದಿನವನ್ನು ಆಚರಿಸಲಾಗಿತ್ತು. ಇಂದು ತಬೋಗೆ ಹುಟ್ಟು ಹಬ್ಬ ಆಚರಿಸಿ, ವಿವಿಧ ಹಣ್ಣು, ತರಕಾರಿಂನ್ನು ವಿಶಿಷ್ಟವಾಗಿ ಜೋಡಿಸಿ, ಅದಕ್ಕೆ ತಿನ್ನಲು ನೀಡಿ ಸಂಭ್ರಮಿಸಲಾಯಿತು.

ಗೊರಿಲ್ಲಾದ ಮನೆ ಆವರಣದಲ್ಲಿ ‘ಹ್ಯಾಪಿ ಬರ್ತ್‌ಡೇ ತಬೋ ಎಂದು ತರಕಾರಿಯಿಂದ ಬರೆಯಲಾಗಿತ್ತು. ಫೈನಾಪಲ್, ಪರಂಗಿ ಹಣ್ಣು, ಸೇಬು, ಕಿತ್ತಳೆ, ಕರ್ಬೂಜಾ, ದ್ರಾಕ್ಷಿ, ಕಲ್ಲಂಗಡಿ, ಕರ್ಜೂರ, ಬಾದಾಮಿ, ಗೋಡಂಬಿ ಸೇರಿದಂತೆ ವಿವಿಧ ಹಣ್ಣುಗಳಿಂದ ವಿಶಿಷ್ಟವಾಗಿ ಜೋಡಿಸಲಾಗಿತ್ತು. ಗೊರಿಲ್ಲಾ ಮನೆ ಆವರಣದಲ್ಲಿ ಹಣ್ಣು, ತರಕಾರಿಗಳಿಂದ ಅಲಂಕಾರ ಮಾಡಿರುವುದನ್ನು ಗಮನಿಸಿದ ಪ್ರವಾಸಿಗರು ಕುತೂಹಲದಿಂದ ಕಾಯುತ್ತಿದ್ದರು.

ಈ ವೇಳೆ ಬೋನ್‌ನಿಂದ ಹೊರಗೆ ಬಂದ ತಬೋ ಪ್ರವಾಸಿಗರು ನಿಂತಿದ್ದ ಸ್ಥಳದತ್ತ ಬಂದು ಅಲ್ಲಿರಿಸಲಾಗಿದ್ದ ಹಣ್ಣು-ತರಕಾರಿಯನ್ನು ತಿಂದು ಸಂಭ್ರಮಿಸಿತು. ಈ ವೇಳೆ ನೆರೆದಿದ್ದ ಪ್ರವಾಸಿಗರು ‘ಹ್ಯಾಪಿ ಬರ್ತ್ ಡೇ ತಬೋ ಎಂದು ಕೂಗಿ ಶುಭ ಕೋರಿ ಧೀರ್ಘಕಾಲ ಸುಖವಾಗಿ ಬಾಳಲಿ ಎಂದು ಹರಸಿದರು.


ಮೈಸೂರು ಮೃಗಾಲಯಕ್ಕೆ ತಂದಿರುವ ತಬೋ ಹೆಸರಿನ ಗೊರಿಲ್ಲಾಗೆ ೧೫ನೇ ವರ್ಷದ ಹುಟ್ಟುಹಬ್ಬವನ್ನು ಮೃಗಾಲಯದಲ್ಲಿ ಆಚರಿಸಲಾಗಿದೆ. ಗೊರಿಲ್ಲಾ ಇರುವ ಬೋನ್‌ನ ಆವರಣದಲ್ಲಿ ವಿವಿಧ ಹಣ್ಣು, ತರಕಾರಿಯನ್ನು ಕತ್ತರಿಸಿ ಜೋಡಿಸಿಡಲಾಗಿತ್ತು. ಪ್ರವಾಸಿಗರು ನೆರೆದಿದ್ದ ಸಂದರ್ಭದಲ್ಲಿ ತಬೋ ಬೋನ್‌ನಿಂದ ಹೊರಬಂದು ಇಷ್ಟದ ಹಣ್ಣು-ತರಕಾರಿ ತಿಂದಿದೆ. ಪಾಲಕರು ವಿಶೇಷ ಆಸಕ್ತಿವಹಿಸಿ ತಬೋದ ಜನ್ಮ ದಿನ ಆಚರಿಸಿದ್ದಾರೆ. ಪ್ರವಾಸಿಗರು ತಬೋ ಜನ್ಮ ದಿನಕ್ಕೆ ಸಾಕ್ಷಿಯಾಗಿ ಸಂಭ್ರಮಿಸಿದ್ದಾರೆ.

-ಅಜಿತ್ ಎಂ.ಕುಲಕರ್ಣಿ, ಕಾರ್ಯನಿರ್ವಾಹಕ ನಿರ್ದೇಶಕ, ಮೈಸೂರು ಮೃಗಾಲಯ

 

andolanait

Recent Posts

ಕೆ.ಆರ್.ನಗರ | ಗಾಂಜಾ ಮಾರಾಟ : ಇಬ್ಬರ ಬಂಧನ

ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ…

19 mins ago

ಮಿಷನ್ 40 ಫಾರ್ 90 ಡೇಸ್ : ಮಂಡ್ಯ ಜಿಲ್ಲೆಯಲ್ಲಿ SSLC ಫಲಿತಾಂಶ ಹೆಚ್ಚಳಕ್ಕೆ ವಿಶೇಷ ಅಭಿಯಾನ

ಮಂಡ್ಯ : ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿನೂತನವಾಗಿ “ಮಿಷನ್ 40 ಫಾರ್ 90 ಡೇಸ್” ಅಭಿಯಾನವನ್ನು…

34 mins ago

ಗೃಹಲಕ್ಷ್ಮಿಗೆ ಮತ್ತೆ ತಾಂತ್ರಿಕ ಸಮಸ್ಯೆ ; ಬಾಕಿ ಹಣ ಬಿಡುಗಡೆ ವಿಳಂಬ?

ಬೆಂಗಳೂರು : ಬೆಳಗಾವಿ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ…

39 mins ago

ದುರಂಧರ್‌ ಸಕ್ಸಸ್ | ‌ದಿಢೀರ್‌ ಸಂಭಾವನೆ ಏರಿಕೆ ; ದೃಶ್ಯಂ-3 ಚಿತ್ರದಿಂದ ಹೊರಬಂದ ಅಕ್ಷಯ್‌ ಖನ್ನಾ

ಮುಂಬೈ : ಬಾಲಿವುಡ್‌, ಟಾಲಿವುಡ್‌, ಸ್ಯಾಂಡಲ್‌ವುಡ್‌ ಸೇರಿದಂತೆ ಎಲ್ಲಾ ವುಡ್‌ಗಳಲ್ಲಿಯೂ ಧುರಂಧರ್‌ದೆ ಹಾವಳಿ. ಈ ವರ್ಷದ ಅತಿ ಹೆಚ್ಚು ಕೆಲಕ್ಷನ್…

52 mins ago

ಅಧಿಕಾರ ಹಂಚಿಕೆ ದೊಂಬರಾಟದಂತಿದೆ : ಎಚ್.ಡಿ.ದೇವೇಗೌಡ ಟೀಕೆ

ಬೆಂಗಳೂರು : ಅಧಿಕಾರ ಹಸ್ತಾಂತರದ ವಿಚಾರದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹೈಡ್ರಾಮ ಆಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು…

1 hour ago

ಮಂತ್ರಾಲಯಕ್ಕೆ ಭೇಟಿ ನೀಡಿದ ನಟ ರಿಷಬ್‌ ಶೆಟ್ಟಿ ಕುಟುಂಬ

ರಾಯಚೂರು: ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.…

2 hours ago