ಜಿಲ್ಲೆಗಳು

ಮೈಸೂರು ಜೂನಲ್ಲಿ ಗೊರಿಲ್ಲಾದ ಹುಟ್ಟು ಹಬ್ಬದ ಸಂಭ್ರಮ

ಮೈಸೂರು: ಮೈಸೂರಿನ ಮೃಗಾಲಯದಲ್ಲಿ ಗೊರಿಲ್ಲಾದ ಹುಟ್ಟು ಹಬ್ಬದ ಸಂಭ್ರಮ ಮನೆ ಮಾಡಿತ್ತು. ೧೫ನೇ ವಸಂತಕ್ಕೆ ಕಾಲಿರಿಸಿದ್ದ ‘ತಬೋ’ ಹೆಸರಿನ ಗೊರಿಲ್ಲಾಗೆ ಇಷ್ಟದ ಹಣ್ಣು-ತರಕಾರಿ ನೀಡಿ ಜನ್ಮ ದಿನ ಆಚರಿಸಲಾಯಿತು.

ಕೊರೊನಾದ ಬಳಿಕ ಕಳೆದ ವರ್ಷ ಜರ್ಮನಿಯಿಂದ ಮೈಸೂರು ಮೃಗಾಲಯಕ್ಕೆ ಪ್ರಾಣಿ ವಿನಿಮಯ ಯೋಜನೆಯಡಿ ಎರಡು ಗೊರಿಲ್ಲಾ ತರಲಾಗಿತ್ತು. ಅದರಲ್ಲಿ ತಬೋ ಎಂಬ ಗಂಡು ಗೊರಿಲ್ಲಾ ಇಂದು ೧೫ನೇ ವರ್ಷ ಕಾಲಿರಿತ್ತು. ಈ ಹಿಂದೆ ಜರ್ಮನಿ ಮೃಗಾಲಯದಲ್ಲೂ ಪ್ರತಿ ವರ್ಷ ತಬೋಗೆ ಹುಟ್ಟುಹಬ್ಬ ಆಚರಿಸಲಾಗುತ್ತಿತ್ತು.

ಮೈಸೂರು ಮೃಗಾಲಯಕ್ಕೆ ಕರೆತಂದ ಬಳಿಕ ಕಳೆದ ಜನವರಿಗೆ ಡೆಂಬಾ ಎಂಬ ಗೊರಿಲ್ಲಾಗೆ ೯ನೇ ವರ್ಷದ ಜನ್ಮ ದಿನವನ್ನು ಆಚರಿಸಲಾಗಿತ್ತು. ಇಂದು ತಬೋಗೆ ಹುಟ್ಟು ಹಬ್ಬ ಆಚರಿಸಿ, ವಿವಿಧ ಹಣ್ಣು, ತರಕಾರಿಂನ್ನು ವಿಶಿಷ್ಟವಾಗಿ ಜೋಡಿಸಿ, ಅದಕ್ಕೆ ತಿನ್ನಲು ನೀಡಿ ಸಂಭ್ರಮಿಸಲಾಯಿತು.

ಗೊರಿಲ್ಲಾದ ಮನೆ ಆವರಣದಲ್ಲಿ ‘ಹ್ಯಾಪಿ ಬರ್ತ್‌ಡೇ ತಬೋ ಎಂದು ತರಕಾರಿಯಿಂದ ಬರೆಯಲಾಗಿತ್ತು. ಫೈನಾಪಲ್, ಪರಂಗಿ ಹಣ್ಣು, ಸೇಬು, ಕಿತ್ತಳೆ, ಕರ್ಬೂಜಾ, ದ್ರಾಕ್ಷಿ, ಕಲ್ಲಂಗಡಿ, ಕರ್ಜೂರ, ಬಾದಾಮಿ, ಗೋಡಂಬಿ ಸೇರಿದಂತೆ ವಿವಿಧ ಹಣ್ಣುಗಳಿಂದ ವಿಶಿಷ್ಟವಾಗಿ ಜೋಡಿಸಲಾಗಿತ್ತು. ಗೊರಿಲ್ಲಾ ಮನೆ ಆವರಣದಲ್ಲಿ ಹಣ್ಣು, ತರಕಾರಿಗಳಿಂದ ಅಲಂಕಾರ ಮಾಡಿರುವುದನ್ನು ಗಮನಿಸಿದ ಪ್ರವಾಸಿಗರು ಕುತೂಹಲದಿಂದ ಕಾಯುತ್ತಿದ್ದರು.

ಈ ವೇಳೆ ಬೋನ್‌ನಿಂದ ಹೊರಗೆ ಬಂದ ತಬೋ ಪ್ರವಾಸಿಗರು ನಿಂತಿದ್ದ ಸ್ಥಳದತ್ತ ಬಂದು ಅಲ್ಲಿರಿಸಲಾಗಿದ್ದ ಹಣ್ಣು-ತರಕಾರಿಯನ್ನು ತಿಂದು ಸಂಭ್ರಮಿಸಿತು. ಈ ವೇಳೆ ನೆರೆದಿದ್ದ ಪ್ರವಾಸಿಗರು ‘ಹ್ಯಾಪಿ ಬರ್ತ್ ಡೇ ತಬೋ ಎಂದು ಕೂಗಿ ಶುಭ ಕೋರಿ ಧೀರ್ಘಕಾಲ ಸುಖವಾಗಿ ಬಾಳಲಿ ಎಂದು ಹರಸಿದರು.


ಮೈಸೂರು ಮೃಗಾಲಯಕ್ಕೆ ತಂದಿರುವ ತಬೋ ಹೆಸರಿನ ಗೊರಿಲ್ಲಾಗೆ ೧೫ನೇ ವರ್ಷದ ಹುಟ್ಟುಹಬ್ಬವನ್ನು ಮೃಗಾಲಯದಲ್ಲಿ ಆಚರಿಸಲಾಗಿದೆ. ಗೊರಿಲ್ಲಾ ಇರುವ ಬೋನ್‌ನ ಆವರಣದಲ್ಲಿ ವಿವಿಧ ಹಣ್ಣು, ತರಕಾರಿಯನ್ನು ಕತ್ತರಿಸಿ ಜೋಡಿಸಿಡಲಾಗಿತ್ತು. ಪ್ರವಾಸಿಗರು ನೆರೆದಿದ್ದ ಸಂದರ್ಭದಲ್ಲಿ ತಬೋ ಬೋನ್‌ನಿಂದ ಹೊರಬಂದು ಇಷ್ಟದ ಹಣ್ಣು-ತರಕಾರಿ ತಿಂದಿದೆ. ಪಾಲಕರು ವಿಶೇಷ ಆಸಕ್ತಿವಹಿಸಿ ತಬೋದ ಜನ್ಮ ದಿನ ಆಚರಿಸಿದ್ದಾರೆ. ಪ್ರವಾಸಿಗರು ತಬೋ ಜನ್ಮ ದಿನಕ್ಕೆ ಸಾಕ್ಷಿಯಾಗಿ ಸಂಭ್ರಮಿಸಿದ್ದಾರೆ.

-ಅಜಿತ್ ಎಂ.ಕುಲಕರ್ಣಿ, ಕಾರ್ಯನಿರ್ವಾಹಕ ನಿರ್ದೇಶಕ, ಮೈಸೂರು ಮೃಗಾಲಯ

 

andolanait

Recent Posts

ಫಲ ನೀಡಿದ ಮಾತುಕತೆ : ಹಾರ್ಮುಜ್ ಜಲಸಂಧಿ ದಾಟಿದ ತೈಲ ಟ್ಯಾಂಕರ್‌

ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…

16 mins ago

ವೈರಲ್‌ ಹುಡುಗಿ ʻಮೊನಾಲಿಸಾʼ ಮದುವೆಗೆ ತಂದೆ ವಿರೋಧಿಸಿದ್ದೇಕೆ….. ಯಾರಿ ಈ ಹುಡುಗ?

ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…

45 mins ago

32 ವರ್ಷಗಳ ನಂತರ ನಾಗರತ್ನಮ್ಮ ಸ್ಮಾರಕಕ್ಕೆ ಅಭಿವೃದ್ಧಿ ಭಾಗ್ಯ

ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…

1 hour ago

ದೇಶಾದ್ಯಂತ ಎಸ್ಮಾ ಜಾರಿ : ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು!

ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…

1 hour ago

ಸಫಾರಿಗೆ ಮೊಬೈಲ್‌ ನಿಷೇಧ ; ಪ್ರವಾಸಿಗರ ಬೇಸರ

ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…

3 hours ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

4 hours ago