ಜಿಲ್ಲೆಗಳು

ಮೃಗಾಲಯಗಳಿಗೆ ವಿದೇಶಿ ಪ್ರಾಣಿಗಳ ವಿನಿಮಯ

ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ

ಮೈಸೂರು: ವಿದೇಶದ ಮೃಗಾಲಯಗಳಿಂದ ವಿಭಿನ್ನ ಪ್ರಾಣಿಗಳನ್ನು ಕರ್ನಾಟಕದ ಮೃಗಾಲಯಗಳಿಗೆ ತರಿಸಿಕೊಳ್ಳಲು ಕರ್ನಾಟಕ ಮೃಗಾಲಯ ಪ್ರಾಧಿಕಾರ ಮುಂದಾಗಿದೆ.

ವಿಜಯನಗರ ಜಿಲ್ಲೆ ಹಂಪಿ ಸಮೀಪದಲ್ಲಿರುವ ಕಮಲಾಪುರದ ಅಟಲ್‌ಬಿಹಾರಿ ವಾಜಪೇಯಿ ಮೃಗಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಹಲವು ವಿಷಯಗಳನ್ನು ಚರ್ಚಿಸಲಾಯಿತು.

ಮೃಗಾಲಯಗಳಿಗೆ ಬೇಕಾದ ಪ್ರಾಣಿಗಳನ್ನು ಪಟ್ಟಿ ಮಾಡಿಕೊಂಡು ಪ್ರಾಣಿ ವಿನಿಮಯ ಯೋಜನೆಯಡಿ ತರಿಸಿಕೊಳ್ಳಲು ಯೋಜಿಸಬೇಕು. ನಮ್ಮಿಂದಲೂ ಬೇರೆ ಮೃಗಾಲಯಗಳಿಗೆ ಪ್ರಾಣಿ ನೀಡಿ ಅಲ್ಲಿಂದ ನಮ್ಮ ಮೃಗಾಲಯಗಳಿಗೆ ಬೇಕಾದ ಪ್ರಾಣಿ ತರಿಸಿಕೊಳ್ಳುವಂತೆ ಸೂಚಿಸಲಾಯಿತು ಎಂದು ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್ ತಿಳಿಸಿದರು.

ಕಮಲಾಪುರ ಮೃಗಾಲಯಕ್ಕೆ ಅನೇಕ ವಿಶೇಷ ಶೈಲಿಯ ಹಳೆ ಮಾದರಿಯ ಕಟ್ಟಡಗಳ ಕೆಲಸ ಹಂಪಿ ಮೃಗಾಲಯದ ಮಾದರಿಯಲೇ ನಡೆಯುತ್ತಿದ್ದು, ನವೆಂಬರ್ ತಿಂಗಳಲ್ಲಿ ವಿವಿಧ ಯೋಜನೆಗಳು ಪೂರ್ಣಗೊಳ್ಳಲಿವೆ. ಮೃಗಾಲಯ ಉದ್ಘಾಟನೆಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಕರೆಯುವುದರ ಬಗ್ಗೆ ಚರ್ಚಿಸಲಾಯಿತು ಎಂದು ಹೇಳಿದರು.

ಬನ್ನೇರ್‌ಘಟ್ಟ ಜೂನಲ್ಲಿ ಬಟಾನಿಕಲ್ ಗಾರ್ಡನ್ ನಿರ್ಮಾಣದ ಕಟ್ಟಡವು ಕೂಡ ಬರದಿಂದ ಸಾಗುತ್ತಿದೆ.ಹಾಗೆಯೇ ಶಿವಮೊಗ್ಗದ ತಾವರೇಕೊಪ್ಪ ಮೃಗಾಲಯದಲ್ಲಿ ರಸ್ತೆ ಕಾಮಗಾರಿ, ಸಫಾರಿಗೆ ಹೊಸ ವಾಹನವನ್ನು ತೆಗೆದುಕೊಳ್ಳಲು ಸಭೆಯಲ್ಲಿ ತಿರ್ಮಾನಿಸಲಾಯಿತು.

ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ( ವನ್ಯಜೀವಿ) ವಿಜಯಕುಮಾರ್ ಗೋಗಿ, ಸದಸ್ಯ ಕಾರ್ಯದರ್ಶಿ ಬಿ.ಪಿ. ರವಿ, ಸದಸ್ಯರಾದ ಗೋಕುಲ್ ಗೋವರ್ಧನ್, ಜ್ಯೋತಿ ರೇಚಣ್ಣ, ಮೃಗಾಲಯದ ಅಧಿಕಾರಿಗಳು ಹಾಜರಿದ್ದರು.

================

ಅಂತರಾಷ್ಟ್ರೀಯ ಮಟ್ಟದಿಂದ ಪ್ರಾಣಿಗಳನ್ನು ತರುವುದು ಮತ್ತು ನಮ್ಮ ದೇಶದ ಪ್ರಾಣಿಗಳನ್ನು ಅಂತರಾಷ್ಟ್ರೀಯ ಮೃಗಾಲಯಗಳಿಗೆ ನೀಡುವುದರ ಬಗ್ಗೆ ಚರ್ಚಿಸಲಾಗಿದ್ದು, ಅಧಿಕಾರಿಗಳಿಗೆ ಪಟ್ಟಿ ಮಾಡುವಂತೆ ಸೂಚಿಸಲಾಗಿದೆ.

ಶಿವಕುಮಾರ್, ಅಧ್ಯಕ್ಷರು, ಕರ್ನಾಟಕ ಮೃಗಾಲಯ ಪ್ರಾಧಿಕಾರ, ಮೈಸೂರು

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

3 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

3 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

3 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

3 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

3 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

4 hours ago