ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ
ಮೈಸೂರು: ವಿದೇಶದ ಮೃಗಾಲಯಗಳಿಂದ ವಿಭಿನ್ನ ಪ್ರಾಣಿಗಳನ್ನು ಕರ್ನಾಟಕದ ಮೃಗಾಲಯಗಳಿಗೆ ತರಿಸಿಕೊಳ್ಳಲು ಕರ್ನಾಟಕ ಮೃಗಾಲಯ ಪ್ರಾಧಿಕಾರ ಮುಂದಾಗಿದೆ.
ವಿಜಯನಗರ ಜಿಲ್ಲೆ ಹಂಪಿ ಸಮೀಪದಲ್ಲಿರುವ ಕಮಲಾಪುರದ ಅಟಲ್ಬಿಹಾರಿ ವಾಜಪೇಯಿ ಮೃಗಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಹಲವು ವಿಷಯಗಳನ್ನು ಚರ್ಚಿಸಲಾಯಿತು.
ಮೃಗಾಲಯಗಳಿಗೆ ಬೇಕಾದ ಪ್ರಾಣಿಗಳನ್ನು ಪಟ್ಟಿ ಮಾಡಿಕೊಂಡು ಪ್ರಾಣಿ ವಿನಿಮಯ ಯೋಜನೆಯಡಿ ತರಿಸಿಕೊಳ್ಳಲು ಯೋಜಿಸಬೇಕು. ನಮ್ಮಿಂದಲೂ ಬೇರೆ ಮೃಗಾಲಯಗಳಿಗೆ ಪ್ರಾಣಿ ನೀಡಿ ಅಲ್ಲಿಂದ ನಮ್ಮ ಮೃಗಾಲಯಗಳಿಗೆ ಬೇಕಾದ ಪ್ರಾಣಿ ತರಿಸಿಕೊಳ್ಳುವಂತೆ ಸೂಚಿಸಲಾಯಿತು ಎಂದು ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್ ತಿಳಿಸಿದರು.
ಕಮಲಾಪುರ ಮೃಗಾಲಯಕ್ಕೆ ಅನೇಕ ವಿಶೇಷ ಶೈಲಿಯ ಹಳೆ ಮಾದರಿಯ ಕಟ್ಟಡಗಳ ಕೆಲಸ ಹಂಪಿ ಮೃಗಾಲಯದ ಮಾದರಿಯಲೇ ನಡೆಯುತ್ತಿದ್ದು, ನವೆಂಬರ್ ತಿಂಗಳಲ್ಲಿ ವಿವಿಧ ಯೋಜನೆಗಳು ಪೂರ್ಣಗೊಳ್ಳಲಿವೆ. ಮೃಗಾಲಯ ಉದ್ಘಾಟನೆಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಕರೆಯುವುದರ ಬಗ್ಗೆ ಚರ್ಚಿಸಲಾಯಿತು ಎಂದು ಹೇಳಿದರು.
ಬನ್ನೇರ್ಘಟ್ಟ ಜೂನಲ್ಲಿ ಬಟಾನಿಕಲ್ ಗಾರ್ಡನ್ ನಿರ್ಮಾಣದ ಕಟ್ಟಡವು ಕೂಡ ಬರದಿಂದ ಸಾಗುತ್ತಿದೆ.ಹಾಗೆಯೇ ಶಿವಮೊಗ್ಗದ ತಾವರೇಕೊಪ್ಪ ಮೃಗಾಲಯದಲ್ಲಿ ರಸ್ತೆ ಕಾಮಗಾರಿ, ಸಫಾರಿಗೆ ಹೊಸ ವಾಹನವನ್ನು ತೆಗೆದುಕೊಳ್ಳಲು ಸಭೆಯಲ್ಲಿ ತಿರ್ಮಾನಿಸಲಾಯಿತು.
ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ( ವನ್ಯಜೀವಿ) ವಿಜಯಕುಮಾರ್ ಗೋಗಿ, ಸದಸ್ಯ ಕಾರ್ಯದರ್ಶಿ ಬಿ.ಪಿ. ರವಿ, ಸದಸ್ಯರಾದ ಗೋಕುಲ್ ಗೋವರ್ಧನ್, ಜ್ಯೋತಿ ರೇಚಣ್ಣ, ಮೃಗಾಲಯದ ಅಧಿಕಾರಿಗಳು ಹಾಜರಿದ್ದರು.
================
ಅಂತರಾಷ್ಟ್ರೀಯ ಮಟ್ಟದಿಂದ ಪ್ರಾಣಿಗಳನ್ನು ತರುವುದು ಮತ್ತು ನಮ್ಮ ದೇಶದ ಪ್ರಾಣಿಗಳನ್ನು ಅಂತರಾಷ್ಟ್ರೀಯ ಮೃಗಾಲಯಗಳಿಗೆ ನೀಡುವುದರ ಬಗ್ಗೆ ಚರ್ಚಿಸಲಾಗಿದ್ದು, ಅಧಿಕಾರಿಗಳಿಗೆ ಪಟ್ಟಿ ಮಾಡುವಂತೆ ಸೂಚಿಸಲಾಗಿದೆ.
–ಶಿವಕುಮಾರ್, ಅಧ್ಯಕ್ಷರು, ಕರ್ನಾಟಕ ಮೃಗಾಲಯ ಪ್ರಾಧಿಕಾರ, ಮೈಸೂರು
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…