ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ
ಮೈಸೂರು: ವಿದೇಶದ ಮೃಗಾಲಯಗಳಿಂದ ವಿಭಿನ್ನ ಪ್ರಾಣಿಗಳನ್ನು ಕರ್ನಾಟಕದ ಮೃಗಾಲಯಗಳಿಗೆ ತರಿಸಿಕೊಳ್ಳಲು ಕರ್ನಾಟಕ ಮೃಗಾಲಯ ಪ್ರಾಧಿಕಾರ ಮುಂದಾಗಿದೆ.
ವಿಜಯನಗರ ಜಿಲ್ಲೆ ಹಂಪಿ ಸಮೀಪದಲ್ಲಿರುವ ಕಮಲಾಪುರದ ಅಟಲ್ಬಿಹಾರಿ ವಾಜಪೇಯಿ ಮೃಗಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಹಲವು ವಿಷಯಗಳನ್ನು ಚರ್ಚಿಸಲಾಯಿತು.
ಮೃಗಾಲಯಗಳಿಗೆ ಬೇಕಾದ ಪ್ರಾಣಿಗಳನ್ನು ಪಟ್ಟಿ ಮಾಡಿಕೊಂಡು ಪ್ರಾಣಿ ವಿನಿಮಯ ಯೋಜನೆಯಡಿ ತರಿಸಿಕೊಳ್ಳಲು ಯೋಜಿಸಬೇಕು. ನಮ್ಮಿಂದಲೂ ಬೇರೆ ಮೃಗಾಲಯಗಳಿಗೆ ಪ್ರಾಣಿ ನೀಡಿ ಅಲ್ಲಿಂದ ನಮ್ಮ ಮೃಗಾಲಯಗಳಿಗೆ ಬೇಕಾದ ಪ್ರಾಣಿ ತರಿಸಿಕೊಳ್ಳುವಂತೆ ಸೂಚಿಸಲಾಯಿತು ಎಂದು ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್ ತಿಳಿಸಿದರು.
ಕಮಲಾಪುರ ಮೃಗಾಲಯಕ್ಕೆ ಅನೇಕ ವಿಶೇಷ ಶೈಲಿಯ ಹಳೆ ಮಾದರಿಯ ಕಟ್ಟಡಗಳ ಕೆಲಸ ಹಂಪಿ ಮೃಗಾಲಯದ ಮಾದರಿಯಲೇ ನಡೆಯುತ್ತಿದ್ದು, ನವೆಂಬರ್ ತಿಂಗಳಲ್ಲಿ ವಿವಿಧ ಯೋಜನೆಗಳು ಪೂರ್ಣಗೊಳ್ಳಲಿವೆ. ಮೃಗಾಲಯ ಉದ್ಘಾಟನೆಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಕರೆಯುವುದರ ಬಗ್ಗೆ ಚರ್ಚಿಸಲಾಯಿತು ಎಂದು ಹೇಳಿದರು.
ಬನ್ನೇರ್ಘಟ್ಟ ಜೂನಲ್ಲಿ ಬಟಾನಿಕಲ್ ಗಾರ್ಡನ್ ನಿರ್ಮಾಣದ ಕಟ್ಟಡವು ಕೂಡ ಬರದಿಂದ ಸಾಗುತ್ತಿದೆ.ಹಾಗೆಯೇ ಶಿವಮೊಗ್ಗದ ತಾವರೇಕೊಪ್ಪ ಮೃಗಾಲಯದಲ್ಲಿ ರಸ್ತೆ ಕಾಮಗಾರಿ, ಸಫಾರಿಗೆ ಹೊಸ ವಾಹನವನ್ನು ತೆಗೆದುಕೊಳ್ಳಲು ಸಭೆಯಲ್ಲಿ ತಿರ್ಮಾನಿಸಲಾಯಿತು.
ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ( ವನ್ಯಜೀವಿ) ವಿಜಯಕುಮಾರ್ ಗೋಗಿ, ಸದಸ್ಯ ಕಾರ್ಯದರ್ಶಿ ಬಿ.ಪಿ. ರವಿ, ಸದಸ್ಯರಾದ ಗೋಕುಲ್ ಗೋವರ್ಧನ್, ಜ್ಯೋತಿ ರೇಚಣ್ಣ, ಮೃಗಾಲಯದ ಅಧಿಕಾರಿಗಳು ಹಾಜರಿದ್ದರು.
================
ಅಂತರಾಷ್ಟ್ರೀಯ ಮಟ್ಟದಿಂದ ಪ್ರಾಣಿಗಳನ್ನು ತರುವುದು ಮತ್ತು ನಮ್ಮ ದೇಶದ ಪ್ರಾಣಿಗಳನ್ನು ಅಂತರಾಷ್ಟ್ರೀಯ ಮೃಗಾಲಯಗಳಿಗೆ ನೀಡುವುದರ ಬಗ್ಗೆ ಚರ್ಚಿಸಲಾಗಿದ್ದು, ಅಧಿಕಾರಿಗಳಿಗೆ ಪಟ್ಟಿ ಮಾಡುವಂತೆ ಸೂಚಿಸಲಾಗಿದೆ.
–ಶಿವಕುಮಾರ್, ಅಧ್ಯಕ್ಷರು, ಕರ್ನಾಟಕ ಮೃಗಾಲಯ ಪ್ರಾಧಿಕಾರ, ಮೈಸೂರು
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…