ಜಿಲ್ಲೆಗಳು

ಮತಗಟ್ಟೆಗಳಲ್ಲಿ ಅಗತ್ಯವಿರುವ ಸೌಲಭ್ಯ ಕಲ್ಪಿಸಿ : ZP CEO ಕೆ.ಎಂ.ಗಾಯತ್ರಿ ಸೂಚನೆ

ಮೈಸೂರು: :ಮತಗಟ್ಟೆಗಳಲ್ಲಿ ಅಗತ್ಯವಿರುವಂತಹ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪಿಡಿಓಗಳು ಗಮನಹರಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಗಾಯತ್ರಿ ಅವರು ಸೂಚಿಸಿದರು. 

ಇಂದು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಪಿಡಿಓ ಹಾಗೂ ಗ್ರಂಥಪಾಲಕರಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ಚುನಾವಣೆಯನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಜವಾಬ್ದಾರಿ ಮುಖ್ಯ. ಈ ಹಿಂದೆ ಕಡಿಮೆ ಮತದಾನವಾಗಿರವ ಮತಗಟ್ಟೆಗಳನ್ನು ಗುರುತಿಸಿ ಆ ಭಾಗದಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಬೇಕು ಎಂದರು.

ಗ್ರಂಥಪಾಲಕರು ಪಂಚಾಯಿತಿ ಸಿಬ್ಬಂದಿಯೊಂದಿಗೆ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಕೈ ಜೋಡಿಸುವ ಮೂಲಕ ಯುವಕರು, ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಮತದಾನದ ಕುರಿತು ವಿಶೇಷ ರೀತಿಯಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಮಾಡಬೇಕು ಎಂದು ಸಲಹೆ ನೀಡಿದರು.

ಪಿಡಿಓಗಳು ಸ್ಥಳೀಯ ಸರಕಾರದ ಮುಖ್ಯಸ್ಥರಾಗಿದ್ದು, ನಿಮ್ಮ ಗ್ರಾ.ಪಂ ಸಂಬಂಧಿಸಿದಂತೆ ಎಲ್ಲಾ ಮಾಹಿತಿ ನಿಮ್ಮ ಬಳಿಯಿರಬೇಕು. ಒಗ್ಗೂಡಿಸುವಿಕೆಯ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು. ಈಗಾಗಲೇ, ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಟ್ಯಾಂಕ್ ಹಾಗೂ ಜಾನುವಾರು ತೊಟ್ಟಿಗಳನ್ನು ಸ್ವಚ್ಛಗೊಳಿಸುವ ಆಂದೋಲನ ಆರಂಭವಾಗಿದ್ದು, ತಾಲ್ಲೂಕಿನ ಎಲ್ಲಾ ಗ್ರಾ.ಪಂಗಳಲ್ಲಿ ಕಡ್ಡಾಯವಾಗಿ ಸ್ವಚ್ಛಗೊಳಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.

ನರೇಗಾ ಯೋಜನೆ ಈ ವರ್ಷದ ಟಾರ್ಗೆಟ್ ಈ ವರ್ಷವೇ ಮುಗಿಸಬೇಕು. ಯಾವುದೇ ದೂರು ಕೇಳಿ ಬರದಂತೆ ಕರ್ತವ್ಯ ನಿರ್ವಹಿಸಿ. ಜಲಸಂಜೀವಿನಿ ಕಾಮಗಾರಿಗೆ ಹೆಚ್ಚಿನ ಒತ್ತು ನೀಡಿದ್ದು, ಉತ್ತಮ ಆಸ್ತಿ ಸೃಜನೆಗೆ ಹೆಚ್ಚಿನ ಒತ್ತು ಕೊಡಿ. ಗ್ರೇ ವಾಟರ್ ಮ್ಯಾನೇಜ್ಮೆಂಟ್ ಕಾಮಗಾರಿಯತ್ತ ಗಮನಹರಿಸಿ ಎಂದು ಸೂಚಿಸಿದರು.

ಜಲಜೀವನ್ ಮಿಷನ್ ಕಾಮಗಾರಿಯನ್ನು ಪರಿಶೀಲಿಸಿದ್ದು, ನೀರು ವ್ಯರ್ಥವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಪಿಡಿಓಗಳು ಗಮನಹರಿಸಬೇಕು. ಕಾಮಗಾರಿಗಾಗಿ ರಸ್ತೆ ಕಟಿಂಗ್ ಮಾಡಿದ್ದಲ್ಲಿ ಸಂಬಂಧಪಟ್ಟ ಗುತ್ತಿಗೆದಾರರಿಗೆ ತಿಳಿಸಿ ರಸ್ತೆ ಸರಿಪಡಿಸುವ ಕಾರ್ಯಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಸಿ.ಆರ್.ಕೃಷ್ಣಕುಮಾರ್, ಕೆ.ಆರ್.ನಗರ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ ಕಾರ್ಯಪಾಲಕ ಅಭಿಯಂತರರು ವೀರೇಶ್, ಆರ್‌ಡಿಡಬ್ಲ್ಯುಎಸ್ ಎಇಇ ಕೃಷ್ಣಮೂರ್ತಿ, ಪಿಆರ್‌ಇಡಿ ಎಇಇ ಮಲ್ಲಿಕಾರ್ಜುನ್, ಎಂಜಿನಿಯರ್‌ಗಳಾದ ಪ್ರಭು, ಪಾಷಾ, ಸುಭಾಷ್, ಪಿ.ಎಸ್.ಚಿತ್ರಶ್ರೀ, ಮೇಘ, ಜೆಇ ಕೌಶಿಕ್ ಇತರರು ಉಪಸ್ಥಿತರಿದ್ದರು.


ಕಂಪಲಾಪುರ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸುತ್ತಿರುವ ಕಾಂಪೌಂಡ್,ಬೋಜನಾಲಯ,ಶೌಚಾಲಯ, ಆಟದ ಮೈದಾನ ಕಾಮಗಾರಿ ಪರಿಶೀಲಿಸಿದರು. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆ ಹಾಗೂ ಗ್ರಾ.ಪಂಗಳಿಂದ ದೊರೆಯುವ ಸೌಲಭ್ಯ ಕುರಿತು ಸಂವಾದ ನಡೆಸಿದರು. ಕಿರನಲ್ಲಿ, ದೊಡ್ಡಬ್ಯಾಲಾಳು ಗ್ರಾ.ಪಂ ವ್ಯಾಪ್ತಿಯಲ್ಲಿ ಪಿಆರ್‌ಇಡಿ ಹಾಗೂ ಜಲಜೀವನ್ ಮಿಷನ್ ಕಾಮಗಾರಿಗಳನ್ನು ಪರಿಶೀಲಿಸಿದರು. ಅತ್ತಿಗೋಡು ಗ್ರಾ.ಪಂ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸುತ್ತಿರುವ ಕಾಂಪೌಂಡ್, ಮಳೆ ನೀರು ಕೂಯ್ಲು, ಆಟದ ಮೈದಾನ ಕಾಮಗಾರಿ ಪರಿಶೀಲಿಸಿದರು. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

8 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

8 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

8 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

11 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

11 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

11 hours ago