ಸುತ್ತೂರು : ತಾಲ್ಲೂಕಿನ ತುಮ್ಮನೇರಳೆ ಗ್ರಾಮದಲ್ಲಿ ಶ್ರೀ ನಾಗಲಿಂಗೇಶ್ವರ ಸ್ವಾಮಿಯ ರಥೋತ್ಸವವು ಮಂಗಳವಾರ ಭಕ್ತರ ಜಯಘೋಷಗಳ ನಡುವೆ ವಿಜೃಂಭಣೆಯಿಂದ ಜರುಗಿತು.
ಗ್ರಾಮದ ಶ್ರೀ ನಾಗಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕ್ರಿಯೆಗಳನ್ನು ವಿಧಿ ವಿಧಾನದಂತೆ ನಡೆಸಲಾಯಿತು. ನಂತರ ರಥೋತ್ಸವಕ್ಕೆ ಅಲಂಕರಿಸಿದ ಉತ್ಸವ ಮೂರ್ತಿಯನ್ನು ಕುಳ್ಳಿರಿಸಿ ಪೂಜೆ ಸಲ್ಲಿಸಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ರಥೋತ್ಸವವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಎಳೆಯಲಾಯಿತು. ನಂತರ ದೇವಾಲಯದ ಪ್ರಾಂಗಣಕ್ಕೆ ರಥೋತ್ಸವ ಬಂದು ಸೇರಿತು. ರಥೋತ್ಸವದ ವೇಳೆ ಡೊಳ್ಳು ಕುಣಿತ, ವೀರ, ಮಕ್ಕಳ ಕುಣಿತ ಹಾಗೂ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿ ವಿಶೇಷ ಮೆರಗು ತಂದಿತ್ತು.
ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸಾವಿರಾರು ಭಕ್ತರು ತಮ್ಮ ಹರಕೆಗಳನ್ನು ತೀರಿಸಿದರು.
ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್ ಭದ್ರತೆಯು ಈಗ ಕೇವಲ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…
ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…