ಸುತ್ತೂರು : ತಾಲ್ಲೂಕಿನ ತುಮ್ಮನೇರಳೆ ಗ್ರಾಮದಲ್ಲಿ ಶ್ರೀ ನಾಗಲಿಂಗೇಶ್ವರ ಸ್ವಾಮಿಯ ರಥೋತ್ಸವವು ಮಂಗಳವಾರ ಭಕ್ತರ ಜಯಘೋಷಗಳ ನಡುವೆ ವಿಜೃಂಭಣೆಯಿಂದ ಜರುಗಿತು.
ಗ್ರಾಮದ ಶ್ರೀ ನಾಗಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕ್ರಿಯೆಗಳನ್ನು ವಿಧಿ ವಿಧಾನದಂತೆ ನಡೆಸಲಾಯಿತು. ನಂತರ ರಥೋತ್ಸವಕ್ಕೆ ಅಲಂಕರಿಸಿದ ಉತ್ಸವ ಮೂರ್ತಿಯನ್ನು ಕುಳ್ಳಿರಿಸಿ ಪೂಜೆ ಸಲ್ಲಿಸಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ರಥೋತ್ಸವವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಎಳೆಯಲಾಯಿತು. ನಂತರ ದೇವಾಲಯದ ಪ್ರಾಂಗಣಕ್ಕೆ ರಥೋತ್ಸವ ಬಂದು ಸೇರಿತು. ರಥೋತ್ಸವದ ವೇಳೆ ಡೊಳ್ಳು ಕುಣಿತ, ವೀರ, ಮಕ್ಕಳ ಕುಣಿತ ಹಾಗೂ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿ ವಿಶೇಷ ಮೆರಗು ತಂದಿತ್ತು.
ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸಾವಿರಾರು ಭಕ್ತರು ತಮ್ಮ ಹರಕೆಗಳನ್ನು ತೀರಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…