ಮೈಸೂರು

ದಸರಾ ಚಲನಚಿತ್ರೋತ್ಸವದಲ್ಲಿ ಕಿರು ಚಿತ್ರ ತಯಾರಿಕೆ ಸ್ಪರ್ಧೆ

ಮೈಸೂರು:- ಈ ಬಾರಿಯ ದಸರಾ ಚಲನಚಿತ್ರೋತ್ಸವದಲ್ಲಿ ಕಿರು ಚಿತ್ರ ತಯಾರಿಕೆ ಸ್ಪರ್ಧೆ ಸೇರಿದಂತೆ ಹಲವು ವಿಶೇಷತೆಗಳನ್ನು ನೀಡಲು, ದಸರಾ ಚಲನ ಚಿತ್ರೋತ್ಸವ ಉಪ ಸಮಿತಿ ಸಿದ್ಧತೆ ನಡೆಸಿದೆ.
ಇಂದು ಪ್ರವಾಸೋದ್ಯಮ ಇಲಾಖೆಯ ಕಚೇರಿಯಲ್ಲಿ ದಸರಾ ಚಲನಚಿತ್ರೋತ್ಸವ ಸಮಿತಿಯ ಉಪ ವಿಶೇಷಾಧಿಕಾರಿ ಹಾಗೂ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ದಸರಾ ಚಲನಚಿತ್ರೋತ್ಸವಕ್ಕೆ ಸಂಬoಧ ಮೊದಲ ಪೂರ್ವ ಭಾವಿ ಸಭೆ ನಡೆಸಲಾಯಿತು.
ಅಕ್ಟೋಬರ್ 16 ರಿಂದ 22 ರವರಗೆ ನಗರದ ಮಾಲ್ ಆಫ್ ಮೈಸೂರಿನಲ್ಲಿರುವ ಐನಾಕ್ಸ್ ಹಾಗೂ ಡಿಆರ್‍ಸಿ ಮಲ್ಟಿಫ್ಲೆಕ್ಸ್ ಚಿತ್ರಮಂದಿರದಲ್ಲಿ ದಸರಾ ಚಲನ ಚಿತ್ರೋತ್ಸವವನ್ನು ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಅಕ್ಟೋಬರ್ 15 ರಂದು ಕಲಾಮಂದಿರದಲ್ಲಿ ಮಾನ್ಯ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಚಿತ್ರ ಗಣ್ಯರು ದಸರಾ ಚಲನಚಿತ್ರೋತ್ಸವ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಈ ಹಿನ್ನೆಲೆಯಲ್ಲಿ ಸಿನಿಮಾ ನಟರು ಕಾರ್ಯಕ್ರಮದಲ್ಲಿ ಭಾಗವಹಿಸಿ, ತಾರಾ ರಂಗು ನೀಡಲು ಹಾಗೂ ಅವರನ್ನು ಆಹ್ವಾನಿಸಲು ಸಮಿತಿಯಿಂದ ಅಗತ್ಯ ಕ್ರಮವಹಿಸುವ ಬಗ್ಗೆ ಚರ್ಚಿಸಲಾಯಿತು.
ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಕನ್ನಡ ಸಿನಿಮಾಗಳು ಸೇರಿದಂತೆ ಜನಪ್ರಿಯ ಕನ್ನಡ ಸಿನಿಮಾ, ಕಲಾತ್ಮಕ ಸಿನಿಮಾಗಳು, ಜನಪ್ರಿಯಗೊಂಡಿರುವ ಭಾರತೀಯ ಸಿನಿಮಾಗಳು ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಸಿನಿಮಾಗಳನ್ನು ಪ್ರದರ್ಶಿಸಲು ಸಮಿತಿಯಿಂದ ತೀರ್ಮಾನಿಸಲಾಯಿತು.
2023ರ ಮೈಸೂರು ದಸರಾ ಚಲನಚಿತ್ರೋತ್ಸವ ಉಪ ಸಮಿತಿ ವತಿಯಿಂದ ಕಿರುಚಿತ್ರ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಕಿರುಚಿತ್ರವನ್ನು ಗೂಗಲ್ ಡ್ರೈವ್ ಅಥವಾ ಯೂಟ್ಯೂಬ್‍ಗೆ ಅಪೆÇ್ಲೀಡ್ ಮಾಡಿ ಅದರ ಲಿಂಕ್ ಅನ್ನು ಅರ್ಜಿಯಲ್ಲಿ ನಮೂದಿಸಬೇಕು. ನೋಂದಣಿಗೆ ಸೆ. 30 ಕೊನೆಯ ದಿನಾಂಕವಾಗಿದ್ದು, ನೋಂದಣಿ ಶುಲ್ಕ 100 ರೂ. ಪಾವತಿಸಬೇಕು.
ಸಭೆಯಲ್ಲಿ ದಸರಾ ಚಲನಚಿತ್ರೋತ್ಸವ ಉಪ ವಿಶೇಷಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾದ ಸವಿತಾ ಎಂ.ಕೆ, ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಕೆ.ಐ.ಎ.ಡಿ.ಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾದ ವಿ.ಪ್ರಿಯದರ್ಶಿನಿ, ಕಾರ್ಯದರ್ಶಿ ಹಾಗೂ ವಾರ್ತಾ ಇಲಾಖೆ ಉಪ ನಿರ್ದೇಶಕರಾದ ಅಶೋಕ್ ಕುಮಾರ್, ಸಹ ಕಾರ್ಯದರ್ಶಿ ಹಾಗೂ ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಹರೀಶ್ ಟಿ.ಕೆ. ಹಾಗೂ ಶ್ರೇಯಸ್ ಉಪಸ್ಥಿತರಿದ್ದರು.

lokesh

Recent Posts

ಓದುಗರ ಪತ್ರ | ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ವೈಫೈ ಸೌಲಭ್ಯ ಕಲ್ಪಿಸಿ

ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…

18 mins ago

ಆಂದೋಲನ ವಿಶೇಷ ; ಸೋನಂ ವಾಂಗ್ಚುಕ್ ದಿಢೀರ್ ಬಿಡುಗಡೆ ‌

• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…

2 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಕಲ ಸಿದ್ಧತೆ

ಮಹಾದೇಶ್‌ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…

3 hours ago

ಮತ್ತೆ ಚಿಗುರೊಡೆದ ಎಂಡಿಎ ಹೊಸ ಬಡಾವಣೆಯ ಕನಸು

ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…

3 hours ago

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

13 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

13 hours ago