Categories: ಮೈಸೂರು

ಯಾರೇ ಅಭ್ಯರ್ಥಿಯಾದರೂ ಪಕ್ಷಕ್ಕೆ ಬೆಂಬಲ ನೀಡಿ : ಪಕ್ಷದ ಕಾರ್ಯಕರ್ತರಿಗೆ ಎಸ್‌.ಎ.ರಾಮದಾಸ್‌ ಕರೆ !

ಮೈಸೂರು : ಪಕ್ಷದ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರೋಣ ಎಂದು ಮಾಜಿ ಶಾಸಕ ಎಸ್‌.ಎ.ರಾಮದಾಸ್‌ ತಿಳಿಸದ್ದಾರೆ.

ಮೈಸೂರು-ಕೊಡಗು ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ವಿಚಾರವಾಗಿ ಸೃಷ್ಠಿಯಾಗಿರುವ ಗೊದಲಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಭ್ಯರ್ಥಿಗಳ ಪಟ್ಟಿ ಇನ್ನು ಫೈನಲ್‌ ಆಗಿಲ್ಲ ಹೀಗಾಗಿ ಯಾರಿಗೂ ಗೊಂದಲ ಬೇಡ ಎಂದು ಮನವಿ ಮಾಡಿದರು.

ನಮ್ಮ ಪಕ್ಷ ನಡೆದುಕೊಂಡು ಬಂದಿರುವ ರೀತಿ ಎಲ್ಲರಿಗೂ ಗೊತ್ತು. ನಾಲ್ಕು ಬಾರಿ ಶಾಸಕನಾಗಿದ್ದರು, ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ದುಡಿದ ಶ್ರೀವತ್ಸ ಅವರಿಗೆ ಟಿಕೆಟ್‌ ನೀಡಿದಾಗ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಿಕೊಂಡು ಬರುತ್ತೇನೆ ಎಂದು ಪಕ್ಷದವರಿಗೆ ಹೇಳಿದ್ದೆ.

ನನಗೆ ಟಿಕೆಟ್‌ ಕೈತಪ್ಪಿದಾಗ ಸಂಸದ ಪ್ರತಾಪ್‌ ಸಿಂಹ ಸೇರಿದಂತೆ ಪಕ್ಷದ ಹಲವಾರು ಮುಖಂಡರು  ಮನೆಗೆ ಬಂದಿದ್ದರು. ಬಳಿಕ ನನ್ನ ಬೆಂಬಲಿಗರೊಂದಿಗೆ ಚರ್ಚೆ ಮಾಡಿ ಪಕ್ದಲ್ಲೇ ಇರುವುದಾಗಿ ಅಲ್ಲೇ ಅನೌಂಸ್‌ ಮಾಡಿದೆ.

ಆಗಲೂ ಪ್ಬಿರತಾಪ್ಜೆ‌ ಸಿಂಹ ಒಂದು ಮಾತು ಹೇಳಿದ್ಪಿದರು. ರಾಮದಾಸ್‌ ಅವರಿಗೆ ಪಕ್ಷ ತಾಯಿ ಸ್ಥಾನ. ಅವರು ಇಲ್ಲೇ ಇರುತ್ತಾರೆ ಎಂಬ ನಂಬಿಕೆಯ ಮಾತುಗಳನ್ನು ಆಡಿದ್ದರು. ಸಂದರ್ಭ ಎದುರಾದರೇ ಅವರೂ ಹಾಗೆಯೇ ನಡೆದುಕೊಳ್ಳುತ್ತಾರೆ ಎಂದು ನಂಬಿದ್ದೇನೆ ಎಂದರು.

ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ನೀಡಿದರೆ ಹಿಂದಿನ ಎರಡು ಬಾರಿಗಿಂತಲೂ ಹೆಚ್ಚಿನ ಮತಗಳಿಂದ ಗೆಲ್ಲಿಸಿಕೊಂಡು ಬರುತ್ತೇವೆ ಎಂದು ನಂಬಿಕೆಯನ್ನು ವ್ಯಕ್ತಪಡಿಸಿದರು.

ಎಂದೆಂದಿಗೂ ಮಹರಾಜರ ಬಗ್ಗೆ ಗೌರವವಿದೆ : ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಮೈಸೂರು ಮಹಾರಾಜರ ಕೊಡುಗೆಯ ಬಗ್ಗೆ ಮಾತನಾಡಿದ್ದರು. ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಸೇರಿದಂತೆ ನಾವೆಲ್ಲರೂ ಕೂಡ  ರಾಜರು ಕೊಟ್ಟಿರುವ ಕೊಡುಗೆಗೆ ಎಂದೆಂದಿಗೂ ರುಣಿಯಾಗಿಬೇಕು. ತಮ್ಮ ರಾಜ್ಯದ ಬಗ್ಗೆ ಹಿಂದಿನ ಮಹಾರಾಜರು ದೂರದೃಷ್ಠಿ ಇಟ್ಟು ಮಾಡಿರುವ ಕೆಲಸ ಒಂದಾ ಎರಡಾ ! ಸಾಕಷ್ಟಿವೆ ಎಂದರು.

 

 

 

 

 

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

11 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

11 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

11 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

11 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

12 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

12 hours ago