ಮೈಸೂರು : ಪಕ್ಷದ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರೋಣ ಎಂದು ಮಾಜಿ ಶಾಸಕ ಎಸ್.ಎ.ರಾಮದಾಸ್ ತಿಳಿಸದ್ದಾರೆ.
ಮೈಸೂರು-ಕೊಡಗು ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ವಿಚಾರವಾಗಿ ಸೃಷ್ಠಿಯಾಗಿರುವ ಗೊದಲಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಭ್ಯರ್ಥಿಗಳ ಪಟ್ಟಿ ಇನ್ನು ಫೈನಲ್ ಆಗಿಲ್ಲ ಹೀಗಾಗಿ ಯಾರಿಗೂ ಗೊಂದಲ ಬೇಡ ಎಂದು ಮನವಿ ಮಾಡಿದರು.
ನಮ್ಮ ಪಕ್ಷ ನಡೆದುಕೊಂಡು ಬಂದಿರುವ ರೀತಿ ಎಲ್ಲರಿಗೂ ಗೊತ್ತು. ನಾಲ್ಕು ಬಾರಿ ಶಾಸಕನಾಗಿದ್ದರು, ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ದುಡಿದ ಶ್ರೀವತ್ಸ ಅವರಿಗೆ ಟಿಕೆಟ್ ನೀಡಿದಾಗ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಿಕೊಂಡು ಬರುತ್ತೇನೆ ಎಂದು ಪಕ್ಷದವರಿಗೆ ಹೇಳಿದ್ದೆ.
ನನಗೆ ಟಿಕೆಟ್ ಕೈತಪ್ಪಿದಾಗ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಪಕ್ಷದ ಹಲವಾರು ಮುಖಂಡರು ಮನೆಗೆ ಬಂದಿದ್ದರು. ಬಳಿಕ ನನ್ನ ಬೆಂಬಲಿಗರೊಂದಿಗೆ ಚರ್ಚೆ ಮಾಡಿ ಪಕ್ದಲ್ಲೇ ಇರುವುದಾಗಿ ಅಲ್ಲೇ ಅನೌಂಸ್ ಮಾಡಿದೆ.
ಆಗಲೂ ಪ್ಬಿರತಾಪ್ಜೆ ಸಿಂಹ ಒಂದು ಮಾತು ಹೇಳಿದ್ಪಿದರು. ರಾಮದಾಸ್ ಅವರಿಗೆ ಪಕ್ಷ ತಾಯಿ ಸ್ಥಾನ. ಅವರು ಇಲ್ಲೇ ಇರುತ್ತಾರೆ ಎಂಬ ನಂಬಿಕೆಯ ಮಾತುಗಳನ್ನು ಆಡಿದ್ದರು. ಸಂದರ್ಭ ಎದುರಾದರೇ ಅವರೂ ಹಾಗೆಯೇ ನಡೆದುಕೊಳ್ಳುತ್ತಾರೆ ಎಂದು ನಂಬಿದ್ದೇನೆ ಎಂದರು.
ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡಿದರೆ ಹಿಂದಿನ ಎರಡು ಬಾರಿಗಿಂತಲೂ ಹೆಚ್ಚಿನ ಮತಗಳಿಂದ ಗೆಲ್ಲಿಸಿಕೊಂಡು ಬರುತ್ತೇವೆ ಎಂದು ನಂಬಿಕೆಯನ್ನು ವ್ಯಕ್ತಪಡಿಸಿದರು.
ಎಂದೆಂದಿಗೂ ಮಹರಾಜರ ಬಗ್ಗೆ ಗೌರವವಿದೆ : ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಮೈಸೂರು ಮಹಾರಾಜರ ಕೊಡುಗೆಯ ಬಗ್ಗೆ ಮಾತನಾಡಿದ್ದರು. ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಸೇರಿದಂತೆ ನಾವೆಲ್ಲರೂ ಕೂಡ ರಾಜರು ಕೊಟ್ಟಿರುವ ಕೊಡುಗೆಗೆ ಎಂದೆಂದಿಗೂ ರುಣಿಯಾಗಿಬೇಕು. ತಮ್ಮ ರಾಜ್ಯದ ಬಗ್ಗೆ ಹಿಂದಿನ ಮಹಾರಾಜರು ದೂರದೃಷ್ಠಿ ಇಟ್ಟು ಮಾಡಿರುವ ಕೆಲಸ ಒಂದಾ ಎರಡಾ ! ಸಾಕಷ್ಟಿವೆ ಎಂದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…