Categories: ಮೈಸೂರು

ಯಾರೇ ಅಭ್ಯರ್ಥಿಯಾದರೂ ಪಕ್ಷಕ್ಕೆ ಬೆಂಬಲ ನೀಡಿ : ಪಕ್ಷದ ಕಾರ್ಯಕರ್ತರಿಗೆ ಎಸ್‌.ಎ.ರಾಮದಾಸ್‌ ಕರೆ !

ಮೈಸೂರು : ಪಕ್ಷದ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರೋಣ ಎಂದು ಮಾಜಿ ಶಾಸಕ ಎಸ್‌.ಎ.ರಾಮದಾಸ್‌ ತಿಳಿಸದ್ದಾರೆ.

ಮೈಸೂರು-ಕೊಡಗು ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ವಿಚಾರವಾಗಿ ಸೃಷ್ಠಿಯಾಗಿರುವ ಗೊದಲಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಭ್ಯರ್ಥಿಗಳ ಪಟ್ಟಿ ಇನ್ನು ಫೈನಲ್‌ ಆಗಿಲ್ಲ ಹೀಗಾಗಿ ಯಾರಿಗೂ ಗೊಂದಲ ಬೇಡ ಎಂದು ಮನವಿ ಮಾಡಿದರು.

ನಮ್ಮ ಪಕ್ಷ ನಡೆದುಕೊಂಡು ಬಂದಿರುವ ರೀತಿ ಎಲ್ಲರಿಗೂ ಗೊತ್ತು. ನಾಲ್ಕು ಬಾರಿ ಶಾಸಕನಾಗಿದ್ದರು, ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ದುಡಿದ ಶ್ರೀವತ್ಸ ಅವರಿಗೆ ಟಿಕೆಟ್‌ ನೀಡಿದಾಗ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಿಕೊಂಡು ಬರುತ್ತೇನೆ ಎಂದು ಪಕ್ಷದವರಿಗೆ ಹೇಳಿದ್ದೆ.

ನನಗೆ ಟಿಕೆಟ್‌ ಕೈತಪ್ಪಿದಾಗ ಸಂಸದ ಪ್ರತಾಪ್‌ ಸಿಂಹ ಸೇರಿದಂತೆ ಪಕ್ಷದ ಹಲವಾರು ಮುಖಂಡರು  ಮನೆಗೆ ಬಂದಿದ್ದರು. ಬಳಿಕ ನನ್ನ ಬೆಂಬಲಿಗರೊಂದಿಗೆ ಚರ್ಚೆ ಮಾಡಿ ಪಕ್ದಲ್ಲೇ ಇರುವುದಾಗಿ ಅಲ್ಲೇ ಅನೌಂಸ್‌ ಮಾಡಿದೆ.

ಆಗಲೂ ಪ್ಬಿರತಾಪ್ಜೆ‌ ಸಿಂಹ ಒಂದು ಮಾತು ಹೇಳಿದ್ಪಿದರು. ರಾಮದಾಸ್‌ ಅವರಿಗೆ ಪಕ್ಷ ತಾಯಿ ಸ್ಥಾನ. ಅವರು ಇಲ್ಲೇ ಇರುತ್ತಾರೆ ಎಂಬ ನಂಬಿಕೆಯ ಮಾತುಗಳನ್ನು ಆಡಿದ್ದರು. ಸಂದರ್ಭ ಎದುರಾದರೇ ಅವರೂ ಹಾಗೆಯೇ ನಡೆದುಕೊಳ್ಳುತ್ತಾರೆ ಎಂದು ನಂಬಿದ್ದೇನೆ ಎಂದರು.

ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ನೀಡಿದರೆ ಹಿಂದಿನ ಎರಡು ಬಾರಿಗಿಂತಲೂ ಹೆಚ್ಚಿನ ಮತಗಳಿಂದ ಗೆಲ್ಲಿಸಿಕೊಂಡು ಬರುತ್ತೇವೆ ಎಂದು ನಂಬಿಕೆಯನ್ನು ವ್ಯಕ್ತಪಡಿಸಿದರು.

ಎಂದೆಂದಿಗೂ ಮಹರಾಜರ ಬಗ್ಗೆ ಗೌರವವಿದೆ : ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಮೈಸೂರು ಮಹಾರಾಜರ ಕೊಡುಗೆಯ ಬಗ್ಗೆ ಮಾತನಾಡಿದ್ದರು. ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಸೇರಿದಂತೆ ನಾವೆಲ್ಲರೂ ಕೂಡ  ರಾಜರು ಕೊಟ್ಟಿರುವ ಕೊಡುಗೆಗೆ ಎಂದೆಂದಿಗೂ ರುಣಿಯಾಗಿಬೇಕು. ತಮ್ಮ ರಾಜ್ಯದ ಬಗ್ಗೆ ಹಿಂದಿನ ಮಹಾರಾಜರು ದೂರದೃಷ್ಠಿ ಇಟ್ಟು ಮಾಡಿರುವ ಕೆಲಸ ಒಂದಾ ಎರಡಾ ! ಸಾಕಷ್ಟಿವೆ ಎಂದರು.

 

 

 

 

 

andolanait

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

33 mins ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

1 hour ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

1 hour ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

2 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

4 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

4 hours ago