Categories: ಮೈಸೂರು

ಯಾರೇ ಅಭ್ಯರ್ಥಿಯಾದರೂ ಪಕ್ಷಕ್ಕೆ ಬೆಂಬಲ ನೀಡಿ : ಪಕ್ಷದ ಕಾರ್ಯಕರ್ತರಿಗೆ ಎಸ್‌.ಎ.ರಾಮದಾಸ್‌ ಕರೆ !

ಮೈಸೂರು : ಪಕ್ಷದ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರೋಣ ಎಂದು ಮಾಜಿ ಶಾಸಕ ಎಸ್‌.ಎ.ರಾಮದಾಸ್‌ ತಿಳಿಸದ್ದಾರೆ.

ಮೈಸೂರು-ಕೊಡಗು ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ವಿಚಾರವಾಗಿ ಸೃಷ್ಠಿಯಾಗಿರುವ ಗೊದಲಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಭ್ಯರ್ಥಿಗಳ ಪಟ್ಟಿ ಇನ್ನು ಫೈನಲ್‌ ಆಗಿಲ್ಲ ಹೀಗಾಗಿ ಯಾರಿಗೂ ಗೊಂದಲ ಬೇಡ ಎಂದು ಮನವಿ ಮಾಡಿದರು.

ನಮ್ಮ ಪಕ್ಷ ನಡೆದುಕೊಂಡು ಬಂದಿರುವ ರೀತಿ ಎಲ್ಲರಿಗೂ ಗೊತ್ತು. ನಾಲ್ಕು ಬಾರಿ ಶಾಸಕನಾಗಿದ್ದರು, ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ದುಡಿದ ಶ್ರೀವತ್ಸ ಅವರಿಗೆ ಟಿಕೆಟ್‌ ನೀಡಿದಾಗ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಿಕೊಂಡು ಬರುತ್ತೇನೆ ಎಂದು ಪಕ್ಷದವರಿಗೆ ಹೇಳಿದ್ದೆ.

ನನಗೆ ಟಿಕೆಟ್‌ ಕೈತಪ್ಪಿದಾಗ ಸಂಸದ ಪ್ರತಾಪ್‌ ಸಿಂಹ ಸೇರಿದಂತೆ ಪಕ್ಷದ ಹಲವಾರು ಮುಖಂಡರು  ಮನೆಗೆ ಬಂದಿದ್ದರು. ಬಳಿಕ ನನ್ನ ಬೆಂಬಲಿಗರೊಂದಿಗೆ ಚರ್ಚೆ ಮಾಡಿ ಪಕ್ದಲ್ಲೇ ಇರುವುದಾಗಿ ಅಲ್ಲೇ ಅನೌಂಸ್‌ ಮಾಡಿದೆ.

ಆಗಲೂ ಪ್ಬಿರತಾಪ್ಜೆ‌ ಸಿಂಹ ಒಂದು ಮಾತು ಹೇಳಿದ್ಪಿದರು. ರಾಮದಾಸ್‌ ಅವರಿಗೆ ಪಕ್ಷ ತಾಯಿ ಸ್ಥಾನ. ಅವರು ಇಲ್ಲೇ ಇರುತ್ತಾರೆ ಎಂಬ ನಂಬಿಕೆಯ ಮಾತುಗಳನ್ನು ಆಡಿದ್ದರು. ಸಂದರ್ಭ ಎದುರಾದರೇ ಅವರೂ ಹಾಗೆಯೇ ನಡೆದುಕೊಳ್ಳುತ್ತಾರೆ ಎಂದು ನಂಬಿದ್ದೇನೆ ಎಂದರು.

ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ನೀಡಿದರೆ ಹಿಂದಿನ ಎರಡು ಬಾರಿಗಿಂತಲೂ ಹೆಚ್ಚಿನ ಮತಗಳಿಂದ ಗೆಲ್ಲಿಸಿಕೊಂಡು ಬರುತ್ತೇವೆ ಎಂದು ನಂಬಿಕೆಯನ್ನು ವ್ಯಕ್ತಪಡಿಸಿದರು.

ಎಂದೆಂದಿಗೂ ಮಹರಾಜರ ಬಗ್ಗೆ ಗೌರವವಿದೆ : ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಮೈಸೂರು ಮಹಾರಾಜರ ಕೊಡುಗೆಯ ಬಗ್ಗೆ ಮಾತನಾಡಿದ್ದರು. ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಸೇರಿದಂತೆ ನಾವೆಲ್ಲರೂ ಕೂಡ  ರಾಜರು ಕೊಟ್ಟಿರುವ ಕೊಡುಗೆಗೆ ಎಂದೆಂದಿಗೂ ರುಣಿಯಾಗಿಬೇಕು. ತಮ್ಮ ರಾಜ್ಯದ ಬಗ್ಗೆ ಹಿಂದಿನ ಮಹಾರಾಜರು ದೂರದೃಷ್ಠಿ ಇಟ್ಟು ಮಾಡಿರುವ ಕೆಲಸ ಒಂದಾ ಎರಡಾ ! ಸಾಕಷ್ಟಿವೆ ಎಂದರು.

 

 

 

 

 

andolanait

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

8 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

8 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

9 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

9 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

10 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

10 hours ago