ಮೈಸೂರು

ವಸತಿ ಶಾಲೆಗಳ ಇನ್ನಷ್ಟು ಮಕ್ಕಳು ರ‍್ಯಾಂಕ್ ಪಡೆಯಬೇಕು : ಸಿಎಂ ಆಶಯ

ಮೈಸೂರು : ವಸತಿ ಶಾಲೆಗಳ ಇನ್ನಷ್ಟು ಮಕ್ಕಳು ರ‍್ಯಾಂಕ್ ಪಡೆಯಬೇಕು, ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಆಶಿಸಿದರು.

ಬಸವ ಜಯಂತಿ ಅಂಗವಾಗಿ ನಗರದ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರ ಳನ್ನು ಅಭಿನಂದಿಸಿದರು.

ಅಂಕಿತಾಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪನೆಯ ಉದ್ದೇಶವೇ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕೂಡ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬುದಾಗಿದೆ. 1994 ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ಹೆಂಡದಂಗಡಿ, ಸಾರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು ಎಂಬುದು ದಲಿತ ಹೋರಾಟದ, ದಲಿತ ಸಂಘರ್ಷ ಸಮಿತಿಯವರ ಘೋಷಣೆಯಾಗಿತ್ತು. ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಕಾರಣ ಮತ್ತು ನಾನು ಕೂಡ ಗ್ರಾಮೀಣ ಪ್ರದೇಶದಿಂದ ಬಂದವನಾದ್ದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಲಾಯಿತು. ಇಂದು ಹೋಬಳಿಗೊಂದರಂತೆ 800 ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.

ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನ ಪಡೆದಿದೆ. ಈ ಬಾರಿ ಐದರೊಳಗೆ ಬರಬೇಕು ಎಂದು ಸೂಚಿಸಿದ್ದೆ. ಏಳನೇ ಸ್ಥಾನ ಪಡೆದಿದೆ. ಮುಂದಿನ ಬಾರಿ ಈ ಗುರಿ ಸಾಧಿಸುವಂತೆ ಮಾರ್ಗದರ್ಶನ ನೀಡಲಾಗುವುದು.

ಚುನಾವಣಾ ನೀತಿ ಸಂಹಿತೆ ಇರುವುದರಿಂದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗುವುದಿಲ್ಲ. ಈ ಕಾರಣಕ್ಕೆ ಬಸವಣ್ಣನವರ ಮೂರ್ತಿಗೆ ಹಾರ ಹಾಕಿ, ಅವರನ್ನು ಸ್ಮರಿಸುತ್ತಾ, ಅವರ ವಿಚಾರಗಳನ್ನು ಸ್ಮರಿಸಿ, ಆ ದಾರಿಯಲ್ಲಿ ನಡೆಯುವ ಸಂಕಲ್ಪ ಮಾಡಿದ್ದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

19 mins ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

27 mins ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

2 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

5 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

5 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

5 hours ago