ಮೈಸೂರು : ವಸತಿ ಶಾಲೆಗಳ ಇನ್ನಷ್ಟು ಮಕ್ಕಳು ರ್ಯಾಂಕ್ ಪಡೆಯಬೇಕು, ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಆಶಿಸಿದರು.
ಬಸವ ಜಯಂತಿ ಅಂಗವಾಗಿ ನಗರದ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರ ಳನ್ನು ಅಭಿನಂದಿಸಿದರು.
ಅಂಕಿತಾಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪನೆಯ ಉದ್ದೇಶವೇ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕೂಡ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬುದಾಗಿದೆ. 1994 ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ಹೆಂಡದಂಗಡಿ, ಸಾರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು ಎಂಬುದು ದಲಿತ ಹೋರಾಟದ, ದಲಿತ ಸಂಘರ್ಷ ಸಮಿತಿಯವರ ಘೋಷಣೆಯಾಗಿತ್ತು. ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಕಾರಣ ಮತ್ತು ನಾನು ಕೂಡ ಗ್ರಾಮೀಣ ಪ್ರದೇಶದಿಂದ ಬಂದವನಾದ್ದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಲಾಯಿತು. ಇಂದು ಹೋಬಳಿಗೊಂದರಂತೆ 800 ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.
ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನ ಪಡೆದಿದೆ. ಈ ಬಾರಿ ಐದರೊಳಗೆ ಬರಬೇಕು ಎಂದು ಸೂಚಿಸಿದ್ದೆ. ಏಳನೇ ಸ್ಥಾನ ಪಡೆದಿದೆ. ಮುಂದಿನ ಬಾರಿ ಈ ಗುರಿ ಸಾಧಿಸುವಂತೆ ಮಾರ್ಗದರ್ಶನ ನೀಡಲಾಗುವುದು.
ಚುನಾವಣಾ ನೀತಿ ಸಂಹಿತೆ ಇರುವುದರಿಂದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗುವುದಿಲ್ಲ. ಈ ಕಾರಣಕ್ಕೆ ಬಸವಣ್ಣನವರ ಮೂರ್ತಿಗೆ ಹಾರ ಹಾಕಿ, ಅವರನ್ನು ಸ್ಮರಿಸುತ್ತಾ, ಅವರ ವಿಚಾರಗಳನ್ನು ಸ್ಮರಿಸಿ, ಆ ದಾರಿಯಲ್ಲಿ ನಡೆಯುವ ಸಂಕಲ್ಪ ಮಾಡಿದ್ದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…