ಮೈಸೂರು : ವಸತಿ ಶಾಲೆಗಳ ಇನ್ನಷ್ಟು ಮಕ್ಕಳು ರ್ಯಾಂಕ್ ಪಡೆಯಬೇಕು, ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಆಶಿಸಿದರು.
ಬಸವ ಜಯಂತಿ ಅಂಗವಾಗಿ ನಗರದ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರ ಳನ್ನು ಅಭಿನಂದಿಸಿದರು.
ಅಂಕಿತಾಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪನೆಯ ಉದ್ದೇಶವೇ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕೂಡ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬುದಾಗಿದೆ. 1994 ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ಹೆಂಡದಂಗಡಿ, ಸಾರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು ಎಂಬುದು ದಲಿತ ಹೋರಾಟದ, ದಲಿತ ಸಂಘರ್ಷ ಸಮಿತಿಯವರ ಘೋಷಣೆಯಾಗಿತ್ತು. ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಕಾರಣ ಮತ್ತು ನಾನು ಕೂಡ ಗ್ರಾಮೀಣ ಪ್ರದೇಶದಿಂದ ಬಂದವನಾದ್ದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಲಾಯಿತು. ಇಂದು ಹೋಬಳಿಗೊಂದರಂತೆ 800 ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.
ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನ ಪಡೆದಿದೆ. ಈ ಬಾರಿ ಐದರೊಳಗೆ ಬರಬೇಕು ಎಂದು ಸೂಚಿಸಿದ್ದೆ. ಏಳನೇ ಸ್ಥಾನ ಪಡೆದಿದೆ. ಮುಂದಿನ ಬಾರಿ ಈ ಗುರಿ ಸಾಧಿಸುವಂತೆ ಮಾರ್ಗದರ್ಶನ ನೀಡಲಾಗುವುದು.
ಚುನಾವಣಾ ನೀತಿ ಸಂಹಿತೆ ಇರುವುದರಿಂದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗುವುದಿಲ್ಲ. ಈ ಕಾರಣಕ್ಕೆ ಬಸವಣ್ಣನವರ ಮೂರ್ತಿಗೆ ಹಾರ ಹಾಕಿ, ಅವರನ್ನು ಸ್ಮರಿಸುತ್ತಾ, ಅವರ ವಿಚಾರಗಳನ್ನು ಸ್ಮರಿಸಿ, ಆ ದಾರಿಯಲ್ಲಿ ನಡೆಯುವ ಸಂಕಲ್ಪ ಮಾಡಿದ್ದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…