Categories: ಮೈಸೂರು

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ನೀಡುವಂತೆ ಮನವಿ ಮಾಡಿದ್ದೇವೆ. ಕೇಂದ್ರ ಸರ್ಕಾರದ ನಿಯಮಗಳಂತೆ ಬರ ಅಧ್ಯಯನ ನಡೆಸಲಾಗಿದೆ. ಕೇಂದ್ರ ಸರ್ಕಾರವೂ ಒಂದು ತಂಡವನ್ನು ಕಳುಹಿಸಿ ಪರಿಶೀಲನೆ ನಡೆಸಲಿದೆ. ಆ ಬಳಿಕ ಪರಿಹಾರದ ಹಣ ಬಿಡುಗಡೆ ಮಾಡಲಿದೆ ಎಂದು ಹೇಳಿದ್ದಾರೆ.

ಸದ್ಯ ನಮ್ಮ ಮುಂದಿರುವ ಪ್ರಮುಖ ಆದ್ಯತೆ ಕುಡಿಯುವ ನೀರು. ಜಾನುವಾರುಗಳಿಗೂ ಕುಡಿಯುವ ನೀರು ಒದಗಿಸುವುದು ಸರ್ಕಾರದ ಜವಾಬ್ದಾರಿ. ಕಳೆದ ಬಾರಿ ನ್ಯಾಯಾಲಯಕ್ಕೆ ಹೋಗಿ ಹೋರಾಟ ನಡೆಸಿದ ಬಳಿಕ 3,500 ಕೋಟಿ ರೂಪಾಯಿ ಪರಿಹಾರ ಬಂದಿತ್ತು. ಈ ಬಗ್ಗೆಯೂ ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದೇವೆ. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುವಂತೆ ಮನವಿ ಮಾಡುತ್ತೇವೆ ಎಂದು ಪರಮೇಶ್ವರ್‌ ಹೇಳಿದ್ದಾರೆ.

ಇನ್ನು ಮೈಸೂರಿನ ಮದರಗಹಳ್ಳಿ ಕೃಷಿ ಭೂಮಿಗೆ ನೋಟಿಫಿಕೇಶನ್ ನೀಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಮೈಸೂರಿನಲ್ಲಿ ಹೆಚ್ಚಿನ ಕಾರ್ಖಾನೆಗಳು ಬರಬೇಕು ಎಂಬ ಉದ್ದೇಶದಿಂದ ಕೆಐಡಿಬಿ ಭೂಮಿಗೆ ನೋಟಿಫಿಕೇಶನ್ ನೀಡಿರಬಹುದು. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ನೋಡಿಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಸಚಿವ ನಾಗೇಂದ್ರ ರಾಜೀನಾಮೆ ವಿಚಾರವಾಗಿ ಮಾತನಾಡಿದ ಪರಮೇಶ್ವರ್‌, ಇದು ಪಕ್ಷಕ್ಕೆ ಖಂಡಿತವಾಗಿಯೂ ಮುಜುಗರ ಉಂಟುಮಾಡಿದೆ. ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಮಾಡಿದೆ. ಎರಡು ಬಾರಿ ರಾಜೀನಾಮೆ ಕೊಡಿಸಿ ರಾಜಕೀಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಾಗೇಂದ್ರ ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ. ವಾಸ್ತವವಾಗಿ ರಾಜೀನಾಮೆ ನೀಡುವ ಅವಶ್ಯಕತೆ ಇರಲಿಲ್ಲ. ಇಡಿ ಮತ್ತು ಸಿಬಿಐನಲ್ಲಿ ನಾಗೇಂದ್ರ ಅವರ ಹೆಸರು ಉಲ್ಲೇಖವಾಗಿಲ್ಲ. ನಾಗೇಂದ್ರ ಹಣ ಪಡೆದಿರುವುದಕ್ಕೆ ಯಾವುದೇ ಸಾಕ್ಷ್ಯವೂ ಇಲ್ಲ ಎಂದು ಹೇಳಿದ್ದಾರೆ.

ನಾನು ಗೃಹ ಸಚಿವನಾಗಿದ್ದಾಗಲೇ ಬಹುತೇಕ ಹಣ ರಿಕವರಿ ಆಗಿತ್ತು. 5 ಕೋಟಿ ರೂಪಾಯಿ ಹಣ ರಿಕವರಿ ಪ್ರಕ್ರಿಯೆ ನಡೆಯುತ್ತಿದೆ. ಅಲ್ಲಿಯೂ ನಾಗೇಂದ್ರ ಅವರ ಹೆಸರು ಇಲ್ಲ. ಮುಂದಿನ ದಿನಗಳಲ್ಲಿ ವಸ್ತುಸ್ಥಿತಿಯನ್ನು ಜನರ ಮುಂದೆ ತಿಳಿಸುತ್ತೇವೆ. ಬಿಜೆಪಿಯವರು ಸದನದಲ್ಲಿ ಈ ಪ್ರಶ್ನೆ ಕೇಳಿ ಎಂದರೂ ಕೇಳಲಿಲ್ಲ. ಅವರು ಬರೀ ರಾಜಕೀಯ ಮಾಡುತ್ತಿದ್ದಾರೆ ಎಂದು ಪರಮೇಶ್ವರ್‌ ಕಿಡಿಕಾರಿದ್ದಾರೆ.

ಇನ್ನು ಪ್ರಿಯಾಂಕ್‌ ಖರ್ಗೆ ಹಗರಣ ಮುಚ್ಚಿಕೊಳ್ಳಲು ಗೃಹ ಇಲಾಖೆ ಪಡೆದಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ, ಎಲ್ಲರ ಮೇಲೂ ಆರೋಪ ಮಾಡುವುದು ಕುಮಾರಸ್ವಾಮಿ ಅವರ ಕೆಲಸವಾಗಿದೆ. ಅದಕ್ಕೆ ತಕ್ಕ ದಾಖಲೆಗಳಿದ್ದರೆ ನೀಡಲಿ. ಕಾನೂನು ಚೌಕಟ್ಟಿನಲ್ಲಿ ಏನು ಬೇಕಾದರೂ ಮಾಡಲಿ. ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ—ನನಗೂ ಒಂದೇ, ಕುಮಾರಸ್ವಾಮಿಗೂ ಒಂದೇ, ಪ್ರಿಯಾಂಕ್‌ ಖರ್ಗೆಗೂ ಒಂದೇ ಎಂದು ಪರಮೇಶ್ವರ್‌ ಹೇಳಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಮೌನವಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಸದನಕ್ಕೂ ಬಂದಿದ್ದರು. ಸದ್ಯ ಎರಡು ತಿಂಗಳು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ. ಬಳಿಕ ಅವರೂ ಕೂಡ ರಾಜಕೀಯ ಚಟುವಟಿಕೆಗಳನ್ನು ಆರಂಭಿಸುತ್ತಾರೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

9 mins ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

1 hour ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

1 hour ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

1 hour ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

4 hours ago