ಮೈಸೂರು

ಒಂದು ಎಕರೆಯಲ್ಲಿ 102 ವಿವಿಧ ಬೆಳೆ : ರೋಗರಹಿತ ಬೆಳೆಗಳ ತಳಿ ಪ್ರದರ್ಶನ

ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.

ಹೌದು ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಈ ಕೃಷಿ ಬ್ರಹ್ಮಾಂಡ ಬೆಳೆಗಳ ಪ್ರದರ್ಶನ ನಡೆದಿದ್ದು, ಇದನ್ನು ವೀಕ್ಷಿಸಿದ ಆಸಕ್ತರು ನಿಬ್ಬೆರಗಾಗಿದ್ದಾರೆ.

ಏಕದಳ ಬೆಳೆ, ಸಿರಿ ಧಾನ್ಯಗಳು, ದ್ವಿದಳ ಬೆಳೆ, ಎಣ್ಣೆ ಕಾಳು ಬೆಳೆ, ತರಕಾರಿ, ಸೊಪ್ಪುಗಳು, ಹೂವಿನ ಗಿಡಗಳು, ಹಣ್ಣಿನ ಬೆಳೆ, ತೋಟ ಪಟ್ಟಿ ಬೆಳೆ, ಔಷಧಿ, ಸುಗಂಧ ಸಸ್ಯ, ಮೇವಿನ ಬೆಳೆ, ರೇಷ್ಮೆ, ಬಹುಪಯೋಗಿ ಮರಗಳು, ಬೇಲಿ ಬೆಳೆಗಳು ಮತ್ತು ಪೂರಕ ಕಸುಬುಗಳ ಅವಶ್ಯಕತೆಗಳು ಈ ಪ್ರದರ್ಶನದಲ್ಲಿ ಗಮನ ಸೆಳೆಯುತ್ತಿವೆ.

ನಂಜನಗೂಡು ತಾಲೂಕು ಸುತ್ತೂರು ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಒಂದು ಎಕರೆ ಪ್ರದೇಶ ಭೂಮಿಯಲ್ಲಿ ಸುಮಾರು ನೂರ ಎರಡು ವಿವಿಧ ಬೆಳೆಗಳ ಪ್ರದರ್ಶನಕ್ಕೆ ಬೆಳೆದಿದ್ದು, ಅದರಲ್ಲೂ ವರ್ಷಪೂರ್ತಿ ಯಾವ ಕಾಲದಲ್ಲಾದರೂ ಬೆಳೆಯುವಂತ ರೋಗರಹಿತ ರಾಗಿ, ಜೋಳ, ಭತ, ಸಿರಿ ಧಾನ್ಯಗಳು, ವಿವಿಧ ತರಕಾರಿಗಳನ್ನು ಬೆಳೆದಿದ್ದು, ಈ ಬೆಳೆಗಳ ಬಗ್ಗೆ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಶಾಮ್ ರಾಜ್ ಅವರು ಮಾಹಿತಿ ನೀಡಿದ್ದಾರೆ.

ಇಂತಹ ಬೆಳೆಗಳಿಂದ ಮಣ್ಣಿನ ಫಲವತ್ತತೆಯೂ ಹೆಚ್ಚಾಗಲಿದ್ದು, ರೋಗ ರಹಿತ ರಾಗಿಯಂತಹ ಬೆಳೆಗಳನ್ನು ಎಕರೆಗೆ 10ರಿಂದ 12 ಕ್ವಿಂಟಾಲ್ ಬೆಳೆಯಬಹುದಾಗಿದೆ. 100 ರಿಂದ 102 ದಿನದೊಳಗೆ ಕಟಾವು ಸಹ ಮಾಡಬಹುದು. ಅಲ್ಲದೇ ಎಲ್ಲಾ ಸಮಯದಲ್ಲೂ ಅಂದರೆ ಹಿಂಗಾರು, ಮುಂಗಾರು, ಬೇಸಿಗೆ ಕಾಲ, ಚಳಿಗಾಲದಲ್ಲಿಯೂ ಈ ಆರೋಗ್ಯಕರ ಬೆಳೆಗಳನ್ನು ಬೆಳೆಯಬಹುದು.ಮತ್ತು ಉತ್ತಮ ಮೇವಿಗೂ ಇದು ಅನುಕೂಲಕರ ಎಂದರಲ್ಲದೇ, ಈ ಬೆಳೆಗಳಿಗೆ ಬೆಂಕಿರೋಗ, ಕುತ್ತಿಗೆ ರೋಗದಂತಹ ಸಮಸ್ಯೆಗಳು ಕಾಣಿಸಿಕೊಳ್ಳುವುದಿಲ್ಲ. ಮತ್ತು ತೆನೆ ತಿಗಣೆಯಂತಹ ಸಮಸ್ಯೆಯೂ ಉದ್ಭವಿಸಿವುದಿಲ್ಲ ಎಂದರು.

ಎಲ್ಲಕ್ಕಿಂತ ಮಿಗಿಲಾಗಿ ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆಯಬಹುದಾದಂತಹ ಬೆಳೆಗಳು ಇದಾಗಿದ್ದು, ಉತ್ತಮ ಆರೋಗ್ಯಕ್ಕೂ ಸಹಕಾರಿಯಾಗಲಿದೆ.ರೈತರು ಈ ರೀತಿಯ ಅಂತರ್ ಬೆಳೆಗಳನ್ನು ಬೆಳೆಯಲು ಆಸಕ್ತಿ ತೋರುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕೆಂಬುದು ನಮ್ಮ ಸಲಹೆ ಎಂದು ಅಭಿಪ್ರಾಯವನ್ನು ಹಂಚಿಕೊಂಡರು.

ಇನ್ನು ಹೆಚ್ಚಿನ ಮಾಹಿತಿಗಾಗಿ 9986269393 ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಚಿತ್ರ, ಮಾಹಿತಿ: ಸುತ್ತೂರು ನಂಜುಂಡನಾಯಕ

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

6 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

7 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

8 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

9 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

14 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

16 hours ago