ಮೈಸೂರು

ಒಂದು ಎಕರೆಯಲ್ಲಿ 102 ವಿವಿಧ ಬೆಳೆ : ರೋಗರಹಿತ ಬೆಳೆಗಳ ತಳಿ ಪ್ರದರ್ಶನ

ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.

ಹೌದು ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಈ ಕೃಷಿ ಬ್ರಹ್ಮಾಂಡ ಬೆಳೆಗಳ ಪ್ರದರ್ಶನ ನಡೆದಿದ್ದು, ಇದನ್ನು ವೀಕ್ಷಿಸಿದ ಆಸಕ್ತರು ನಿಬ್ಬೆರಗಾಗಿದ್ದಾರೆ.

ಏಕದಳ ಬೆಳೆ, ಸಿರಿ ಧಾನ್ಯಗಳು, ದ್ವಿದಳ ಬೆಳೆ, ಎಣ್ಣೆ ಕಾಳು ಬೆಳೆ, ತರಕಾರಿ, ಸೊಪ್ಪುಗಳು, ಹೂವಿನ ಗಿಡಗಳು, ಹಣ್ಣಿನ ಬೆಳೆ, ತೋಟ ಪಟ್ಟಿ ಬೆಳೆ, ಔಷಧಿ, ಸುಗಂಧ ಸಸ್ಯ, ಮೇವಿನ ಬೆಳೆ, ರೇಷ್ಮೆ, ಬಹುಪಯೋಗಿ ಮರಗಳು, ಬೇಲಿ ಬೆಳೆಗಳು ಮತ್ತು ಪೂರಕ ಕಸುಬುಗಳ ಅವಶ್ಯಕತೆಗಳು ಈ ಪ್ರದರ್ಶನದಲ್ಲಿ ಗಮನ ಸೆಳೆಯುತ್ತಿವೆ.

ನಂಜನಗೂಡು ತಾಲೂಕು ಸುತ್ತೂರು ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಒಂದು ಎಕರೆ ಪ್ರದೇಶ ಭೂಮಿಯಲ್ಲಿ ಸುಮಾರು ನೂರ ಎರಡು ವಿವಿಧ ಬೆಳೆಗಳ ಪ್ರದರ್ಶನಕ್ಕೆ ಬೆಳೆದಿದ್ದು, ಅದರಲ್ಲೂ ವರ್ಷಪೂರ್ತಿ ಯಾವ ಕಾಲದಲ್ಲಾದರೂ ಬೆಳೆಯುವಂತ ರೋಗರಹಿತ ರಾಗಿ, ಜೋಳ, ಭತ, ಸಿರಿ ಧಾನ್ಯಗಳು, ವಿವಿಧ ತರಕಾರಿಗಳನ್ನು ಬೆಳೆದಿದ್ದು, ಈ ಬೆಳೆಗಳ ಬಗ್ಗೆ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಶಾಮ್ ರಾಜ್ ಅವರು ಮಾಹಿತಿ ನೀಡಿದ್ದಾರೆ.

ಇಂತಹ ಬೆಳೆಗಳಿಂದ ಮಣ್ಣಿನ ಫಲವತ್ತತೆಯೂ ಹೆಚ್ಚಾಗಲಿದ್ದು, ರೋಗ ರಹಿತ ರಾಗಿಯಂತಹ ಬೆಳೆಗಳನ್ನು ಎಕರೆಗೆ 10ರಿಂದ 12 ಕ್ವಿಂಟಾಲ್ ಬೆಳೆಯಬಹುದಾಗಿದೆ. 100 ರಿಂದ 102 ದಿನದೊಳಗೆ ಕಟಾವು ಸಹ ಮಾಡಬಹುದು. ಅಲ್ಲದೇ ಎಲ್ಲಾ ಸಮಯದಲ್ಲೂ ಅಂದರೆ ಹಿಂಗಾರು, ಮುಂಗಾರು, ಬೇಸಿಗೆ ಕಾಲ, ಚಳಿಗಾಲದಲ್ಲಿಯೂ ಈ ಆರೋಗ್ಯಕರ ಬೆಳೆಗಳನ್ನು ಬೆಳೆಯಬಹುದು.ಮತ್ತು ಉತ್ತಮ ಮೇವಿಗೂ ಇದು ಅನುಕೂಲಕರ ಎಂದರಲ್ಲದೇ, ಈ ಬೆಳೆಗಳಿಗೆ ಬೆಂಕಿರೋಗ, ಕುತ್ತಿಗೆ ರೋಗದಂತಹ ಸಮಸ್ಯೆಗಳು ಕಾಣಿಸಿಕೊಳ್ಳುವುದಿಲ್ಲ. ಮತ್ತು ತೆನೆ ತಿಗಣೆಯಂತಹ ಸಮಸ್ಯೆಯೂ ಉದ್ಭವಿಸಿವುದಿಲ್ಲ ಎಂದರು.

ಎಲ್ಲಕ್ಕಿಂತ ಮಿಗಿಲಾಗಿ ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆಯಬಹುದಾದಂತಹ ಬೆಳೆಗಳು ಇದಾಗಿದ್ದು, ಉತ್ತಮ ಆರೋಗ್ಯಕ್ಕೂ ಸಹಕಾರಿಯಾಗಲಿದೆ.ರೈತರು ಈ ರೀತಿಯ ಅಂತರ್ ಬೆಳೆಗಳನ್ನು ಬೆಳೆಯಲು ಆಸಕ್ತಿ ತೋರುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕೆಂಬುದು ನಮ್ಮ ಸಲಹೆ ಎಂದು ಅಭಿಪ್ರಾಯವನ್ನು ಹಂಚಿಕೊಂಡರು.

ಇನ್ನು ಹೆಚ್ಚಿನ ಮಾಹಿತಿಗಾಗಿ 9986269393 ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಚಿತ್ರ, ಮಾಹಿತಿ: ಸುತ್ತೂರು ನಂಜುಂಡನಾಯಕ

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

3 hours ago

ಕೊಡಗು ಜಿಲ್ಲೆಗೆ ಈ ಬಾರಿಯೂ ದೊರಕದ ಸಚಿವ ಸ್ಥಾನ

ನವೀನ್ ಡಿಸೋಜ ಶಾಸಕ ಎ.ಎಸ್.ಪೊನ್ನಣ್ಣಗೆ ಒಲಿದ ಡೆಪ್ಯೂಟಿ ಸ್ಪೀಕರ್ ಸ್ಥಾನ; ಕೊಡಗಿನ ಜನರ ಈ ಬಾರಿಯ ನಿರೀಕ್ಷೆಯೂ ಹುಸಿ ಮಡಿಕೇರಿ:…

3 hours ago

ಸಕ್ಕರೆ ನಾಡಿಗೆ ‘ಅಧಿಕಾರ’ದ ಸಿಹಿ, ಸಂಭ್ರಮ

ಬಿ.ಟಿ.ಮೋಹನ್ ಕುಮಾರ್ ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿಗೆ ಸಚಿವ ಸ್ಥಾನ  ಮಂಡ್ಯ: ಡಿ.ಕೆ.ಶಿವಕುಮಾರ್ ನೇತೃತ್ವದ  ಸರ್ಕಾರದಲ್ಲಿ ಈ ಹಿಂದಿನ ಸಂಪುಟದಲ್ಲಿ ಸಚಿವರಾಗಿದ್ದ ಎನ್‌.ಚಲುವರಾಯಸ್ವಾಮಿ…

3 hours ago

ಡಿಕೆಶಿ ಸಂಪುಟ: ಕುಗ್ಗಿದ ಮೈಸೂರು ಜಿಲ್ಲೆ ಪ್ರಾಬಲ್ಯ

ಕೆ.ಬಿ. ರಮೇಶನಾಯಕ ಸಿದ್ದರಾಮಯ್ಯ ಸಂಪುಟದಲ್ಲಿ ೮ ವರ್ಷವೂ ಸಚಿವರಾಗಿದ್ದ ಡಾ.ಎಚ್‌ಸಿಎಂ ಹೊರಕ್ಕೆ ಪಿರಿಯಾಪಟ್ಟಣ ಕ್ಷೇತ್ರದ ಕೆ. ವೆಂಕಟೇಶ್‌ಗೂ ಕೊಕ್ ಮೈಸೂರು:…

3 hours ago

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

1 day ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

1 day ago