ಮೈಸೂರು: ಜ.18ರಂದು ಮೈಸೂರು ವಿಶ್ವವಿದ್ಯಾನಿಲಯದ 105ನೇ ಘಟಿಕೋತ್ಸವ ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ನ ಸಿಂಡಿಕೇಟ್ ಹಾಲ್ನಲ್ಲಿ ನಡೆಯಲಿದೆ. ಅಂದಿನ ದಿನ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ ಎಂದು ಮೈಸೂರು ವಿವಿಯ ಕುಲಪತಿ ಡಾ. ಲೋಕನಾಥ್ ತಿಳಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಬಾರಿ ಮಾಜಿ ಸಂಸದ ಡಾ. ಎ.ಸಿ. ಷಣ್ಮುಗಂ, ಸಾರಿಗೆ ಮತ್ತು ಸಂಚಾರ ಇಂಜಿನಿಯರ್ ಉಪಾದ್ಯಕ್ಷ ಡಾ. ಬಾಬು ಕೆ ವಿರೇಗೌಡ, ಗ್ಲೋಬಲ್ ಸಿಇಒ ಮತ್ತು ಮ್ಯಾನೇಜರ್ ಶಾಹೀನ್ ಮಜೀದ್ರಿಗೆ ಗೌರಾ ಡಾಕ್ಟರೇಟ್ ಪ್ರಧಾನ ಮಾಡಲಾಗುವುದು ಎಂದು ತಿಳಿಸಿದರು.
ಕಳೆದ ಬಾರಿ ಸುಧಾಮೂರ್ತಿ ಅವರಿಗೆ ಗೌರವ ಡಾಕ್ರೇಟ್ ನೀಡಲು ತೀರ್ಮಾನಿಸಿತ್ತು. ಆದರೆ ಅವರು ಸ್ವೀಕರಿಸಿರಲಿಲ್ಲ. ಈ ಬಾರಿಯ ಘಟಿಕೋತ್ಸವದಲ್ಲಿ ಅವರು ಗೌರವ ಡಾಕ್ಟರೇಟ್ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿಸಿದರು.
ಈ ಬಾರಿಯ ವಾರ್ಷಿಕ ಘಟಿಕೋತ್ಸವದಲ್ಲಿ 31,689 ವಿದ್ಯಾರ್ಥಿಗಳು ಪದವಿಗಳನ್ನು ಪಡೆದುಕೊಳ್ಳಲಿದ್ದಾರೆ. 140 ಪುರುಷರು, 164 ಮಹಿಳಾ ವಿದ್ಯಾರ್ಥಿಗಳಿಗೆ ಪಿಎಚ್ಡಿ ಪ್ರಧಾನ ಮಾಡಲಾಗುತ್ತದೆ. 6300 ಅಭ್ಯರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರಧಾನ ಮಾಡಲಾಗುತ್ತದೆ. 413 ಚಿನ್ನದ ಪದಕಗಳು, 208 ನಗದು ಬಹುಮಾನವನ್ನು 216 ವಿದ್ಯಾರ್ಥಿಗಳು ಪಡೆದುಕೊಳ್ಳುತ್ತಿದ್ದಾರೆ. 25,085 ವಿದ್ಯಾರ್ಥಿಗಳು ಸ್ನಾತಕ ಪದವಿಯನ್ನು ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…