ಮೈಸೂರು: ಜ.18ರಂದು ಮೈಸೂರು ವಿಶ್ವವಿದ್ಯಾನಿಲಯದ 105ನೇ ಘಟಿಕೋತ್ಸವ ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ನ ಸಿಂಡಿಕೇಟ್ ಹಾಲ್ನಲ್ಲಿ ನಡೆಯಲಿದೆ. ಅಂದಿನ ದಿನ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ ಎಂದು ಮೈಸೂರು ವಿವಿಯ ಕುಲಪತಿ ಡಾ. ಲೋಕನಾಥ್ ತಿಳಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಬಾರಿ ಮಾಜಿ ಸಂಸದ ಡಾ. ಎ.ಸಿ. ಷಣ್ಮುಗಂ, ಸಾರಿಗೆ ಮತ್ತು ಸಂಚಾರ ಇಂಜಿನಿಯರ್ ಉಪಾದ್ಯಕ್ಷ ಡಾ. ಬಾಬು ಕೆ ವಿರೇಗೌಡ, ಗ್ಲೋಬಲ್ ಸಿಇಒ ಮತ್ತು ಮ್ಯಾನೇಜರ್ ಶಾಹೀನ್ ಮಜೀದ್ರಿಗೆ ಗೌರಾ ಡಾಕ್ಟರೇಟ್ ಪ್ರಧಾನ ಮಾಡಲಾಗುವುದು ಎಂದು ತಿಳಿಸಿದರು.
ಕಳೆದ ಬಾರಿ ಸುಧಾಮೂರ್ತಿ ಅವರಿಗೆ ಗೌರವ ಡಾಕ್ರೇಟ್ ನೀಡಲು ತೀರ್ಮಾನಿಸಿತ್ತು. ಆದರೆ ಅವರು ಸ್ವೀಕರಿಸಿರಲಿಲ್ಲ. ಈ ಬಾರಿಯ ಘಟಿಕೋತ್ಸವದಲ್ಲಿ ಅವರು ಗೌರವ ಡಾಕ್ಟರೇಟ್ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿಸಿದರು.
ಈ ಬಾರಿಯ ವಾರ್ಷಿಕ ಘಟಿಕೋತ್ಸವದಲ್ಲಿ 31,689 ವಿದ್ಯಾರ್ಥಿಗಳು ಪದವಿಗಳನ್ನು ಪಡೆದುಕೊಳ್ಳಲಿದ್ದಾರೆ. 140 ಪುರುಷರು, 164 ಮಹಿಳಾ ವಿದ್ಯಾರ್ಥಿಗಳಿಗೆ ಪಿಎಚ್ಡಿ ಪ್ರಧಾನ ಮಾಡಲಾಗುತ್ತದೆ. 6300 ಅಭ್ಯರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರಧಾನ ಮಾಡಲಾಗುತ್ತದೆ. 413 ಚಿನ್ನದ ಪದಕಗಳು, 208 ನಗದು ಬಹುಮಾನವನ್ನು 216 ವಿದ್ಯಾರ್ಥಿಗಳು ಪಡೆದುಕೊಳ್ಳುತ್ತಿದ್ದಾರೆ. 25,085 ವಿದ್ಯಾರ್ಥಿಗಳು ಸ್ನಾತಕ ಪದವಿಯನ್ನು ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…