ಮೈಸೂರು: ಜ.18ರಂದು ಮೈಸೂರು ವಿಶ್ವವಿದ್ಯಾನಿಲಯದ 105ನೇ ಘಟಿಕೋತ್ಸವ ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ನ ಸಿಂಡಿಕೇಟ್ ಹಾಲ್ನಲ್ಲಿ ನಡೆಯಲಿದೆ. ಅಂದಿನ ದಿನ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ ಎಂದು ಮೈಸೂರು ವಿವಿಯ ಕುಲಪತಿ ಡಾ. ಲೋಕನಾಥ್ ತಿಳಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಬಾರಿ ಮಾಜಿ ಸಂಸದ ಡಾ. ಎ.ಸಿ. ಷಣ್ಮುಗಂ, ಸಾರಿಗೆ ಮತ್ತು ಸಂಚಾರ ಇಂಜಿನಿಯರ್ ಉಪಾದ್ಯಕ್ಷ ಡಾ. ಬಾಬು ಕೆ ವಿರೇಗೌಡ, ಗ್ಲೋಬಲ್ ಸಿಇಒ ಮತ್ತು ಮ್ಯಾನೇಜರ್ ಶಾಹೀನ್ ಮಜೀದ್ರಿಗೆ ಗೌರಾ ಡಾಕ್ಟರೇಟ್ ಪ್ರಧಾನ ಮಾಡಲಾಗುವುದು ಎಂದು ತಿಳಿಸಿದರು.
ಕಳೆದ ಬಾರಿ ಸುಧಾಮೂರ್ತಿ ಅವರಿಗೆ ಗೌರವ ಡಾಕ್ರೇಟ್ ನೀಡಲು ತೀರ್ಮಾನಿಸಿತ್ತು. ಆದರೆ ಅವರು ಸ್ವೀಕರಿಸಿರಲಿಲ್ಲ. ಈ ಬಾರಿಯ ಘಟಿಕೋತ್ಸವದಲ್ಲಿ ಅವರು ಗೌರವ ಡಾಕ್ಟರೇಟ್ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿಸಿದರು.
ಈ ಬಾರಿಯ ವಾರ್ಷಿಕ ಘಟಿಕೋತ್ಸವದಲ್ಲಿ 31,689 ವಿದ್ಯಾರ್ಥಿಗಳು ಪದವಿಗಳನ್ನು ಪಡೆದುಕೊಳ್ಳಲಿದ್ದಾರೆ. 140 ಪುರುಷರು, 164 ಮಹಿಳಾ ವಿದ್ಯಾರ್ಥಿಗಳಿಗೆ ಪಿಎಚ್ಡಿ ಪ್ರಧಾನ ಮಾಡಲಾಗುತ್ತದೆ. 6300 ಅಭ್ಯರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರಧಾನ ಮಾಡಲಾಗುತ್ತದೆ. 413 ಚಿನ್ನದ ಪದಕಗಳು, 208 ನಗದು ಬಹುಮಾನವನ್ನು 216 ವಿದ್ಯಾರ್ಥಿಗಳು ಪಡೆದುಕೊಳ್ಳುತ್ತಿದ್ದಾರೆ. 25,085 ವಿದ್ಯಾರ್ಥಿಗಳು ಸ್ನಾತಕ ಪದವಿಯನ್ನು ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…