ಮೈಸೂರು

ಜ.18 ರಂದು ಮೈಸೂರು ವಿವಿ 105ನೇ ಘಟಿಕೋತ್ಸವ: ಮೂವರಿಗೆ ಗೌರವ ಡಾಕ್ಟರೇಟ್‌

ಮೈಸೂರು: ಜ.18ರಂದು ಮೈಸೂರು ವಿಶ್ವವಿದ್ಯಾನಿಲಯದ 105ನೇ ಘಟಿಕೋತ್ಸವ ವಿಶ್ವವಿದ್ಯಾನಿಲಯದ ಕ್ರಾಫರ್ಡ್‌ ಹಾಲ್‌ನ ಸಿಂಡಿಕೇಟ್‌ ಹಾಲ್‌ನಲ್ಲಿ ನಡೆಯಲಿದೆ. ಅಂದಿನ ದಿನ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್‌ ನೀಡಲಾಗುತ್ತದೆ ಎಂದು ಮೈಸೂರು ವಿವಿಯ ಕುಲಪತಿ ಡಾ. ಲೋಕನಾಥ್‌ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಬಾರಿ ಮಾಜಿ ಸಂಸದ ಡಾ. ಎ.ಸಿ. ಷಣ್ಮುಗಂ, ಸಾರಿಗೆ ಮತ್ತು ಸಂಚಾರ ಇಂಜಿನಿಯರ್‌ ಉಪಾದ್ಯಕ್ಷ ಡಾ. ಬಾಬು ಕೆ ವಿರೇಗೌಡ, ಗ್ಲೋಬಲ್‌ ಸಿಇಒ ಮತ್ತು ಮ್ಯಾನೇಜರ್‌ ಶಾಹೀನ್‌ ಮಜೀದ್‌ರಿಗೆ ಗೌರಾ ಡಾಕ್ಟರೇಟ್‌ ಪ್ರಧಾನ ಮಾಡಲಾಗುವುದು ಎಂದು ತಿಳಿಸಿದರು.

ಕಳೆದ ಬಾರಿ ಸುಧಾಮೂರ್ತಿ ಅವರಿಗೆ ಗೌರವ ಡಾಕ್ರೇಟ್‌ ನೀಡಲು ತೀರ್ಮಾನಿಸಿತ್ತು. ಆದರೆ ಅವರು ಸ್ವೀಕರಿಸಿರಲಿಲ್ಲ. ಈ ಬಾರಿಯ ಘಟಿಕೋತ್ಸವದಲ್ಲಿ ಅವರು ಗೌರವ ಡಾಕ್ಟರೇಟ್‌ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿಸಿದರು.

ಈ ಬಾರಿಯ ವಾರ್ಷಿಕ ಘಟಿಕೋತ್ಸವದಲ್ಲಿ 31,689 ವಿದ್ಯಾರ್ಥಿಗಳು ಪದವಿಗಳನ್ನು ಪಡೆದುಕೊಳ್ಳಲಿದ್ದಾರೆ. 140 ಪುರುಷರು, 164 ಮಹಿಳಾ ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪ್ರಧಾನ ಮಾಡಲಾಗುತ್ತದೆ. 6300 ಅಭ್ಯರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರಧಾನ ಮಾಡಲಾಗುತ್ತದೆ. 413 ಚಿನ್ನದ ಪದಕಗಳು, 208 ನಗದು ಬಹುಮಾನವನ್ನು 216 ವಿದ್ಯಾರ್ಥಿಗಳು ಪಡೆದುಕೊಳ್ಳುತ್ತಿದ್ದಾರೆ. 25,085 ವಿದ್ಯಾರ್ಥಿಗಳು ಸ್ನಾತಕ ಪದವಿಯನ್ನು ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ಪುರಭವನ?

ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…

52 mins ago

ಹಿಜಾಬ್‌ ವಿವಾದ : ಹೊಸ ಆದೇಶ ಸಕಾರಾತ್ಮಕ ಬೆಳವಣಿಗೆಗೆ ಸಹಾಯ

ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ಮುಟ್ಟಿದ ನನ್ನೂರಿನ ಮನಸುಗಳು…

• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಇಲ್ಲಿದೆ ಗಾಂಧಿ ಆತ್ಮಕತೆಯ ಆಯ್ದ ತುಣುಕು

ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

6 hours ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

23 hours ago