ದೊಡ್ಡ ಕವಲಂದೆ : 112 ತುರ್ತು ವಾಹನ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ನಂಜನಗೂಡು ತಾಲ್ಲೂಕಿನ ಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನದಗುಡಿ ಹುಂಡಿ ಗ್ರಾಮದಲ್ಲಿ ನಡೆದಿದೆ.
ಚಿನ್ನದಗುಡಿಹುಂಡಿ ಗ್ರಾಮದ ಸ್ವಾಮಿ ಎಂಬವರು ಗ್ರಾಮದಲ್ಲಿ ಗಲಾಟೆ ನಡೆಯುತ್ತಿರುವ ಬಗ್ಗೆ 112 ಕಂಟ್ರೋಲ್ ನಂಬರ್ಗೆ ಕರೆ ಮಾಡಿ, ದೂರು ಸಲ್ಲಿಸಿದ್ದರು. ಕೂಡಲೇ ಕವಲಂದೆ ಮತ್ತು ಬಿಳಿಗೆರೆ ಪೊಲೀಸ್ ಠಾಣೆಯ 112 ತುರ್ತು ವಾಹನದ ಪೊಲೀಸ್ ಸಿಬ್ಬಂದಿ ಗ್ರಾಮಕ್ಕೆ ತೆರಳಿದ್ದರು.
ಪೊಲೀಸರು ಮಧ್ಯೆ ಪ್ರವೇಶಿಸಿ ಜಗಳವನ್ನು ಬಿಡಿಸುತ್ತಿದ್ದ ವೇಳೆ ರವಿ ಮತ್ತು ಕಿಶೋರ್ ಎಂಬವರು ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ. ಸಮವಸ್ತ್ರದಲ್ಲಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡು, ಹಲ್ಲೆ ನಡೆಸಿದ ರವಿ ಮತ್ತು ಕಿಶೋರ್ ಅವರನ್ನು ಪೊಲೀಸರು ಬಂಽಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಸಂಬಂಧ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ನಾರ್ಕೋಟಿಕ್ಸ್ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ…
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶತ್ರು ರಾಷ್ಟ್ರಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಮೇರಿಕಾದ ಬಳಿ ಮುಗಿಯದ ಶಸ್ತ್ರಾಸ್ತ್ರಗಳ ಬೃಹತ್…
ತವರಿನಲ್ಲೇ ಕಣ್ಣೀರಿಡುತ್ತಿರುವ ಜೀವನದಿ; ಸ್ವಚ್ಛತೆಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕೋಟ್ಯಾಂತರ ಜನರ ಜೀವನಾಡಿಯಾಗಿರುವ…
ಬೆಂಗಳೂರು: ಇಂದು ನಭೋ ಮಂಡಲ ಚಂದ್ರಗ್ರಹಣದ ಕೌತುಕಕ್ಕೆ ಸಾಕ್ಷಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ…