ಮೈಸೂರು: ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಯವರ ೧೧೭ನೇ ಜನ್ಮ ದಿನಾಚರಣೆಯನ್ನು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಅವರ ‘ಜನನಿ‘ ಕಚೇರಿಯಲ್ಲಿ ಆಚರಿಸಲಾಯಿತು.
ಈ ವೇಳೆ ಮಾತನಾಡಿದ ಎಂ.ಕೆ.ಸೋಮಶೇಖರ್ ಅವರು, ಸಿದ್ದಗಂಗಾ ಶ್ರೀಗಳಂತಹ ಮಹನೀಯರನ್ನು ನೆನೆಯುವುದೇ ಒಂದು ಪುಣ್ಯದ ಕೆಲಸ.
ಶ್ರೀಗಳು ತಮ್ಮ ಜೀವನದುದ್ದಕ್ಕೂ ಸಾಮಾಜಿಕ ಸೇವೆಯ ಮೂಲಕವೇ ಮನೆ ಮಾತಾಗಿದ್ದರು. ಶಿಕ್ಷಣ, ಕಾಯಕ, ದಾಸೋಹದ ತತ್ವವನ್ನು ಅನುಸರಿಸುತ್ತಾ ತಮ್ಮ ಉದಾತ್ತ ಚಿಂತನೆಗಳನ್ನು, ಸಾಂಸ್ಕೃತಿಕ ಮತ್ತು ಧಾರ್ಮಿಕ ಕೃಷಿಯನ್ನು ಈ ನಾಡಿಗೆ ಅರ್ಪಿಸಿದ್ದಾರೆ ಎಂದು ಬಣ್ಣಿಸಿದರು.
ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್ ಮಾತನಾಡಿದರು. ಕಾಂಗ್ರೆಸ್ ಮುಖಂಡರಾದ ರವಿಶಂಕರ್, ವಿಜಯಕುಮಾರ್, ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಘಟಕದ ವಿನಯಕುಮಾರ್, ಶಿವಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ರಾಕೇಶ್, ಮುಖಂಡರಾದ ಗೃಹಶೋಭೆ ಕೃಷ್ಣ, ಕೇಬಲ್ ಶೇಖರ್, ಸುಂದರ್, ಸುನಿಲ್, ಮಹೇಶ್, ಮನಸು, ನಾಗ, ಮಹಾದೇವ, ನದೀಂ ಮತ್ತಿತರರು ಹಾಜರಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…