ಮೈಸೂರು : ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದಲ್ಲಿ12 ಸಾವಿರ ಮಂದಿ ಕಣದಲ್ಲಿರುವ ಯಾವ ಅಭ್ಯರ್ಥಿ ಬಗ್ಗೆಯೂ ಆಸಕ್ತಿ, ವಿಶ್ವಾಸ ಇಲ್ಲದೆ ನೋಟಾ ವೋಟು ಚಲಾವಣೆ ಮಾಡಿದ್ದಾರೆ.
ನೋಟಾ ಯಾವುದೇ ಕ್ಷೇತ್ರಗಳ ಫಲಿತಾಂಶದ ಮೇಲೆ ಗಂಭೀರ ಪರಿಣಾಮ ಬೀರದೆ ಇದ್ದರೂ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಸೋಲು-ಗೆಲುವಿನ ಅಂತರವನ್ನು ಹೆಚ್ಚು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಪ್ರತಿಯೊಬ್ಬರೂ ಮತದಾನ ಮಾಡಬೇಕು, ಮತ ಪ್ರಮಾಣ ಹೆಚ್ಚಿಸಬೇಕೆಂಬ ಉದ್ದೇಶದಿಂದ ಚುನಾವಣಾ ಆಯೋಗ ಪರಿಚಯಿಸಿದ ನೋಟಾ ಇತ್ತೀಚಿನ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಸಾಕಷ್ಟು ಮತದಾರರು ಇದನ್ನು ಬಳಕೆ ಮಾಡಲು ಪ್ರಾರಂಭಿಸಿದ್ದಾರೆ. ಹಾಗೆ ನೋಡಿದರೆ 2018ರ ರಾಜ್ಯ ವಿಧಾನಸಭಾ ಚುನಾವನೆಯಲ್ಲಿ 16 ಸಾವಿರ ಮಂದಿ ನೋಟಾ ಪ್ರಯೋಗ ಮಾಡಿದ್ದರು. ಆದರೆ, ಈ ಬಾರಿ ಆ ಸಂಖ್ಯೆ ಕ್ಷೀಣಿಸಿದ್ದು, ಮೈಸೂರು ಜಿಲ್ಲೆಯಲ್ಲಿ 12,575 ಮಂದಿ ನೋಟಾ ಚಲಾವಣೆ ಮಾಡಿದ್ದಾರೆ.
ಚಾಮುಂಡೇಶ್ವರಿಯಲ್ಲಿ ಹೆಚ್ಚು : ಜೆಡಿಎಸ್ನ ಜಿ.ಟಿ.ದೇವೇಗೌಡ, ಕಾಂಗ್ರೆಸ್ನ ಮಾವಿನಹಳ್ಳಿ ಸಿದ್ದೇಗೌಡ ಹಾಗೂ ಬಿಜೆಪಿಯ ಕವೀಶ್ ಗೌಡ ಸ್ಪರ್ಧಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅತಿ ಹೆಚ್ಚು 2,220 ಮಂದಿ ನೋಟಾಗೆ ಮತ ಚಲಾಯಿಸಿದ್ದಾರೆ. ಅದನ್ನು ಹೊರತುಪಡಿಸಿದರೆ ದರ್ಶನ್ ಧ್ರುವನಾರಾಯಣ ಹಾಗೂ ಹರ್ಷವರ್ಧನ್ ಸ್ಪರ್ಧಿಸಿದ್ದ ನಂಜನಗೂಡು ಮೀಸಲು ಕ್ಷೇತ್ರದಲ್ಲಿ1452 ಮತದಾರರು ನೋಟಾ ಆಯ್ಕೆ ಮಾಡಿದ್ದಾರೆ. ಇಲ್ಲಿ ಸ್ಪರ್ಧಿಸಿದ್ದ 10 ಸ್ಪರ್ಧಿಗಳ ವೋಟು ಸಾವಿರಕ್ಕಿಂತ ಕಡಿಮೆ ಇದೆ. ಅಂದರೆ ಅಭ್ಯರ್ಥಿಗಳಿಗಿಂತ ನೋಟಾ ವೋಟೆ ಹೆಚ್ಚಾಗಿದೆ.
ಉಳಿದಂತೆ ತಿ.ನರಸೀಪುರದಲ್ಲಿ 1,335, ಕೃಷ್ಣರಾಜದಲ್ಲಿ1,306, ನರಸಿಂಹರಾಜದಲ್ಲಿ1,209, ಎಚ್.ಡಿ.ಕೋಟೆಯಲ್ಲಿ 1,184, ಚಾಮರಾಜದಲ್ಲಿ1,181, ಹುಣಸೂರಿನಲ್ಲಿ894, ವರುಣ ಕ್ಷೇತ್ರದಲ್ಲಿ634, ಪಿರಿಯಾಪಟ್ಟಣದಲ್ಲಿ 621 ಹಾಗೂ ಕೆ.ಆರ್.ನಗರ ಕ್ಷೇತ್ರದಲ್ಲಿ 539 ಮತದಾರರು ಯಾವುದೇ ಅಭ್ಯರ್ಥಿಗಳಿಗೆ ಮಣೆ ಹಾಕದೆ ನೋಟಾ ಬಟನ್ ಒತ್ತುವ ಮೂಲಕ ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.
ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್ಮಹಲ್ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…
ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…
ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…
ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…