ಮೈಸೂರು : ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದಲ್ಲಿ12 ಸಾವಿರ ಮಂದಿ ಕಣದಲ್ಲಿರುವ ಯಾವ ಅಭ್ಯರ್ಥಿ ಬಗ್ಗೆಯೂ ಆಸಕ್ತಿ, ವಿಶ್ವಾಸ ಇಲ್ಲದೆ ನೋಟಾ ವೋಟು ಚಲಾವಣೆ ಮಾಡಿದ್ದಾರೆ.
ನೋಟಾ ಯಾವುದೇ ಕ್ಷೇತ್ರಗಳ ಫಲಿತಾಂಶದ ಮೇಲೆ ಗಂಭೀರ ಪರಿಣಾಮ ಬೀರದೆ ಇದ್ದರೂ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಸೋಲು-ಗೆಲುವಿನ ಅಂತರವನ್ನು ಹೆಚ್ಚು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಪ್ರತಿಯೊಬ್ಬರೂ ಮತದಾನ ಮಾಡಬೇಕು, ಮತ ಪ್ರಮಾಣ ಹೆಚ್ಚಿಸಬೇಕೆಂಬ ಉದ್ದೇಶದಿಂದ ಚುನಾವಣಾ ಆಯೋಗ ಪರಿಚಯಿಸಿದ ನೋಟಾ ಇತ್ತೀಚಿನ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಸಾಕಷ್ಟು ಮತದಾರರು ಇದನ್ನು ಬಳಕೆ ಮಾಡಲು ಪ್ರಾರಂಭಿಸಿದ್ದಾರೆ. ಹಾಗೆ ನೋಡಿದರೆ 2018ರ ರಾಜ್ಯ ವಿಧಾನಸಭಾ ಚುನಾವನೆಯಲ್ಲಿ 16 ಸಾವಿರ ಮಂದಿ ನೋಟಾ ಪ್ರಯೋಗ ಮಾಡಿದ್ದರು. ಆದರೆ, ಈ ಬಾರಿ ಆ ಸಂಖ್ಯೆ ಕ್ಷೀಣಿಸಿದ್ದು, ಮೈಸೂರು ಜಿಲ್ಲೆಯಲ್ಲಿ 12,575 ಮಂದಿ ನೋಟಾ ಚಲಾವಣೆ ಮಾಡಿದ್ದಾರೆ.
ಚಾಮುಂಡೇಶ್ವರಿಯಲ್ಲಿ ಹೆಚ್ಚು : ಜೆಡಿಎಸ್ನ ಜಿ.ಟಿ.ದೇವೇಗೌಡ, ಕಾಂಗ್ರೆಸ್ನ ಮಾವಿನಹಳ್ಳಿ ಸಿದ್ದೇಗೌಡ ಹಾಗೂ ಬಿಜೆಪಿಯ ಕವೀಶ್ ಗೌಡ ಸ್ಪರ್ಧಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅತಿ ಹೆಚ್ಚು 2,220 ಮಂದಿ ನೋಟಾಗೆ ಮತ ಚಲಾಯಿಸಿದ್ದಾರೆ. ಅದನ್ನು ಹೊರತುಪಡಿಸಿದರೆ ದರ್ಶನ್ ಧ್ರುವನಾರಾಯಣ ಹಾಗೂ ಹರ್ಷವರ್ಧನ್ ಸ್ಪರ್ಧಿಸಿದ್ದ ನಂಜನಗೂಡು ಮೀಸಲು ಕ್ಷೇತ್ರದಲ್ಲಿ1452 ಮತದಾರರು ನೋಟಾ ಆಯ್ಕೆ ಮಾಡಿದ್ದಾರೆ. ಇಲ್ಲಿ ಸ್ಪರ್ಧಿಸಿದ್ದ 10 ಸ್ಪರ್ಧಿಗಳ ವೋಟು ಸಾವಿರಕ್ಕಿಂತ ಕಡಿಮೆ ಇದೆ. ಅಂದರೆ ಅಭ್ಯರ್ಥಿಗಳಿಗಿಂತ ನೋಟಾ ವೋಟೆ ಹೆಚ್ಚಾಗಿದೆ.
ಉಳಿದಂತೆ ತಿ.ನರಸೀಪುರದಲ್ಲಿ 1,335, ಕೃಷ್ಣರಾಜದಲ್ಲಿ1,306, ನರಸಿಂಹರಾಜದಲ್ಲಿ1,209, ಎಚ್.ಡಿ.ಕೋಟೆಯಲ್ಲಿ 1,184, ಚಾಮರಾಜದಲ್ಲಿ1,181, ಹುಣಸೂರಿನಲ್ಲಿ894, ವರುಣ ಕ್ಷೇತ್ರದಲ್ಲಿ634, ಪಿರಿಯಾಪಟ್ಟಣದಲ್ಲಿ 621 ಹಾಗೂ ಕೆ.ಆರ್.ನಗರ ಕ್ಷೇತ್ರದಲ್ಲಿ 539 ಮತದಾರರು ಯಾವುದೇ ಅಭ್ಯರ್ಥಿಗಳಿಗೆ ಮಣೆ ಹಾಕದೆ ನೋಟಾ ಬಟನ್ ಒತ್ತುವ ಮೂಲಕ ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…