ಮೈಸೂರು

ಮೈಸೂರು ಜಿಲ್ಲೆಯಲ್ಲಿ 12 ಸಾವಿರ ನೋಟಾ ಚಲಾವಣೆ : ಚಾಮುಂಡೇಶ್ವರಿಯಲ್ಲೇ ಹೆಚ್ಚು

ಮೈಸೂರು : ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದಲ್ಲಿ12 ಸಾವಿರ ಮಂದಿ ಕಣದಲ್ಲಿರುವ ಯಾವ ಅಭ್ಯರ್ಥಿ ಬಗ್ಗೆಯೂ ಆಸಕ್ತಿ, ವಿಶ್ವಾಸ ಇಲ್ಲದೆ ನೋಟಾ ವೋಟು ಚಲಾವಣೆ ಮಾಡಿದ್ದಾರೆ.

ನೋಟಾ ಯಾವುದೇ ಕ್ಷೇತ್ರಗಳ ಫಲಿತಾಂಶದ ಮೇಲೆ ಗಂಭೀರ ಪರಿಣಾಮ ಬೀರದೆ ಇದ್ದರೂ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಸೋಲು-ಗೆಲುವಿನ ಅಂತರವನ್ನು ಹೆಚ್ಚು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಪ್ರತಿಯೊಬ್ಬರೂ ಮತದಾನ ಮಾಡಬೇಕು, ಮತ ಪ್ರಮಾಣ ಹೆಚ್ಚಿಸಬೇಕೆಂಬ ಉದ್ದೇಶದಿಂದ ಚುನಾವಣಾ ಆಯೋಗ ಪರಿಚಯಿಸಿದ ನೋಟಾ ಇತ್ತೀಚಿನ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಸಾಕಷ್ಟು ಮತದಾರರು ಇದನ್ನು ಬಳಕೆ ಮಾಡಲು ಪ್ರಾರಂಭಿಸಿದ್ದಾರೆ. ಹಾಗೆ ನೋಡಿದರೆ 2018ರ ರಾಜ್ಯ ವಿಧಾನಸಭಾ ಚುನಾವನೆಯಲ್ಲಿ 16 ಸಾವಿರ ಮಂದಿ ನೋಟಾ ಪ್ರಯೋಗ ಮಾಡಿದ್ದರು. ಆದರೆ, ಈ ಬಾರಿ ಆ ಸಂಖ್ಯೆ ಕ್ಷೀಣಿಸಿದ್ದು, ಮೈಸೂರು ಜಿಲ್ಲೆಯಲ್ಲಿ 12,575 ಮಂದಿ ನೋಟಾ ಚಲಾವಣೆ ಮಾಡಿದ್ದಾರೆ.

ಚಾಮುಂಡೇಶ್ವರಿಯಲ್ಲಿ ಹೆಚ್ಚು : ಜೆಡಿಎಸ್‌ನ ಜಿ.ಟಿ.ದೇವೇಗೌಡ, ಕಾಂಗ್ರೆಸ್‌ನ ಮಾವಿನಹಳ್ಳಿ ಸಿದ್ದೇಗೌಡ ಹಾಗೂ ಬಿಜೆಪಿಯ ಕವೀಶ್‌ ಗೌಡ ಸ್ಪರ್ಧಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅತಿ ಹೆಚ್ಚು 2,220 ಮಂದಿ ನೋಟಾಗೆ ಮತ ಚಲಾಯಿಸಿದ್ದಾರೆ. ಅದನ್ನು ಹೊರತುಪಡಿಸಿದರೆ ದರ್ಶನ್‌ ಧ್ರುವನಾರಾಯಣ ಹಾಗೂ ಹರ್ಷವರ್ಧನ್‌ ಸ್ಪರ್ಧಿಸಿದ್ದ ನಂಜನಗೂಡು ಮೀಸಲು ಕ್ಷೇತ್ರದಲ್ಲಿ1452 ಮತದಾರರು ನೋಟಾ ಆಯ್ಕೆ ಮಾಡಿದ್ದಾರೆ. ಇಲ್ಲಿ ಸ್ಪರ್ಧಿಸಿದ್ದ 10 ಸ್ಪರ್ಧಿಗಳ ವೋಟು ಸಾವಿರಕ್ಕಿಂತ ಕಡಿಮೆ ಇದೆ. ಅಂದರೆ ಅಭ್ಯರ್ಥಿಗಳಿಗಿಂತ ನೋಟಾ ವೋಟೆ ಹೆಚ್ಚಾಗಿದೆ.

ಉಳಿದಂತೆ ತಿ.ನರಸೀಪುರದಲ್ಲಿ 1,335, ಕೃಷ್ಣರಾಜದಲ್ಲಿ1,306, ನರಸಿಂಹರಾಜದಲ್ಲಿ1,209, ಎಚ್‌.ಡಿ.ಕೋಟೆಯಲ್ಲಿ 1,184, ಚಾಮರಾಜದಲ್ಲಿ1,181, ಹುಣಸೂರಿನಲ್ಲಿ894, ವರುಣ ಕ್ಷೇತ್ರದಲ್ಲಿ634, ಪಿರಿಯಾಪಟ್ಟಣದಲ್ಲಿ 621 ಹಾಗೂ ಕೆ.ಆರ್‌.ನಗರ ಕ್ಷೇತ್ರದಲ್ಲಿ 539 ಮತದಾರರು ಯಾವುದೇ ಅಭ್ಯರ್ಥಿಗಳಿಗೆ ಮಣೆ ಹಾಕದೆ ನೋಟಾ ಬಟನ್‌ ಒತ್ತುವ ಮೂಲಕ ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

lokesh

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

5 hours ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

8 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

9 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

9 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

10 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

10 hours ago