ಮೈಸೂರು

ವೀರ ಸಾವಾರ್ಕರ್ ಯುವ ಬಳಗದ ವತಿಯಿಂದ ೧೪೪ ನೇ ಸಾವಾರ್ಕರ್ ಜಯಂತಿ ಆಚರಣೆ

ಮೈಸೂರು : ವೀರ ಸಾವಾರ್ಕರ್ ಯುವ ಬಳಗದ ವತಿಯಿಂದ ಇಂದು ಸಾವಾರ್ಕರ್ ರವರ ೧೪೪ ನೇ ಜಯಂತಿಯನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ವೀರ ಸಾವರ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅಮರ್ ರಹೇ, ಅಮರ್ ರಹೇ ವೀರ ಸಾವರ್ಕರ್ ಅಮರ ರಹೇ ಎಂದು ವಿವಿಧ ಘೋಷಣೆ ಕೂಗುತ್ತಾ ಆಚರಿಸಲಾಯಿತು.

ಇದೆ ಸಂದರ್ಭದಲ್ಲಿ ಶ್ರೀರಾಮ ಸೇನೆ ಯ ರಾಜ್ಯ ಕಾರ್ಯದರ್ಶಿಗಳಾದ ಸಂಜಯ್ ಮಾತನಾಡಿ, ವೀರ ಸಾವರ್ಕರ್ ರವರು 2 ಬಾರಿ ಅನುಭವಿಸಿದ ಕರಿನೀರ ಶಿಕ್ಷೆ ಯನ್ನು ಇಂದಿನ ಯುವ ಪೀಳಿಗೆ ನೆನೆಯಬೇಕಿದೆ, ಹಾಗೆ ಸ್ವಾತಂತ್ರ ಹೋರಾಟಕ್ಕೆ ಕ್ರಾಂತಿಕಾರಿಗಳ
ಕೊಡುಗೆ ಮರೆಯಬಾರದು ಎಂದು ತಿಳಿಸಿದರು

ನಂತರ ಮಾತನಾಡಿದ ಯುವ ಮುಖಂಡ ಮಧು ಸೋಮಶೇಖರ್ ಇಂದಿನ ಯುವಕರು ಹೆಚ್ಚು ಸ್ವತಂತ್ರ ಕ್ಕೆ ಹೋರಾಡಿದವರ ಬಗ್ಗೆ ತಿಳಿಯಬೇಕು ಅವರ ಪುಸ್ತಕಗಳನ್ನು ಖರಿದಿಸಿ ಓದಬೇಕು ಚಿಕ್ಕ ವಯಸ್ಸಿನಲ್ಲೆ ನಾವು ದೇಶಾಭಿಮಾನ ಹೆಚ್ಚಿಸುವಂತಹ ಶಾಲೆಗಳಲ್ಲಿ ಕೆಲಸವಾಗಬೇಕಿದೆ ಇದಕ್ಕೆ ನಮಗೆ ಇಸ್ರೇಲ್ ದೇಶ ಮಾದರಿಯಾಗಿ ತೆಗೆದುಕೊಳ್ಳಬೇಕು, ಹಾಗೆ ಸ್ವತಂತ್ರ ಕ್ಕೆ ಹೊರಾಡಿದ ಯಾವುದೆ ವ್ಯಕ್ತಿ ಇರಲಿ ಅವರ ಬಗ್ಗೆ ಗೌರವ ಇಟ್ಟುಕೊಳ್ಳ ಬೇಕಿದೆ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ವೀರ ಸಾವರ್ಕರ್ ಯುವ ಬಳಗದ ಸಂದೇಶ್ ಪವಾರ್, ಮಹೇಶ್ ರಾಜೇ ಅರಸ್, ವಿಕ್ರಂ ಅಯ್ಯಂಗಾರ್, ಮನೋಜ್, ಪ್ರಮೋದ್ ಗೌಡ, ಅಭಿಷೇಕ್ ಗೌಡ,ರವಿ, ಕಾರ್ತಿಕ್ ಸಿದ್ದೇಗೌಡ, ಚಂದನ್ ಗೌಡ, ರಂಗರಾಜು ಬಳಗದ ಮತ್ತಿತ್ತರು ಭಾಗವಹಿಸಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

3 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

3 hours ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

3 hours ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

3 hours ago

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

3 hours ago